ಬ್ರೇಕಿಂಗ್ ನ್ಯೂಸ್
07-11-25 08:05 pm HK News Desk ಕ್ರೈಂ
ಕಲಬುರಗಿ, ನ.7 : ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ.. ಯಾರಿಗೂ ಗೊತ್ತಾಗದಂತೆ ಡಬಲ್ ಪಾರ್ಟ್ ಮಾಡುತ್ತಿದ್ದ ಮನೆಗಳ್ಳನನ್ನು ಕಲಬುರಗಿ ನಗರದ ವಿವಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯ ಜಿಲಾನಾಬಾದ್ ಕಾಲೋನಿ ನಿವಾಸಿ ಮಹ್ಮದ್ ಆರೀಫ್ ಅಲಿ(50) ಎನ್ನುವಾತನೇ ಬಂಧಿತ ಮನೆಗಳ್ಳ.
ಕಲಬುರಗಿ ನಗರದಲ್ಲಿ ಮಸೀದಿಯೊಂದರಲ್ಲಿ ಅರೆಬಿಕ್ ಶಿಕ್ಷಕ (ಕುರಾನ್ ಬೋಧಕ) ನಾಗಿ ಆರಿಫ್ ಕೆಲಸ ಮಾಡುತ್ತಿದ್ದ. ಹಗಲಲ್ಲಿ ಕುರಾನ್ ಬೋಧಕ, ರಾತ್ರಿಯಾಗುತ್ತಿದ್ದಂತೆ ಮನೆ ಕಳ್ಳನಾಗುತ್ತಿದ್ದ. ಮಧ್ಯಾಹ್ನ ಮತ್ತು ಸಂಜೆ ಕೆಲಸದ ಬಿಡುವಿನ ವೇಳೆ ಬಡಾವಣೆ ಸುತ್ತಾಡಿ, ಬೀಗ ಹಾಕಿರುವ ಮನೆಗಳನ್ನು ಗುರುತಿಸುತ್ತಿದ್ದ. ನಸುಕಿನ 3 ಗಂಟೆ ಸುಮಾರಿಗೆ ಎಲ್ಲರೂ ಗಾಢ ನಿದ್ರೆಯಲ್ಲಿರುವಾಗ ಬೀಗ ಹಾಕಿದ ಮನೆಗಳಿಗೆ ಹೋಗಿ ರಾಡ್ ನಿಂದ ಬೀಗ ಮುರಿದು ಮನೆ ದೋಚುತ್ತಿದ್ದ.
ಕಳ್ಳತನ ಮಾಡಿದ್ದ 13.41 ಲಕ್ಷ ರೂಪಾಯಿ ಮೌಲ್ಯದ 100 ಗ್ರಾಮ್ ಚಿನ್ನದ ಆಭರಣಗಳು, 16 ಸಾವಿರ ರೂಪಾಯಿ ಮೌಲ್ಯದ 200 ಗ್ರಾಮ ಬೆಳ್ಳಿ, 25 ಸಾವಿರ ರೂಪಾಯಿ ಮೌಲ್ಯದ ಒಂದು ಬೈಕನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಸಿಕ್ಕಿಬಿದ್ದಿದ್ದೇ ರೋಚಕ
ಕಲಬುರಗಿಯ ವಿವಿ ಠಾಣಾ ವ್ಯಾಪ್ತಿಯ ಕೆಲವು ಬಡಾವಣೆಗಳಲ್ಲಿ ಇತ್ತೀಚಿಗೆ ಮನೆಗಳ್ಳತನ ಪ್ರಕರಣಗಳು ಹೆಚ್ಚಾಗಿದ್ದವು. ಕಳವು ಪ್ರಕರಣಗಳ ತನಿಖೆಗಿಳಿದ ಪೊಲೀಸರಿಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಹಗಲು ಮತ್ತು ರಾತ್ರಿ ಹೊತ್ತಲ್ಲಿ ಬಡಾವಣೆ ಒಳಗಡೆ ಆರೀಫ್ ಅಲಿ ಬೈಕ್ ಮೇಲೆ ಸಂಚರಿಸುವ ಸಿಸಿ ಟಿವಿ ದೃಶ್ಯಗಳ ನೋಡಿ ಅನುಮಾನ ಬಂದಿತ್ತು. ನಂತರ ಈತನ ಚಲನ ವಲನಗಳ ಮೇಲೆ ಪೊಲೀಸರು ತೀವ್ರ ನಿಗಾ ಇಟ್ಟಿದ್ದರು. ಅನುಮಾನ ದೃಢವಾಗುತ್ತಿದ್ದಂತೆ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದು ಸತ್ಯ ಒಪ್ಪಿಕೊಂಡಿದ್ದಾನೆ.
ಇತ್ತಿಚಿಗೆ ವಿವಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಮೂರು ಮನೆಗಳ್ಳತನ ಕೃತ್ಯ ಮಾಡಿದ್ದು ತಾನೇ ಎಂದು ಆರಿಫ್ ಆಲಿ ಒಪ್ಪಿಕೊಂಡಿದ್ದಾನೆ. ಮಸೀದಿಯಲ್ಲಿ ಕುರಾನ್ ಬೋಧನೆಯಿಂದ 12 ಸಾವಿರ ಸಂಬಳ ಬರುತ್ತಿದ್ದು ಅದು ಜೀವನ ನಿರ್ವಹಣೆಗೆ ಸಾಲದ್ದಕ್ಕೆ ಈ ಕೆಲಸಕ್ಕೆ ಇಳಿದಿದ್ದಾಗಿ ಹೇಳಿಕೊಂಡಿದ್ದಾನೆ.
In a shocking revelation, Kalaburagi city police arrested a Quran teacher who turned into a house burglar by night, leading a double life for months without raising suspicion. The accused, Mohammed Arif Ali (50), a resident of Zilanabad Colony, worked as an Arabic instructor at a local mosque during the day and carried out house thefts at night.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm