ಬ್ರೇಕಿಂಗ್ ನ್ಯೂಸ್
25-11-25 05:03 pm HK News Desk ಕ್ರೈಂ
ಹುಬ್ಬಳ್ಳಿ, ನ 25 : ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳ ಸೋಗಿನಲ್ಲಿ ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿಯಿಂದ ಅಂದಾಜು 3.20 ಕೋಟಿ ರೂ. ಮೌಲ್ಯದ ಸುಮಾರು 3 ಕೆಜಿ ಚಿನ್ನಾಭರಣ ಹಾಗೂ 2 ಲಕ್ಷ ನಗದು ದೋಚಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಕೇರಳ ಅಮ್ಮದಮ್ ಜಿಲ್ಲೆ ಪಾರಲಂ ಚಕ್ಕಯರ್ಕಡವುದ ಸುಧೀನ ಎಂ.ಎಸ್. ಎಂಬುವರೇ ಚಿನ್ನಾಭರಣ, ನಗದು ಕಳೆದುಕೊಂಡವರು. ಪ್ರಕರಣದ ಕುರಿತು ಕೂಲಂಕಷ ತನಿಖೆ ನಡೆಸಲು ಪೊಲೀಸ್ ಆಯುಕ್ತರು ಮೂರು ತಂಡಗಳನ್ನು ರಚಿಸಿದ್ದು, ತನಿಖಾ ತಂಡದ ಅಧಿಕಾರಿಗಳು ಕಾರು ಚಾಲಕ ಮತ್ತು ಸುಧೀನ ಜತೆ ಬಂದಿದ್ದ ಕೆಲಸಗಾರ ವಿವೇಕ ಎಂಬಿಬ್ಬರನ್ನ ವಶಕ್ಕೆ ಪಡೆದು ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಲ್ಲದೇ ಸಿಸಿಬಿ ಪೊಲೀಸರು ಕದೀಮರು ವ್ಯಾಪಾರಿ ಭೇಟಿಯಾದ ಸ್ಥಳ ಹಾಗೂ ಅವರು ವಾಹನದಲ್ಲಿ ಅಲೆದಾಡಿದ ಸ್ಥಳಗಳಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಸುಧೀನ ಜ್ಯುವೆಲ್ಲರಿ ಅಂಗಡಿಗಳಿಗೆ ಹೋಗಿ ಚಿನ್ನಾಭರಣ ಮಾರಾಟ ಮಾಡುತ್ತಿದ್ದರು. ನ.15ರಂದು ಕೆಲಸಗಾರ ವಿವೇಕ ಜೊತೆ ಚಿನ್ನಾಭರಣಗಳೊಂದಿಗೆ ಮಂಗಳೂರಿನಿಂದ ಹೊರಟು ಬೆಳಗಾವಿ, ಗೋಕಾಕ, ಧಾರವಾಡ, ಹುಬ್ಬಳ್ಳಿಗೆ ತೆರಳಿ ಜ್ಯುವೆಲ್ಲರಿ ಅಂಗಡಿಗಳಿಗೆ ಭೇಟಿಕೊಟ್ಟು ಆರ್ಡರ್ ಪಡೆದಿದ್ದಾರೆ. 17ರಂದು ಹುಬ್ಬಳ್ಳಿ ಹಳೇ ಬಸ್ ನಿಲ್ದಾಣ ಬಳಿಯ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದು, 18ರಂದು ಹುಬ್ಬಳ್ಳಿ ಹಾಗೂ 19ರಂದು ಧಾರವಾಡದಲ್ಲಿನ ಕೆಲ ಜ್ಯುವೆಲ್ಲರಿ ಮಳಿಗೆಗಳಿಗೆ ಭೇಟಿಕೊಟ್ಟು ಆರ್ಡರ್ ಪಡೆದುಕೊಂಡು ಮತ್ತೆ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಮಧ್ಯಾಹ್ನ ನೀಲಿಜಿನ್ ರಸ್ತೆಯಲ್ಲಿ ಕೆಲಸಗಾರ ವಿವೇಕ ಜೊತೆ ಹೋಗುತ್ತಿದ್ದಾಗ, ಐವರ ತಂಡ ಇವರನ್ನು ಅಡ್ಡಗಟ್ಟಿ ನಿಲ್ಲಿಸಿದ್ದಾರೆ.
'ತಾವು ಇಡಿ ಅಧಿಕಾರಿಗಳು' ಎಂದು ಐಡಿ ಕಾರ್ಡ್ ತೋರಿಸಿದ ಖದೀಮರು 'ನಿಮ್ಮನ್ನು ತಪಾಸಿಸಬೇಕು, ನಮ್ಮೊಂದಿಗೆ ಕಚೇರಿಗೆ ಬನ್ನಿ, ವಿಚಾರಣೆ ಮಾಡುತ್ತೇವೆ' ಎಂದು ನಮ್ಮನ್ನು ಕಾರಿನಲ್ಲಿ ಹತ್ತಿಸಿಕೊಂಡು ಹೋಗಿದ್ದಾರೆ. ಮಾರ್ಗಮಧ್ಯೆ ನೀವು ಚಿನ್ನಾಭರಣಗಳನ್ನು ಸ್ಮಗ್ಲಿಂಗ್ ಮಾಡುತ್ತಿದ್ದೀರಿ ಎಂದು ಬೆದರಿಸಿ, ನಮ್ಮ ಬಳಿ ಇದ್ದ ಮೊಬೈಲ್ಗಳನ್ನು ಕಿತ್ತುಕೊಂಡು ಅದರಲ್ಲಿನ ಸಿಮ್ ಕಾರ್ಡ್ ತೆಗೆದಿದ್ದಾರೆ. ಅಲ್ಲದೇ ನಮ್ಮ ಪರ್ಸ್ಗಳನ್ನು ಸಹ ಕಸಿದುಕೊಂಡಿದ್ದಾರೆ. ನಂತರ ವಿವೇಕ ಬಳಿಯಿದ್ದ ಚಿನ್ನಾಭರಣ ಮತ್ತು ನಗದು ಇದ್ದ ಬ್ಯಾಗ್ ಕಸಿದುಕೊಂಡು ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ನಿಮ್ಮ ಕಚೇರಿ ಎಲ್ಲಿ ಎಂದು ಕೇಳಿದಾಗ ನಮ್ಮ ಮೇಲೆ ಹಲ್ಲೆ ನಡೆಸಿ, ಸುಮ್ಮನಿರಿ ಎಂದು ಹೆದರಿಸಿ ಕಿತ್ತೂರು ಬಳಿ ಕಾರು ನಿಲ್ಲಿಸಿ ವಿವೇಕನನ್ನು ಕೆಳಗೆ ಇಳಿಸಿದ್ದಾರೆ. ನಂತರ ನನ್ನನ್ನು ಕರೆದು ಕೊಂಡು ಹೋಗಿ ಎಂ.ಕೆ. ಹುಬ್ಬಳ್ಳಿ ಬಳಿ ಇಳಿಸಿ, ಬ್ಯಾಗಿನಲ್ಲಿದ್ದ 3.20 ಕೋಟಿ ರೂ. ಮೌಲ್ಯದ 2 ಕೆಜಿ 942 ಗ್ರಾಂ ಚಿನ್ನಾಭರಣ ಹಾಗೂ 2 ಲಕ್ಷ ನಗದು ತೆಗೆದುಕೊಂಡು ವಾಹನ ಸಮೇತ ಪರಾರಿಯಾಗಿದ್ದಾರೆ ಎಂದು ಸುಧೀನ ಅವರು ದೂರು ನೀಡಿದ್ದಾರೆ. ಇವರ ದೂರಿನನ್ವಯ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆಗಾಗಿ ಇದನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ.
ಈ ಕುರಿತಂತೆ ಪ್ರತಿಕ್ರಿಯಿಸಿದ ಕಾನೂನು ಸುವ್ಯವಸ್ಥೆ ಡಿಸಿಪಿ ಮಹಾನಿಂಗ ನಂದಗಾವಿ, ಇಡಿ ಅಧಿಕಾರಿಗಳ ಸೋಗಿನಲ್ಲಿ ಐವರುಳ್ಳ ಖದೀಮರ ತಂಡವು ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿಯಿಂದ 3 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಚಿನ್ನಾಭರಣ ಮತ್ತು ನಗದು ದೋಚಿದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಮುಂದುವರಿದಿದೆ. ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿದೆ. ಈಗಾಗಲೇ ತಂಡಗಳು ಮಹಾರಾಷ್ಟ್ರ, ಮಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ತೆರಳಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದಿದ್ದೇವೆ ಎಂದು ತಿಳಿಸಿದ್ದಾರೆ.
A shocking robbery has surfaced in Hubballi, where a five-member gang posing as Enforcement Directorate (ED) officials looted nearly ₹3.20 crore worth of gold jewellery and cash from a Kerala-based jeweller. The victim, Sudheen M.S. from Thrissur, was carrying almost 3 kg of gold and ₹2 lakh in cash while touring jewellery stores across Karnataka.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 01:55 pm
Mangalore Correspondent
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm