ಬ್ರೇಕಿಂಗ್ ನ್ಯೂಸ್
08-11-25 04:08 pm Mangaluru Staff ಕ್ರೈಂ
ಬಂಟ್ವಾಳ, ನ.7: ವಾಟ್ಸ್ಆ್ಯಪ್ ಮೂಲಕ ಮಹಿಳೆಯೊಬ್ಬರಿಗೆ ವಿಡಿಯೋ ಕರೆ ಮಾಡಿ ಬೆದರಿಕೆ ಹಾಕಿ, ಡಿಜಿಟಲ್ ಅರೆಸ್ಟ್ ಮಾಡಿ ಬಳಿಕ ಸುಮಾರು 1.16 ಕೋಟಿ ರೂ. ಲಪಟಾಯಿಸಿದ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.24ರಂದು ಬೆಳಗ್ಗೆ ಮಹಿಳೆ ಮನೆಯಲ್ಲಿದ್ದ ಸಮಯ ವಾಟ್ಸ್ಆ್ಯಪ್ ಮೂಲಕ ವಿಡಿಯೊ ಕರೆ ಬಂದಿದ್ದು, ಟೆಲಿ ಕಮ್ಯುನಿಕೇಶನ್ ಡಿಪಾರ್ಟ್ಮೆಂಟ್ ದಿಲ್ಲಿಯಿಂದ ಮಾತನಾಡುವುದಾಗಿ ಹೇಳಿದ್ದರು. ನಿಮ್ಮ ಹೆಸರಿನಲ್ಲಿರುವ ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಬಳಸಿ ಮೊಬೈಲ್ ನಂಬರ್ ಖರೀದಿಸಿ ದಿಲ್ಲಿಯಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಜಾಹೀರಾತು ಹಾಗೂ ಕಿರುಕುಳದ ಸಂದೇಶಗಳನ್ನು ಕಳುಹಿಸಿದ್ದೀರಿ ಎಂದು ತಿಳಿಸಿದ್ದಾರೆ.
ಅಲ್ಲದೆ ನಾನಾ ಮೊಬೈಲ್ ನಂಬರ್ಗಳಿಂದ ಆರೋಪಿಗಳು ವಿಡಿಯೋ ಕರೆ ಮಾಡಿ, ನಿಮ್ಮ ಮೇಲೆ ಕಾಂಬೋಡಿಯಾ ಹಾಗೂ ಮಂಗೋಲಿಯಾ ದೇಶಗಳಿಗೆ ಮಕ್ಕಳನ್ನು ಕಳ್ಳಸಾಗಣಿಕೆ ಮಾಡಿ ಹಣ ವರ್ಗಾವಣೆ ನಡೆಸಿದ ಬಗ್ಗೆ ಪ್ರಕರಣ ದಾಖಲಾಗಿದೆ ಎಂಬುದಾಗಿ ಹೆದರಿಸಿದ್ದು ನಿಮ್ಮನ್ನು ತನಿಖೆಯ ಸಲುವಾಗಿ ಡಿಜಿಟಲ್ ಅರೆಸ್ಟ್ ಮಾಡಿದ್ದಾಗಿ ತಿಳಿಸಿದ್ದರು. ಬ್ಯಾಂಕ್ ಖಾತೆಗಳ ಬಗ್ಗೆ ಮಾಹಿತಿಯನ್ನೂ ಕೇಳಿದ್ದು ನೀವು ಹಣ ಕೊಟ್ಟರೆ ಕೇಸಿನಿಂದ ಬಚಾವ್ ಮಾಡುವುದಾಗಿ ಹೇಳಿ ನಂಬಿಸಿದ್ದಾರೆ.
ಇದರಿಂದ ಆತಂಕಕ್ಕೆ ಒಳಗಾದ ಮಹಿಳೆ ತಾನು ಜಾಗ ಮಾರಿ ಬ್ಯಾಂಕ್ನಲ್ಲಿ ಎಫ್ಡಿ ಇಟ್ಟಿದ್ದ ಹಣವನ್ನು ಹಿಂಪಡೆದು ಸೆ.29ರಿಂದ ಅ.10ರ ವರೆಗೆ ಅಪರಿಚಿತ ವ್ಯಕ್ತಿಗಳು ಸೂಚಿಸಿದ ಹಲವು ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 1.16 ಕೋಟಿ ರೂ. ಹಣವನ್ನು ವರ್ಗಾಯಿಸಿದ್ದಾರೆ. ಬಳಿಕ ತಾನು ಮೋಸ ಹೋಗಿರುವುದು ಅರಿವಿಗೆ ಬಂದಿದ್ದು, ಈ ಬಗ್ಗೆ ಸೆನ್ ಠಾಣೆಗೆ ದೂರು ನೀಡಿದ್ದಾರೆ.
A woman from Bantwal has reportedly fallen victim to a massive online scam in which fraudsters posing as officials threatened her with a fake “digital arrest,” extorting a total of ₹1.16 crore. The case has been registered at the Cyber Economic and Narcotic (CEN) Police Station in Mangaluru.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm