ಬ್ರೇಕಿಂಗ್ ನ್ಯೂಸ್
27-11-25 09:07 pm Mangalore Correspondent ಕ್ರೈಂ
ಮಂಗಳೂರು, ನ.27 : ಹೊರಗುತ್ತಿಗೆ ಸಿಬಂದಿಯೊಬ್ಬರ ಸಂಬಳವನ್ನು ನೀಡುವುದಕ್ಕಾಗಿ ಲಂಚ ಕೇಳಿ, 30 ಸಾವಿರ ಲಂಚ ಪಡೆಯುತ್ತಿದ್ದಾಗಲೇ ಉಳ್ಳಾಲ ಮತ್ತು ಮಂಗಳೂರು ತಾಲೂಕಿನ ಭೂ ದಾಖಲೆಗಳ ವಿಭಾಗದ ಸಹಾಯಕ ನಿರ್ದೇಶಕ ಸೇರಿ ಮೂವರು ಅಧಿಕಾರಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ನಗರ ಆಸ್ತಿ ಮಾಲೀಕತ್ವ ದಾಖಲೆ (ಯುಪಿಓಆರ್) ಯೋಜನೆಯಲ್ಲಿ ಹೊರ ಗುತ್ತಿಗೆ ಸಿಬಂದಿಯಾಗಿದ್ದ ವ್ಯಕ್ತಿಯೊಬ್ಬರನ್ನು ಕೆಲಸದಲ್ಲಿ ಮುಂದುವರಿಸುವುದು ಮತ್ತು ಬಾಕಿಯಿರುವ ಸಂಬಳದ ಮೊತ್ತವನ್ನು ಮಾಡಿಕೊಡಲು ಭೂ ದಾಖಲೆಗಳ ಅಧಿಕಾರಿಗಳು ಲಂಚದ ಬೇಡಿಕೆಯೊಡ್ಡಿದ್ದರು. ಉಳ್ಳಾಲದ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಸರ್ವೇಯರ್ ಕೃಷ್ಣಮೂರ್ತಿ 50 ಸಾವಿರ, ಮಂಗಳೂರು ತಾಲೂಕು ಸರ್ವೆ ವಿಭಾಗದ ಸಹಾಯಕ ನಿರ್ದೇಶಕ ಬಿ.ಕೆ ರಾಜು 10 ಸಾವಿರ, ಸರ್ವೆ ಸುಪರ್ ವೈಸರ್ ಎಸ್.ಧನಶೇಖರ ರೂ. 10 ಸಾವಿರ ಲಂಚಕ್ಕೆ ಬೇಡಿಕೆ ಇರಿಸಿದ್ದರು.
ಈ ಬಗ್ಗೆ ದೂರು ಪಡೆದ ಲೋಕಾಯುಕ್ತ ಅಧಿಕಾರಿಗಳು ಟ್ರಾಪ್ ಮಾಡಿದ್ದು, ನ.27ರ ಗುರುವಾರ ಸಂತ್ರಸ್ತ ವ್ಯಕ್ತಿಯಿಂದ ಲಂಚದ ಹಣ 30 ಸಾವಿರವನ್ನು ಪಡೆಯುತ್ತಿದ್ದಾಗಲೇ ಅರೆಸ್ಟ್ ಮಾಡಿದ್ದಾರೆ.
ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಗಾನ ಪಿ.ಕುಮಾರಿ, ಸುರೇಶ್ ಕುಮಾರ್, ಪೊಲೀಸ್ ನಿರೀಕ್ಷಕರಾದ ಭಾರತಿ, ಚಂದ್ರಶೇಖರ್ ಕೆ.ಎನ್, ರವಿ ಪವಾರ್, ರಾಜೇಂದ್ರ ನಾಯ್ಡು ಸಿಬಂದಿಗಳ ಜೊತೆ ಭಾಗವಹಿಸಿದ್ದರು.
The Lokayukta officials arrested three officers from the land records (survey) department of Ullal and Mangaluru taluk for allegedly demanding and accepting a bribe of ₹30,000. The officers had reportedly demanded money to continue the service of an outsourced employee working under the ULPOR (Urban Property Ownership Record) project and to release his pending salary.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm