ಬ್ರೇಕಿಂಗ್ ನ್ಯೂಸ್
28-11-25 02:16 pm Bangalore Correspondent ಕ್ರೈಂ
ಬೆಂಗಳೂರು, ನ 28 : ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪತ್ನಿ ಪಲ್ಲವಿ ಅವರು ಮಾನಸಿಕವಾದಿ ಸದೃಢವಾಗಿದ್ದು, ಈ ಬಗ್ಗೆ ನಿಮ್ಹಾನ್ಸ್ ವೈದ್ಯರು ವರದಿ ನೀಡಿದ್ದಾರೆ.
1981ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಓಂ ಪ್ರಕಾಶ್ ಅವರನ್ನು ಕಳೆದ ವರ್ಷದ ಏಪ್ರಿಲ್ 20ರಂದು ಎಚ್ಎಸ್ಆರ್ ಲೇಔಟ್ನ ಅವರ ಮನೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಸಮಗ್ರ ತನಿಖೆಗಾಗಿ ಗೃಹ ಇಲಾಖೆ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿತ್ತು. ಕೃತ್ಯ ಸಂಬಂಧ ಪಲ್ಲವಿಯನ್ನು ಪೊಲೀಸರು ಬಂಧಿಸಿದ್ದರು. ಈ ವೇಳೆ ಆಕೆ ಮಾನಸಿಕ ಅಸ್ವಸ್ಥೆ ಎಂದು ಹೇಳಲಾಗುತ್ತಿತ್ತು. ಹೀಗಾಗಿ ಪೊಲೀಸರು ನಿಮ್ಹಾನ್ಸ್ಗೆ ದಾಖಲಿಸಿದ್ದರು.
ಪಲ್ಲವಿ ಸುಮಾರು 14 ದಿನಗಳ ಕಾಲ ವೈದ್ಯರು ಕೌನ್ಸೆಲಿಂಗ್, ಬುದ್ದಿಮಟ್ಟ ಪರೀಕ್ಷೆ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಒಳಪಡಿಸಿದ್ದರು. ಈ ವೇಳೆ ಪಲ್ಲವಿ ಮಾನಸಿಕವಾಗಿ ಸಡೃಢವಾಗಿರುವುದನ್ನು ಖಚಿತಪಡಿಸಿಕೊಂಡು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು.
ಮತ್ತೊಂದೆಡೆ, ಪತಿಯ ಹತ್ಯೆ ಬಳಿಕ "I Have Killed Monster" ಎಂದು ಪಲ್ಲವಿ ವಾಯ್ಸ್ ನೋಟ್ ಕಳುಹಿಸಿದ್ದರು. ಈ ವಾಯ್ಸ್ ನೋಟ್ ಸಂಗ್ರಹಿಸಿ ಎಫ್ಎಸ್ಎಲ್ಗೆ ಕಳುಹಿಸಲಾಗಿತ್ತು. ವರದಿಯಲ್ಲಿ ವಾಯ್ಸ್ ನೋಟ್ನಲ್ಲಿ ಮಾತನಾಡಿರುವ ಧ್ವನಿ ಹಾಗೂ ಪಲ್ಲವಿ ಅವರ ಧ್ವನಿ ತಾಳೆಯಾಗಿರುವುದು ದೃಢಪಟ್ಟಿದೆ. ಪ್ರಕರಣಕ್ಕೆ ಇದು ಪ್ರಮುಖ ಸಾಕ್ಷ್ಯಾಧಾರವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಇದೇ ವರ್ಷದ ಆಗಸ್ಟ್ನಲ್ಲಿ ಸಿಸಿಬಿ ಪೊಲೀಸರು ನಗರದ 1ನೇ ಎಸಿಎಂಎಂ ನ್ಯಾಯಾಲಯಕ್ಕೆ 1,150 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದರು. ಈ ವರದಿಯಲ್ಲಿ ಪಲ್ಲವಿಯನ್ನು ಪ್ರಮುಖ ಆರೋಪಿಯನ್ನಾಗಿ ಮಾಡಲಾಗಿತ್ತು. ಆಸ್ತಿ ಹಾಗೂ ಕೌಟುಂಬಿಕ ಕಲಹಗಳಿಂದಾಗಿ ಪತ್ನಿಯೇ ಪತಿಯನ್ನು ಹತ್ಯೆ ಮಾಡಿರುವುದಾಗಿ ತನಿಖಾಧಿಕಾರಿಗಳು ವರದಿಯಲ್ಲಿ ಉಲ್ಲೇಖಿಸಿದ್ದರು.
ಕೃತ್ಯದಲ್ಲಿ ಓಂ ಪ್ರಕಾಶ್ ಮಗಳಾದ ತೃಪ್ತಿ ಪಾತ್ರ ಕಂಡುಬಂದಿಲ್ಲ. ಹೀಗಾಗಿ, ಆರೋಪಪಟ್ಟಿಯಲ್ಲಿ ಆಕೆಯ ಹೆಸರನ್ನು ಕೈ ಬಿಡಲಾಗಿತ್ತು.
ಊಟ ಮಾಡುವಾಗಲೇ ಹತ್ಯೆ:
ಐಪಿಎಸ್ ಅಧಿಕಾರಿಯಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುವಾಗ ಖರೀದಿಸಿದ್ದ ಜಮೀನಿನ ಕೆಲಭಾಗವನ್ನು ಸಹೋದರಿ ಹೆಸರಿಗೆ ನೋಂದಣಿಗೆ ಮಾಡಲು ಮುಂದಾಗಿದ್ದರು. ಇದನ್ನು ವಿರೋಧಿಸಿದ್ದ ಪಲ್ಲವಿ, ಇದೇ ವಿಚಾರವಾಗಿ ಜಗಳ ಮಾಡುತ್ತಿದ್ದರು. ಏ.20ರಂದು ಹೊರಗಿನಿಂದ ಮೀನೂಟ ತರಿಸಿಕೊಂಡು ಊಟ ಮಾಡುವಾಗಲೇ ನಡೆದ ಜಗಳದಲ್ಲಿ ಪತ್ನಿಯಿಂದಲೇ ಬರ್ಬರವಾಗಿ ಹತ್ಯೆಗೊಳಗಾಗಿದ್ದರು. ಚಾಕು ಹಾಗೂ ಸ್ಕ್ರೂ ಡ್ರೈವರ್ನಿಂದ ಇರಿತಕ್ಕೆ ಒಳಗಾದ ಪ್ರಕಾಶ್ ರಕ್ತ ಮಡುವಿನಲ್ಲಿ ಬಿದ್ದಿದ್ದರು. ಖಾರದಪುಡಿ ಎರಚಿ ಅವರ ಮೇಲೆ ಅಡುಗೆ ಎಣ್ಣೆ ಸುರಿಯಲಾಗಿತ್ತು. ದೇಹದ 10 ಕಡೆಗಳಲ್ಲಿ ಗಾಯವಾಗಿತ್ತು. ಕೊಲೆ ಸಂಬಂಧ ಪುತ್ರ ಕಾರ್ತಿಕೇಶ್ ನೀಡಿದ ದೂರಿನ ಮೇರೆಗೆ ಪತ್ನಿಯನ್ನು ಏ.21ರಂದು ಪೊಲೀಸರು ಬಂಧಿಸಿದ್ದರು.
NIMHANS doctors have confirmed that Pallavi, wife of retired DGP Om Prakash and the prime accused in his brutal murder, is mentally stable, dismissing earlier claims of psychological illness. The report, along with a voice-note match where Pallavi said “I have killed the monster,” has become key evidence in the case.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am