ಬ್ರೇಕಿಂಗ್ ನ್ಯೂಸ್
28-12-20 11:13 pm Mangaluru Correspondent ಕ್ರೈಂ
ಮಂಗಳೂರು, ಡಿ.28: ಫೇಸ್ಬುಕ್ ಮೂಲಕ ಪರಿಚಯ ಆಗಿದ್ದ ವ್ಯಕ್ತಿಯ ಮಾತು ನಂಬಿ ಮಹಿಳೆಯೊಬ್ಬರು 13 ಲಕ್ಷ ರೂಪಾಯಿ ಕಳಕೊಂಡ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಕ್ಕೂರಿನ ಜೂಲಿಯಾ ಸ್ಯಾಂಟೋಸ್ ಎಂಬ ಮಹಿಳೆಗೆ ಕಳೆದ ಅಕ್ಟೋಬರ್ ತಿಂಗಳಲ್ಲಿ ಫೇಸ್ಬುಕ್ ನಲ್ಲಿ ಡಾ.ಜಿಮ್ ಕಿಯಾ ಎಂಬ ಹೆಸರಲ್ಲಿ ವ್ಯಕ್ತಿಯೊಬ್ಬ ಫ್ರೆಂಡ್ ರಿಕ್ವೆಸ್ಟ್ ಕಳಿಸಿದ್ದ. ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಗೆಳೆಯನಾಗಿಸಿದ ಬಳಿಕ ಅವರಿಬ್ಬರು ಚಾಟಿಂಗ್ ನಡೆಸುತ್ತಿದ್ದರು. ಇತ್ತೀಚೆಗೆ ಮಹಿಳೆಯ ಮಗಳಿಗೆ ದೊಡ್ಡ ಗಿಫ್ಟ್ ನೀಡುವುದಾಗಿ ಸಂದೇಶ ಕಳಿಸಿದ್ದ.

ಆನಂತರ ಬೇರೆಯದ್ದೇ ವ್ಯಕ್ತಿಯೊಬ್ಬ ತಾನು ಕಸ್ಟಮ್ಸ್ ಇಲಾಖೆಯಿಂದ ಕರೆ ಮಾಡುತ್ತಿರುವುದಾಗಿ ಹೇಳಿ, ತಮ್ಮ ಗಿಫ್ಟ್ ಬಂದಿದ್ದು ಅದನ್ನು ಕಳುಹಿಸಲು ಒಂದಷ್ಟು ಶುಲ್ಕ ಆಗುತ್ತದೆ ಎಂದಿದ್ದಾನೆ. ಅದರಂತೆ, ಬೇರೆ ಬೇರೆ ಖಾತೆಗಳಿಗೆ ಹಣ ರವಾನೆ ಮಾಡಲು ಸೂಚಿಸಿದ್ದಾನೆ. ಮಹಿಳೆ, ಒಂದೊಂದೇ ಖಾತೆಗೆ ಹಣ ರವಾನಿಸಿದ್ದು ಒಟ್ಟು 13.35 ಲಕ್ಷ ರೂ. ಹಣವನ್ನು ಕಳುಹಿಸಿದ್ದಾರೆ. ಹಣ ಕಳಿಸಿದ ಬಳಿಕವೂ, ಗಿಫ್ಟ್ ಬರದೇ ಇರದಿರುವುದನ್ನು ಅರಿತ ಮಹಿಳೆ ತಾವು ಮೋಸ ಹೋಗಿರುವುದನ್ನು ಅರಿತು ಪೊಲೀಸರ ಬಳಿಗೆ ಬಂದಿದ್ದಾರೆ. ಪೊಲೀಸರ ಸೂಚನೆಯಂತೆ, ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅತ್ತ ಡಾ. ಜಿಮ್ ಕಿಯಾ ನೀಡುತ್ತೇನೆಂದಿದ್ದ ಗಿಫ್ಟೂ ಇಲ್ಲ. ಇತ್ತ ಕಳುಹಿಸಿದ ಹಣವೂ ಇಲ್ಲ.
A woman from Mangalore was allegedly duped of Rs 13 lakhs by a person she met on Facebook, who claimed from the UK. A person who claimed to be a customs officer demanded a fee to get the parcel released.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am