ಬ್ರೇಕಿಂಗ್ ನ್ಯೂಸ್
23-11-25 07:17 pm Bangalore Correspondent ಕ್ರೈಂ
ಬೆಂಗಳೂರು, ನ.23 : ಬೆಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣದ ಮಾಹಿತಿಗಳು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ದರೋಡೆಗೈದು ಒಯ್ದಿದ್ದ ಹಣವನ್ನು ಆರೋಪಿಗಳು ಹೊಸಕೋಟೆಯ ಪಾಳು ಮನೆಯಲ್ಲಿ ಬಚ್ಚಿಟ್ಟು ಅಲ್ಲಿಂದ ಬೇರೆ ಕಾರಿನಲ್ಲಿ ಪರಾರಿಯಾಗಿದ್ದರು ಎಂಬುದು ತನಿಖೆಯಲ್ಲಿ ಪತ್ತೆಯಾಗಿದೆ.
ಪೊಲೀಸರ ಶೋಧ ಕಾರ್ಯ ವೇಳೆ ಹೊಸಕೋಟೆ ಕೆರೆ ಬಳಿಯಲ್ಲಿ ಹಣ ತುಂಬಿಸಲಾಗುವ ಪೆಟ್ಟಿಗೆಗಳನ್ನು ಎಸೆದಿದ್ದು ಕಂಡುಬಂದಿತ್ತು. ಅನುಮಾನದ ಮೇಲೆ ಅಲ್ಲಿಯೇ ಪಾಳುಬಿದ್ದ ಮನೆಯ ಬಾಗಿಲು ತೆರೆದು ನೋಡಿದಾಗ ಹಣ ಸಿಕ್ಕಿತ್ತು. ಆರೋಪಿಗಳು ಕಾರು ತೆಗೆದುಕೊಂಡು ಹೊಸಕೋಟೆ ಟೋಲ್ಗೆ ಹೋಗದೇ ಕೆರೆ ಬಳಿ ಹೋಗಿದ್ದರು. ಕೆರೆ ಬಳಿ ಹಣ ಬಚ್ಚಿಟ್ಟು ಬಳಿಕ ಚಿತ್ತೂರು ಕಡೆ ತೆರಳಿದ್ದರು. ಆರೋಪಿಗಳನ್ನು ಬಂಧಿಸಿ ಬೆಂಡೆತ್ತಿದಾಗ ಹೊಸಕೋಟೆಯ ಪಾಳು ಮನೆಯಲ್ಲಿ ಹಣ ಇಟ್ಟಿರೋದಾಗಿ ಬಾಯಿ ಬಿಟ್ಟಿದ್ದರು.


ದರೋಡೆ ತಂಡದ ಸಿಎಂಎಸ್ ವಾಹನದ ಸಿಬಂದಿ ಗೋಪಿಗೆ ತಿಂಗಳಿಗೆ 15 ಸಾವಿರ ರೂಪಾಯಿ ಸಂಬಳ ಸಿಗುತ್ತಿತ್ತು. ದಿನನಿತ್ಯ ಕೋಟ್ಯಂತರ ರೂಪಾಯಿ ಹಣ ನೋಡುತ್ತಿದ್ದ ಗೋಪಿಗೆ, ಹೇಗಾದ್ರು ಒಂದಿಷ್ಟು ಹಣ ಲಪಟಾಯಿಸಬೇಕೆಂಬ ದುರಾಸೆ ಬಂದಿತ್ತು. ಎಟಿಎಂ ತುಂಬಿಸಲು ಹಣ ಸಾಗಿಸುವುದು ತಿಳಿದಿದ್ದ ಗೋಪಿ ಮತ್ತು ಮಾಜಿ ಉದ್ಯೋಗಿ ಕ್ಸೇವಿಯರ್ ಜೊತೆ ಸೇರಿ ದರೋಡೆಗೆ ಪ್ಲಾನ್ ಮಾಡಲು ಕಾನ್ಸ್ಟೇಬಲ್ ಅಣ್ಣಪ್ಪನಿಗೆ ತಿಳಿಸಿದ್ದರು.
ಬಹಳಷ್ಟು ಸ್ಟಡಿ ಮಾಡಿದ ಬಳಿಕ ಕಾನ್ಸ್ಟೇಬಲ್ ಅಣ್ಣಪ್ಪ ದರೋಡೆಗೆ ಪ್ಲಾನ್ ಮಾಡಿದ್ದ. ಕೆಲಸವಿಲ್ಲದೆ ಕುಳಿತಿದ್ದ ರವಿ, ರಾಕೇಶ್, ನವೀನ್ ತಂಡದಲ್ಲಿ ಸೇರಿಕೊಂಡಿದ್ದರು. ಪೊಲೀಸ್ ನಮ್ಮ ಜೊತೆಯಲ್ಲೇ ಇದ್ದಾನೆ ಎಂದು ತಂಡ ದರೋಡೆಗೆ ಸಜ್ಜಾಗಿತ್ತು. ಪಕ್ಕಾ ಪ್ಲಾನ್ ಇದೆ, ಸಿಕ್ಕಿ ಬಿಳಲ್ಲ ಅಂತ ಪೊಲೀಸಪ್ಪನ ಮಾತಿನಂತೆ ಹಾಡಹಗಲೇ ದರೋಡೆಗೆ ಮುಂದಾಗಿದ್ದರು.
ಹಾವೇರಿ ಜಿಲ್ಲೆ ವೀರಾಪುರ ತಾಲೂಕಿನ ಹಳೇ ವೀರಾಪುರ ಗ್ರಾಮದ ಅಣ್ಣಪ್ಪ ನಾಯಕ್ 2018ರಲ್ಲಿ ಪೊಲೀಸ್ ಇಲಾಖೆ ಸೇರಿದ್ದ. ಮೊದಲು ಬಾಣಸವಾಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ಒಂದೂವರೆ ವರ್ಷದಿಂದ ಗೋವಿಂದಪುರ ಠಾಣೆಯಲ್ಲಿದ್ದ. ವೃತ್ತಿ ಜೀವನದಲ್ಲಿ ಅಣ್ಣಪ್ಪ ನಾಯಕ್ ಹಿನ್ನೆಲೆ ಉತ್ತಮವಾಗಿರಲಿಲ್ಲ. ಅಪರಾಧ ಪ್ರಕರಣಗಳಲ್ಲಿ ಪತ್ತೆ ಮಾಡಲು ಹೋಗಿ ಆರೋಪಿಗಳಿಂದಲೇ ವಸೂಲಿ ಮಾಡ್ತಿದ್ದುದು ಪತ್ತೆಯಾಗಿತ್ತು.
Shocking details continue to emerge in the Bengaluru robbery case. Investigation has revealed that after committing the heist, the accused hid the stolen cash inside an abandoned house in Hosakote and fled in another vehicle.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm