ಬ್ರೇಕಿಂಗ್ ನ್ಯೂಸ್
            
                        04-11-25 02:11 pm Mangalore Correspondent ಕ್ರೈಂ
            ಮಂಗಳೂರು, ನ.4 : ನಕಲಿ ಷೇರು ಮಾರುಕಟ್ಟೆಯನ್ನು ನಂಬಿ ಹೂಡಿಕೆ ಮಾಡಿದ ಮಂಗಳೂರಿನ ಯುವಕನೊಬ್ಬ ಬರೋಬ್ಬರಿ 32 ಲಕ್ಷ ರೂ. ಹಣ ಕಳಕೊಂಡ ಘಟನೆ ನಡೆದಿದ್ದು, ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
35 ವರ್ಷದ ಮಂಗಳೂರಿನ ಯುವಕ ಮೊಬೈಲ್ ನಲ್ಲಿ ಫೇಸ್ಬುಕ್ ನೋಡುತ್ತಿದ್ದಾಗ ಕಾವ್ಯ ಶೆಟ್ಟಿ ಹೆಸರಲ್ಲಿ ಯುವತಿಯೊಬ್ಬಳು ಪರಿಚಯ ಆಗಿದ್ದಳು. ತಾನು ಮುಂಬೈನಲ್ಲಿ ಷೇರ್ ಟ್ರೇಡಿಂಗ್ ಕೆಲಸ ಮಾಡಿಕೊಂಡಿರುವುದಾಗಿ ತಿಳಿಸಿದ್ದು ಟ್ರೇಡಿಂಗ್ ನಲ್ಲಿ ಕೆಲಸ ಮಾಡಿದರೆ ಹೆಚ್ಚಿನ ಲಾಭಾಂಶ ಬರುವುದಾಗಿ ತಿಳಿಸಿದ್ದಾರೆ.
ಆಕೆ ಬಳಿಕ ವಾಟ್ಸಾಪ್ ನಂಬರ್ ನಿಂದ ಪಿರ್ಯಾದಿದಾರರಿಗೆ h5.capdynglobal.org ಎಂಬ ಲಿಂಕ್ ಕಳುಹಿಸಿ ಜಾಯಿನ್ ಆಗಲು ತಿಳಿಸಿದ್ದರು. ಸದ್ರಿ ಲಿಂಕ್ ಒತ್ತಿದಾಗ capdynglobal ಎಂಬ ಟ್ರೇಡಿಂಗ್ ಆ್ಯಪ್ ಓಪನ್ ಆಗಿತ್ತು. ತನ್ನ ಇ- ಮೇಲ್ ಐಡಿ ಹಾಗೂ ವೈಯಕ್ತಿಕ ವಿವರಗಳನ್ನು ನಮೂದಿಸಿ ಸದ್ರಿ ಟ್ರೇಡಿಂಗ್ ಆಪ್ ನಲ್ಲಿ ಜಾಯಿನ್ ಆಗಿದ್ದರು. ಟ್ರೇಡಿಂಗ್ ನಲ್ಲಿ ಶೇರು ಪರ್ಚೇಸ್ ಮಾಡಲು ರೂ. 40,000/- ಹಣ ಪಾವತಿ ಮಾಡುವಂತೆ ತಿಳಿಸಿದ್ದು, ಅದರಂತೆ ಸೆ.13ರಂದು ಫೋನ್ ಫೇ ಮಾಡಿರುತ್ತಾರೆ. ಇದಕ್ಕೆ ಲಾಭಾಂಶವಾಗಿ ಇವರ ಖಾತೆಗೆ ರೂ. 9,504/- ಹಣ ಜಮೆ ಆಗಿರುತ್ತದೆ. ನಂತರ 2,00,000/- ರೂ. ಹಣ ಹಾಕಿದಾಗ ಇದಕ್ಕೆ ಲಾಭಾಂಶವಾಗಿ 23,760/- ರೂ ಹಣ ಜಮೆ ಆಗಿರುತ್ತದೆ.
ಇದರಿಂದ ಸದ್ರಿ ಶೇರು ಮಾರ್ಕೆಟ್ ನಲ್ಲಿ ಪಿರ್ಯಾದಿದಾರರಿಗೆ ನಂಬಿಕೆ ಉಂಟಾಗಿ ಹೆಚ್ಚಿನ ಲಾಭಾಂಶ ಪಡೆಯುವ ಉದ್ದೇಶದಿಂದ ಅವರು ತಿಳಿಸಿದ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 32,06,880/-ರೂ. ಹಣವನ್ನು 13-09-2025 ರಿಂದ 24-10-2025 ರ ವರೆಗೆ ಅಪರಿಚಿತ ವ್ಯಕ್ತಿ ನೀಡಿದ ಬೇರೆ ಬೇರೆ ಹಣ ವರ್ಗಾವಣೆ ಮಾಡಿರುತ್ತಾರೆ. ಬಳಿಕ ಹಣ ವಂಚನೆಯಾದ ಬಗ್ಗೆ ಯುವಕನಿಗೆ ತಿಳಿದಿದ್ದು ಅಪರಿಚಿತರು ನಕಲಿ ಶೇರ್ ಮಾರ್ಕೆಟಿಂಗ್ ಇನ್ ವೆಸ್ಟ್ ಮೆಂಟ್ ಹೆಸರಿನಲ್ಲಿ ಆನ್ ಲೈನ್ ಮೂಲಕ ಪಿರ್ಯಾದಿದಾರರಿಂದ ಮೋಸದಿಂದ ಹಣ ವರ್ಗಾಯಿಸಿಕೊಂಡು ಆನ್ ಲೈನ್ ವಂಚನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ.
            
            
            A 35-year-old man from Mangaluru lost ₹32 lakh after falling victim to an online investment scam operated through a fake stock trading platform. The incident has been registered at the city’s Cyber Crime Police Station.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm