ಬ್ರೇಕಿಂಗ್ ನ್ಯೂಸ್
08-11-25 04:08 pm Mangaluru Staff ಕ್ರೈಂ
ಬಂಟ್ವಾಳ, ನ.7: ವಾಟ್ಸ್ಆ್ಯಪ್ ಮೂಲಕ ಮಹಿಳೆಯೊಬ್ಬರಿಗೆ ವಿಡಿಯೋ ಕರೆ ಮಾಡಿ ಬೆದರಿಕೆ ಹಾಕಿ, ಡಿಜಿಟಲ್ ಅರೆಸ್ಟ್ ಮಾಡಿ ಬಳಿಕ ಸುಮಾರು 1.16 ಕೋಟಿ ರೂ. ಲಪಟಾಯಿಸಿದ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.24ರಂದು ಬೆಳಗ್ಗೆ ಮಹಿಳೆ ಮನೆಯಲ್ಲಿದ್ದ ಸಮಯ ವಾಟ್ಸ್ಆ್ಯಪ್ ಮೂಲಕ ವಿಡಿಯೊ ಕರೆ ಬಂದಿದ್ದು, ಟೆಲಿ ಕಮ್ಯುನಿಕೇಶನ್ ಡಿಪಾರ್ಟ್ಮೆಂಟ್ ದಿಲ್ಲಿಯಿಂದ ಮಾತನಾಡುವುದಾಗಿ ಹೇಳಿದ್ದರು. ನಿಮ್ಮ ಹೆಸರಿನಲ್ಲಿರುವ ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಬಳಸಿ ಮೊಬೈಲ್ ನಂಬರ್ ಖರೀದಿಸಿ ದಿಲ್ಲಿಯಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಜಾಹೀರಾತು ಹಾಗೂ ಕಿರುಕುಳದ ಸಂದೇಶಗಳನ್ನು ಕಳುಹಿಸಿದ್ದೀರಿ ಎಂದು ತಿಳಿಸಿದ್ದಾರೆ.
ಅಲ್ಲದೆ ನಾನಾ ಮೊಬೈಲ್ ನಂಬರ್ಗಳಿಂದ ಆರೋಪಿಗಳು ವಿಡಿಯೋ ಕರೆ ಮಾಡಿ, ನಿಮ್ಮ ಮೇಲೆ ಕಾಂಬೋಡಿಯಾ ಹಾಗೂ ಮಂಗೋಲಿಯಾ ದೇಶಗಳಿಗೆ ಮಕ್ಕಳನ್ನು ಕಳ್ಳಸಾಗಣಿಕೆ ಮಾಡಿ ಹಣ ವರ್ಗಾವಣೆ ನಡೆಸಿದ ಬಗ್ಗೆ ಪ್ರಕರಣ ದಾಖಲಾಗಿದೆ ಎಂಬುದಾಗಿ ಹೆದರಿಸಿದ್ದು ನಿಮ್ಮನ್ನು ತನಿಖೆಯ ಸಲುವಾಗಿ ಡಿಜಿಟಲ್ ಅರೆಸ್ಟ್ ಮಾಡಿದ್ದಾಗಿ ತಿಳಿಸಿದ್ದರು. ಬ್ಯಾಂಕ್ ಖಾತೆಗಳ ಬಗ್ಗೆ ಮಾಹಿತಿಯನ್ನೂ ಕೇಳಿದ್ದು ನೀವು ಹಣ ಕೊಟ್ಟರೆ ಕೇಸಿನಿಂದ ಬಚಾವ್ ಮಾಡುವುದಾಗಿ ಹೇಳಿ ನಂಬಿಸಿದ್ದಾರೆ.
ಇದರಿಂದ ಆತಂಕಕ್ಕೆ ಒಳಗಾದ ಮಹಿಳೆ ತಾನು ಜಾಗ ಮಾರಿ ಬ್ಯಾಂಕ್ನಲ್ಲಿ ಎಫ್ಡಿ ಇಟ್ಟಿದ್ದ ಹಣವನ್ನು ಹಿಂಪಡೆದು ಸೆ.29ರಿಂದ ಅ.10ರ ವರೆಗೆ ಅಪರಿಚಿತ ವ್ಯಕ್ತಿಗಳು ಸೂಚಿಸಿದ ಹಲವು ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 1.16 ಕೋಟಿ ರೂ. ಹಣವನ್ನು ವರ್ಗಾಯಿಸಿದ್ದಾರೆ. ಬಳಿಕ ತಾನು ಮೋಸ ಹೋಗಿರುವುದು ಅರಿವಿಗೆ ಬಂದಿದ್ದು, ಈ ಬಗ್ಗೆ ಸೆನ್ ಠಾಣೆಗೆ ದೂರು ನೀಡಿದ್ದಾರೆ.
A woman from Bantwal has reportedly fallen victim to a massive online scam in which fraudsters posing as officials threatened her with a fake “digital arrest,” extorting a total of ₹1.16 crore. The case has been registered at the Cyber Economic and Narcotic (CEN) Police Station in Mangaluru.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm