ಬ್ರೇಕಿಂಗ್ ನ್ಯೂಸ್
23-11-25 07:17 pm Bangalore Correspondent ಕ್ರೈಂ
ಬೆಂಗಳೂರು, ನ.23 : ಬೆಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣದ ಮಾಹಿತಿಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ದರೋಡೆಗೈದು ಒಯ್ದಿದ್ದ ಹಣವನ್ನು ಆರೋಪಿಗಳು ಹೊಸಕೋಟೆಯ ಪಾಳು ಮನೆಯಲ್ಲಿ ಬಚ್ಚಿಟ್ಟು ಅಲ್ಲಿಂದ ಬೇರೆ ಕಾರಿನಲ್ಲಿ ಪರಾರಿಯಾಗಿದ್ದರು ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ.
ಪೊಲೀಸರ ಶೋಧ ಕಾರ್ಯ ವೇಳೆ ಹೊಸಕೋಟೆ ಕೆರೆ ಬಳಿಯಲ್ಲಿ ಹಣ ತುಂಬಿಸಲಾಗುವ ಪೆಟ್ಟಿಗೆಗಳನ್ನು ಎಸೆದಿದ್ದು ಕಂಡುಬಂದಿತ್ತು. ಅನುಮಾನದ ಮೇಲೆ ಅಲ್ಲಿಯೇ ಪಾಳುಬಿದ್ದ ಮನೆಯ ಬಾಗಿಲು ತೆರೆದು ನೋಡಿದಾಗ ಹಣ ಸಿಕ್ಕಿತ್ತು. ಆರೋಪಿಗಳು ಕಾರು ತೆಗೆದುಕೊಂಡು ಹೊಸಕೋಟೆ ಟೋಲ್ಗೆ ಹೋಗದೇ ಕೆರೆ ಬಳಿ ಹೋಗಿದ್ದರು. ಕೆರೆ ಬಳಿ ಹಣ ಬಚ್ಚಿಟ್ಟು ಬಳಿಕ ಚಿತ್ತೂರು ಕಡೆ ತೆರಳಿದ್ದರು. ಆರೋಪಿಗಳನ್ನು ಬಂಧಿಸಿ ಬೆಂಡೆತ್ತಿದಾಗ ಹೊಸಕೋಟೆಯ ಪಾಳು ಮನೆಯಲ್ಲಿ ಹಣ ಇಟ್ಟಿರೋದಾಗಿ ಬಾಯಿ ಬಿಟ್ಟಿದ್ದರು.


ದರೋಡೆ ತಂಡದ ಸಿಎಂಎಸ್ ವಾಹನದ ಸಿಬಂದಿ ಗೋಪಿಗೆ ತಿಂಗಳಿಗೆ 15 ಸಾವಿರ ರೂಪಾಯಿ ಸಂಬಳ ಸಿಗುತ್ತಿತ್ತು. ದಿನನಿತ್ಯ ಕೋಟ್ಯಂತರ ರೂಪಾಯಿ ಹಣ ನೋಡುತ್ತಿದ್ದ ಗೋಪಿಗೆ, ಹೇಗಾದ್ರು ಒಂದಿಷ್ಟು ಹಣ ಲಪಟಾಯಿಸಬೇಕೆಂಬ ದುರಾಸೆ ಬಂದಿತ್ತು. ಎಟಿಎಂ ತುಂಬಿಸಲು ಹಣ ಸಾಗಿಸುವುದು ತಿಳಿದಿದ್ದ ಗೋಪಿ ಮತ್ತು ಮಾಜಿ ಉದ್ಯೋಗಿ ಕ್ಸೇವಿಯರ್ ಜೊತೆ ಸೇರಿ ದರೋಡೆಗೆ ಪ್ಲಾನ್ ಮಾಡಲು ಕಾನ್ಸ್ಟೇಬಲ್ ಅಣ್ಣಪ್ಪನಿಗೆ ತಿಳಿಸಿದ್ದರು.
ಬಹಳಷ್ಟು ಸ್ಟಡಿ ಮಾಡಿದ ಬಳಿಕ ಕಾನ್ಸ್ಟೇಬಲ್ ಅಣ್ಣಪ್ಪ ದರೋಡೆಗೆ ಪ್ಲಾನ್ ಮಾಡಿದ್ದ. ಕೆಲಸವಿಲ್ಲದೆ ಕುಳಿತಿದ್ದ ರವಿ, ರಾಕೇಶ್, ನವೀನ್ ತಂಡದಲ್ಲಿ ಸೇರಿಕೊಂಡಿದ್ದರು. ಪೊಲೀಸ್ ನಮ್ಮ ಜೊತೆಯಲ್ಲೇ ಇದ್ದಾನೆ ಎಂದು ತಂಡ ದರೋಡೆಗೆ ಸಜ್ಜಾಗಿತ್ತು. ಪಕ್ಕಾ ಪ್ಲಾನ್ ಇದೆ, ಸಿಕ್ಕಿ ಬಿಳಲ್ಲ ಅಂತ ಪೊಲೀಸಪ್ಪನ ಮಾತಿನಂತೆ ಹಾಡಹಗಲೇ ದರೋಡೆಗೆ ಮುಂದಾಗಿದ್ದರು.
ಹಾವೇರಿ ಜಿಲ್ಲೆ ವೀರಾಪುರ ತಾಲೂಕಿನ ಹಳೇ ವೀರಾಪುರ ಗ್ರಾಮದ ಅಣ್ಣಪ್ಪ ನಾಯಕ್ 2018ರಲ್ಲಿ ಪೊಲೀಸ್ ಇಲಾಖೆ ಸೇರಿದ್ದ. ಮೊದಲು ಬಾಣಸವಾಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ಒಂದೂವರೆ ವರ್ಷದಿಂದ ಗೋವಿಂದಪುರ ಠಾಣೆಯಲ್ಲಿದ್ದ. ವೃತ್ತಿ ಜೀವನದಲ್ಲಿ ಅಣ್ಣಪ್ಪ ನಾಯಕ್ ಹಿನ್ನೆಲೆ ಉತ್ತಮವಾಗಿರಲಿಲ್ಲ. ಅಪರಾಧ ಪ್ರಕರಣಗಳಲ್ಲಿ ಪತ್ತೆ ಮಾಡಲು ಹೋಗಿ ಆರೋಪಿಗಳಿಂದಲೇ ವಸೂಲಿ ಮಾಡ್ತಿದ್ದುದು ಪತ್ತೆಯಾಗಿತ್ತು.
Shocking details continue to emerge in the Bengaluru robbery case. Investigation has revealed that after committing the heist, the accused hid the stolen cash inside an abandoned house in Hosakote and fled in another vehicle.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm