ಬ್ರೇಕಿಂಗ್ ನ್ಯೂಸ್
29-12-20 12:03 pm Headline Karnataka News Network ಕ್ರೈಂ
ಮುಂಬೈ, ಡಿ.29: "ರಿಪಬ್ಲಿಕ್ ಟಿವಿ ಮಾಲಕ ಹಾಗೂ ಸಂಪಾದಕ ಅರ್ನಬ್ ಗೋಸ್ವಾಮಿ ಟಿಆರ್ಪಿ ತಿದ್ದಲು ನನಗೆ ಲಂಚ ನೀಡಿದ್ದು ನಿಜ" ಎಂದು ಟಿಆರ್ಪಿ ಹಗರಣದಲ್ಲಿ ಬಂಧಿತನಾಗಿರುವ ಬ್ರಾಡ್ಕಾಸ್ಟ್ ರೀಸರ್ಚ್ ಆಡಿಯನ್ಸ್ ಕೌನ್ಸಿಲ್ (ಬಾರ್ಕ್) ಮಾಜಿ ಸಿಇಓ ಪಾರ್ಥ ದಾಸ್ಗುಪ್ತಾ ಪೊಲೀಸ್ ತನಿಖೆಯ ವೇಳೆ ಬಾಯಿ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.
"ತಮ್ಮ ಚಾನೆಲ್ಗೆ ಅಧಿಕ ಟಿಆರ್ಪಿ ನೀಡುವ ಸಲುವಾಗಿ ಲಕ್ಷಾಂತರ ರೂಪಾಯಿ ನಗದು ಹಾಗೂ ದುಬಾರಿ ವಾಚು ನೀಡಿದ್ದರು" ಎಂದು ವಿಚಾರಣೆ ವೇಳೆ ಪಾರ್ಥ ದಾಸ್ಗುಪ್ತಾ ಅವರು ಮುಂಬೈ ಪೊಲೀಸ್ ಅಧಿಕಾರಿಗಳ ಮುಂದೆ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಪಾರ್ಥ ದಾಸ್ಗುಪ್ತಾ ಮನೆಯಿಂದ ಮೂರು ಕೆಜಿ ಬೆಳ್ಳಿಯನ್ನು ಕೂಡಾ ಮುಂಬೈ ಪೊಲೀಸರು ವಶಪಡಿಸಿಕೊಂಡಿದ್ದಾರೆ. 2013ರಿಂದ 2019ರವರೆಗೆ ದಾಸ್ಗುಪ್ತಾ ಬಿಎಆರ್ಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದರು. ಅರ್ನಬ್ ಗೋಸ್ವಾಮಿ ತಮ್ಮ ಇಂಗ್ಲಿಷ್ ಚಾನೆಲ್ ರಿಪಬ್ಲಿಕ್ ಟಿವಿ ಮತ್ತು ಹಿಂದಿ ಚಾನಲ್ ರಿಪಬ್ಲಿಕ್ ಭಾರತ್ಗೆ ಟಿಆರ್ಪಿ ನೆರವು ನೀಡಲು ನೀಡಿದ ಲಂಚದ ಹಣದಲ್ಲಿ ಈ ಬೆಳ್ಳಿ ಖರೀದಿಸಲಾಗಿದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

ಈ ತಿಂಗಳ 24ರಂದು ಗೋವಾದಿಂದ ಪುಣೆಗೆ ಹೋಗುತ್ತಿದ್ದ ದಾಸ್ಗುಪ್ತಾ (55) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ಟಿಆರ್ಪಿ ರೇಟಿಂಗ್ ಅಕ್ರಮದಲ್ಲಿ ಅರ್ನಬ್ ಗೋಸ್ವಾಮಿ ಜತೆ ದಾಸ್ಗುಪ್ತ ಶಾಮೀಲಾಗಿರುವುದು ದೃಢಪಟ್ಟಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
"ಟಿಆರ್ಪಿ ಮಾಪನಕ್ಕೆ ಬಾರೋಮೀಟರ್ ಅಳವಡಿಸಿದ್ದ ಮನೆಗಳ ಬಗೆಗಿನ ರಹಸ್ಯ ಮಾಹಿತಿಯನ್ನು ದಾಸ್ಗುಪ್ತಾ, ಅರ್ನಬ್ ಜತೆ ಹಂಚಿಕೊಂಡಿದ್ದರು. ಈ ದತ್ತಾಂಶ ಬಳಸಿಕೊಂಡು ಮನೆಮಂದಿಗೆ ಲಂಚ ನೀಡಿ, ಮನೆಮಂದಿಗೆ ಇಂಗ್ಲಿಷ್ ಭಾಷೆಯ ಅರಿವು ಇಲ್ಲದಿದ್ದರೂ ಆ ಚಾನೆಲ್ ಆನ್ ಮಾಡಿ ಇಡುವಂತೆ ಅರ್ನಬ್ ಕೇಳಿಕೊಂಡಿದ್ದರು. ಕೆಲ ಮನೆಗಳು ಮುಚ್ಚಿದ್ದರೂ ಆ ಮನೆಯಲ್ಲಿ ಚಾನಲ್ ಮಾತ್ರ ಆನ್ ಇರುತ್ತಿತ್ತು. ಟಿಆರ್ಪಿ ಹಗರಣದಲ್ಲಿ ಶಾಮೀಲಾದವರ ಸೂಚನೆ ಮೇರೆಗೆ ಹೀಗೆ ಮಾಡಲಾಗುತ್ತಿತ್ತು" ಎಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್ನಲ್ಲಿ ವಿವರಿಸಿದ್ದಾರೆ.
In a remand report submitted before a court on Monday, the Mumbai Police said that Republic TV editor-in-chief Arnab Goswami had paid “lakhs of rupees” to Partho Dasgupta, former CEO of the Broadcast Audience Research Council (BARC), to “increase” the Television Rating Points (TRPs) of the two Republic news channels.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm