ಬ್ರೇಕಿಂಗ್ ನ್ಯೂಸ್
04-11-25 02:11 pm Mangalore Correspondent ಕ್ರೈಂ
ಮಂಗಳೂರು, ನ.4 : ನಕಲಿ ಷೇರು ಮಾರುಕಟ್ಟೆಯನ್ನು ನಂಬಿ ಹೂಡಿಕೆ ಮಾಡಿದ ಮಂಗಳೂರಿನ ಯುವಕನೊಬ್ಬ ಬರೋಬ್ಬರಿ 32 ಲಕ್ಷ ರೂ. ಹಣ ಕಳಕೊಂಡ ಘಟನೆ ನಡೆದಿದ್ದು, ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
35 ವರ್ಷದ ಮಂಗಳೂರಿನ ಯುವಕ ಮೊಬೈಲ್ ನಲ್ಲಿ ಫೇಸ್ಬುಕ್ ನೋಡುತ್ತಿದ್ದಾಗ ಕಾವ್ಯ ಶೆಟ್ಟಿ ಹೆಸರಲ್ಲಿ ಯುವತಿಯೊಬ್ಬಳು ಪರಿಚಯ ಆಗಿದ್ದಳು. ತಾನು ಮುಂಬೈನಲ್ಲಿ ಷೇರ್ ಟ್ರೇಡಿಂಗ್ ಕೆಲಸ ಮಾಡಿಕೊಂಡಿರುವುದಾಗಿ ತಿಳಿಸಿದ್ದು ಟ್ರೇಡಿಂಗ್ ನಲ್ಲಿ ಕೆಲಸ ಮಾಡಿದರೆ ಹೆಚ್ಚಿನ ಲಾಭಾಂಶ ಬರುವುದಾಗಿ ತಿಳಿಸಿದ್ದಾರೆ.
ಆಕೆ ಬಳಿಕ ವಾಟ್ಸಾಪ್ ನಂಬರ್ ನಿಂದ ಪಿರ್ಯಾದಿದಾರರಿಗೆ h5.capdynglobal.org ಎಂಬ ಲಿಂಕ್ ಕಳುಹಿಸಿ ಜಾಯಿನ್ ಆಗಲು ತಿಳಿಸಿದ್ದರು. ಸದ್ರಿ ಲಿಂಕ್ ಒತ್ತಿದಾಗ capdynglobal ಎಂಬ ಟ್ರೇಡಿಂಗ್ ಆ್ಯಪ್ ಓಪನ್ ಆಗಿತ್ತು. ತನ್ನ ಇ- ಮೇಲ್ ಐಡಿ ಹಾಗೂ ವೈಯಕ್ತಿಕ ವಿವರಗಳನ್ನು ನಮೂದಿಸಿ ಸದ್ರಿ ಟ್ರೇಡಿಂಗ್ ಆಪ್ ನಲ್ಲಿ ಜಾಯಿನ್ ಆಗಿದ್ದರು. ಟ್ರೇಡಿಂಗ್ ನಲ್ಲಿ ಶೇರು ಪರ್ಚೇಸ್ ಮಾಡಲು ರೂ. 40,000/- ಹಣ ಪಾವತಿ ಮಾಡುವಂತೆ ತಿಳಿಸಿದ್ದು, ಅದರಂತೆ ಸೆ.13ರಂದು ಫೋನ್ ಫೇ ಮಾಡಿರುತ್ತಾರೆ. ಇದಕ್ಕೆ ಲಾಭಾಂಶವಾಗಿ ಇವರ ಖಾತೆಗೆ ರೂ. 9,504/- ಹಣ ಜಮೆ ಆಗಿರುತ್ತದೆ. ನಂತರ 2,00,000/- ರೂ. ಹಣ ಹಾಕಿದಾಗ ಇದಕ್ಕೆ ಲಾಭಾಂಶವಾಗಿ 23,760/- ರೂ ಹಣ ಜಮೆ ಆಗಿರುತ್ತದೆ.
ಇದರಿಂದ ಸದ್ರಿ ಶೇರು ಮಾರ್ಕೆಟ್ ನಲ್ಲಿ ಪಿರ್ಯಾದಿದಾರರಿಗೆ ನಂಬಿಕೆ ಉಂಟಾಗಿ ಹೆಚ್ಚಿನ ಲಾಭಾಂಶ ಪಡೆಯುವ ಉದ್ದೇಶದಿಂದ ಅವರು ತಿಳಿಸಿದ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 32,06,880/-ರೂ. ಹಣವನ್ನು 13-09-2025 ರಿಂದ 24-10-2025 ರ ವರೆಗೆ ಅಪರಿಚಿತ ವ್ಯಕ್ತಿ ನೀಡಿದ ಬೇರೆ ಬೇರೆ ಹಣ ವರ್ಗಾವಣೆ ಮಾಡಿರುತ್ತಾರೆ. ಬಳಿಕ ಹಣ ವಂಚನೆಯಾದ ಬಗ್ಗೆ ಯುವಕನಿಗೆ ತಿಳಿದಿದ್ದು ಅಪರಿಚಿತರು ನಕಲಿ ಶೇರ್ ಮಾರ್ಕೆಟಿಂಗ್ ಇನ್ ವೆಸ್ಟ್ ಮೆಂಟ್ ಹೆಸರಿನಲ್ಲಿ ಆನ್ ಲೈನ್ ಮೂಲಕ ಪಿರ್ಯಾದಿದಾರರಿಂದ ಮೋಸದಿಂದ ಹಣ ವರ್ಗಾಯಿಸಿಕೊಂಡು ಆನ್ ಲೈನ್ ವಂಚನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ.
A 35-year-old man from Mangaluru lost ₹32 lakh after falling victim to an online investment scam operated through a fake stock trading platform. The incident has been registered at the city’s Cyber Crime Police Station.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm