ಬ್ರೇಕಿಂಗ್ ನ್ಯೂಸ್
01-11-25 07:25 pm HK News Desk ಕ್ರೈಂ
ತಿರುವನಂತಪುರಂ, ನ.1 : ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ನಾಪತ್ತೆ ಪ್ರಕರಣ ಸಂಬಂಧಿಸಿ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ದೇಗುಲದ ಮಾಜಿ ಕಾರ್ಯ ನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್ ಅವರನ್ನು ಬಂಧಿಸಿದೆ. ದೇವಾಲಯದ ವಿಗ್ರಹಗಳಿಗೆ ಚಿನ್ನ ಲೇಪನದಲ್ಲಿ ಪಿತೂರಿ ನಡೆಸಿದ್ದಾರೆಂಬ ಆರೋಪದಲ್ಲಿ ಎಸ್ಐಟಿ ಬಂಧಿಸಿದ್ದು ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೇರಿದೆ.
ತನಿಖಾ ತಂಡದ ಪ್ರಕಾರ, ಸುಧೀಶ್ ದೇವಾಲಯದ ಫಲಕಗಳನ್ನು ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಗೆ ಹಸ್ತಾಂತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ವೇಳೆ, ಮೂಲ ಚಿನ್ನ ಲೇಪಿತ ಫಲಕಗಳನ್ನು ತಾಮ್ರ ಫಲಕಗಳೆಂದು ತಪ್ಪಾಗಿ ನಿರೂಪಿಸಲಾಗಿದೆ. ಸುಧೀಶ್ ಮತ್ತು ಇತರ ಆರೋಪಿಗಳು ಸೇರಿಕೊಂಡು ಫಲಕಗಳನ್ನು ತಾಮ್ರ ಲೇಪಿತ ಎಂದು ಉಲ್ಲೇಖಿಸಿ ಶಿಫಾರಸು ಪತ್ರವನ್ನು ಬರೆದಿದ್ದಾರೆ.
1998-99ಕ್ಕೂ ಹಿಂದಿನ ಗರ್ಭಗುಡಿ ಮತ್ತು ಇತರ ವಿಗ್ರಹಗಳಿಗೆ ಚಿನ್ನದ ಲೇಪನ ಮಾಡಿದ ಸಮಯದಲ್ಲಿ ತಿರುವಾಂಕೂರು ದೇವಸ್ವಂ ಮಂಡಳಿಯ ಪ್ರಧಾನ ಕಚೇರಿಯಿಂದ ತನಿಖಾ ತಂಡ ದಾಖಲೆಗಳನ್ನು ಸಂಗ್ರಹಿಸಿದೆ. ಕಾಣೆಯಾದ ಚಿನ್ನ ಎಷ್ಟು ಎಂಬುದನ್ನು ನಿರ್ಧರಿಸಲು ಈ ದಾಖಲೆಗಳನ್ನು ತಾಳೆ ಹಾಕಿ ನೋಡಲಾಗುತ್ತದೆ.
ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ಕಸ್ಟಡಿಯಲ್ಲಿದ್ದ ದೇವಸ್ವಂ ಮಾಜಿ ಆಡಳಿತ ಅಧಿಕಾರಿ ಮುರಾರಿ ಬಾಬು ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನವೆಂಬರ್ 13ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
The Special Investigation Team (SIT) probing the Sabarimala Ayyappa Temple gold theft case has arrested former Executive Officer (CEO) Sudheesh Kumar in connection with the disappearance of gold used for plating temple idols and structures. With his arrest, the total number of accused taken into custody has risen to three, officials confirmed.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm