ಬ್ರೇಕಿಂಗ್ ನ್ಯೂಸ್
02-12-25 06:37 pm Mangalore Correspondent ಕ್ರೈಂ
ಪುತ್ತೂರು, ಡಿ.2 : ಇನ್ನೋವಾ ಕಾರಿನಲ್ಲಿ ನಾಲ್ಕು ಕರುಗಳನ್ನು ಕದ್ದುಕೊಂಡು ಸಾಗಿಸುತ್ತಿದ್ದಾಗ ಕಾರು ಕೆಟ್ಟು ಹೋಗಿದ್ದು ಕರುಗಳನ್ನು ಪುತ್ತೂರಿನ ನರಿಮೊಗರು ಎಂಬಲ್ಲಿ ನಡು ರಸ್ತೆಯಲ್ಲಿ ಬಿಟ್ಟು ಹೋಗಿದ್ದರು. ಘಟನೆ ಬಗ್ಗೆ ಸ್ಥಳೀಯರ ದೂರಿನಂತೆ ಪ್ರಕರಣ ದಾಖಲಿಸಿ ಇಬ್ಬರು ಗೋವು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ಪಾಣಾಜೆ ನಿವಾಸಿ ಪ್ರೇಮರಾಜ್ ಎಂಬವರ ದೂರಿನಂತೆ, ನ.29 ರಂದು ಬೆಳಗ್ಗೆ ಯಾರೋ ಕಳ್ಳರು ವಾಹನವೊಂದರಲ್ಲಿ ಗೋವುಗಳನ್ನು ಸಾಗಿಸುವ ವೇಳೆಯಲ್ಲಿ, ಸದ್ರಿ ವಾಹನ ರಸ್ತೆಯಲ್ಲಿ ಕೆಟ್ಟು ಹೋಗಿರುವುದರಿಂದ, ವಾಹನದಲ್ಲಿದ್ದ ಗೋವುಗಳನ್ನು ನಡುರಸ್ತೆಯಲ್ಲಿ ಬಿಟ್ಟು ಹೋಗಿದ್ದರು. ಅವುಗಳನ್ನು ಪ್ರೇಮರಾಜ್ ಸ್ಥಳೀಯರ ಸಹಕಾರದಿಂದ ರಕ್ಚಿಸಿ ಪುತ್ತೂರು ನಗರ ಠಾಣೆಗೆ ಹಸ್ತಾಂತರಿಸಿರುತ್ತಾರೆ.
ಸದ್ರಿ ಗೋವುಗಳನ್ನು ಯಾರೋ ಕಳ್ಳರು ಕದ್ದು ತಂದಿರಬಹುದೆಂದು ಸಂಶಯವಿದ್ದು, ಕೃತ್ಯವೆಸಗಿದ ಆರೋಪಿಗಳನ್ನು ಪತ್ತೆಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ನೀಡಿದ ದೂರಿನಂತೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 117/2025, ಕಲಂ: 4, 5 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ ಮತ್ತು ಕಲಂ: 303(1) BNS 2023 ಮತ್ತು 106 BNSS -2023 ರಂತೆ ಪ್ರಕರಣ ದಾಖಲಾಗಿರುತ್ತದೆ.
ಸದ್ರಿ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳಾದ ಉಳ್ಳಾಲ ಸಜಿಪನಡು ನಿವಾಸಿಗಳಾದ ಆಶಿಕ್ ಪಾಷಾ (26) ಹಾಗೂ ಅಬ್ದುಲ್ ಲತೀಫ್ (25) ಎಂಬವರು ಕೆಎ 52 4889 ನೋಂದಣಿಯ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ 4 ಕರುಗಳನ್ನು ಹಾಗೂ ಒಂದು ದನವನ್ನು ಸಾಗಿಸುತ್ತಿದ್ದ ವೇಳೆ ವಾಹನ ಕೆಟ್ಟು ಹೋಗಿದ್ದರಿಂದ ಆರೋಪಿಗಳು ಸದ್ರಿ ಜಾನುವಾರುಗಳನ್ನು ರಸ್ತೆಯಲ್ಲಿ ಬಿಟ್ಟು ವಾಹನದೊಂದಿಗೆ ತೆರಳಿದ್ದರು. ಸದ್ರಿ ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಇನ್ನೋವಾ ಕಾರನ್ನು ವಶಕ್ಕೆ ಪಡೆದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Four calves being illegally transported in an Innova car were abandoned on the roadside in Narimogaru, Puttur, after the vehicle broke down. Based on a complaint by local resident Premaraj, police rescued the animals and began an investigation.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm