ಬ್ರೇಕಿಂಗ್ ನ್ಯೂಸ್
04-12-25 10:53 pm Bangalore Correspondent ಕ್ರೈಂ
ಬೆಂಗಳೂರು, ಡಿ.4 : ಇತ್ತೀಚೆಗೆ ಮೆಗಾ ದರೋಡೆ ಪ್ರಕರಣದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಬಂಧನವಾಗಿದ್ದು ಪೊಲೀಸ್ ಇಲಾಖೆಯ ತಲೆ ತಗ್ಗಿಸುವಂತೆ ಮಾಡಿತ್ತು. ಇದೀಗ ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿ ಎದುರಲ್ಲಿ ನಿಲ್ಲಿಸಿದ್ದ ಕಾರಿನಿಂದ ಸೈಬರ್ ಠಾಣೆ ಹೆಡ್ ಕಾನ್ಸ್ಟೇಬಲ್ ಒಬ್ಬರು ಹಣ ಕಳವುಗೈದ ಬಗ್ಗೆ ಪ್ರಕರಣ ದಾಖಲಾಗಿದೆ.
ಸೈಬರ್ ಠಾಣೆಯ ಪೊಲೀಸ್ ಸಿಬಂದಿ ಜೆ.ಬಿ. ಉಲ್ಲಾ ಎಂಬವರನ್ನು 11 ಲಕ್ಷ ಕಳವು ಪ್ರಕರಣದಲ್ಲಿ ಬಂಧಿಸಲಾಗಿದೆ. ಸೈಬರ್ ಪೊಲೀಸರು ಪ್ರಕರಣ ಒಂದರಲ್ಲಿ ಆರೋಪಿಯನ್ನು ವಿಚಾರಣೆಗಾಗಿ ಠಾಣೆಗೆ ಕರೆದುಕೊಂಡು ಬಂದಿದ್ದರು. ಕಾರು ಸಮೇತ ಕರೆತಂದಿದ್ದು ಬಳಿಕ ಬಂಧನ ಮಾಡಲಾಗಿತ್ತು.
ಆರೋಪಿ ಬಳಿಕ ಜಾಮೀನಿನಲ್ಲಿ ಹೊರಬಂದು ಠಾಣೆಯಲ್ಲಿದ್ದ ಕಾರನ್ನು ಕರೆದೊಯ್ಯಲು ಬಂದಿದ್ದ. ಈ ವೇಳೆ ತನ್ನ ಕಾರಿನಲ್ಲಿಟ್ಟಿದ್ದ 11 ಲಕ್ಷ ರೂಪಾಯಿ ಬ್ಯಾಗ್ ನಾಪತ್ತೆಯಾಗಿತ್ತು. ತಕ್ಷಣವೇ ಸೈಬರ್ ಠಾಣೆಯ ಸಿಬ್ಬಂದಿಯವರ ಗಮನಕ್ಕೆ ತಂದಾಗ ಅಧಿಕಾರಿಗಳು ಮೊದಲಿಗೆ ಗಾಬರಿಗೊಂಡರು ಬಳಿಕ ಸಿಸಿಟಿವಿ ಪರಿಶೀಲಿಸಿದಾಗ, ಹೆಡ್ ಕಾನ್ಸ್ಟೇಬಲ್ ಜೆ.ಬಿ. ಉಲ್ಲಾ ಕಾರಿನಲ್ಲಿದ್ದ 11 ಲಕ್ಷ ರೂಪಾಯಿ ಹಣದ ಬ್ಯಾಗ್ನ್ನು ತೆಗೆದುಕೊಂಡು ಹೋಗಿರುವುದು ಕಂಡುಬಂದಿದೆ.
ಆದರೆ ಹಣ ಕದ್ದ ನಂತರ ಜೆಬಿ ಉಲ್ಲಾ ತನಗೇನೂ ಗೊತ್ತಿಲ್ಲ ಎನ್ನುವಂತಿದ್ದು ಎಂದಿನಂತೆ ಕೆಲಸಕ್ಕೆ ಬರುತ್ತಿದ್ದ. ಘಟನೆಯ ಬಗ್ಗೆ ಸಿಸಿಬಿ ಡಿಸಿಪಿ ರಾಜಾ ಇಮಾಮ್ ಖಾಸಿಂ ಅವರಿಗೆ ದೂರು ಸಲ್ಲಿಸಲಾಗಿತ್ತು. ಬಳಿಕ ಜೆಬಿ ಉಲ್ಲಾ ಅವರ ಮನೆಗೆ ಸರ್ಚ್ ಮಾಡಲು ತೆರಳಿದಾಗ, ಆತ ಮನೆ ಒಳಗೆ ಬಿಡದೆ ಗಲಾಟೆ ಮಾಡಿದ್ದ.
ಪೊಲೀಸರು ಸರ್ಚ್ ಮಾಡಿದಾಗ, ಮಲಗುವ ಕೋಣೆಯ ಬೆಡ್ ಕೆಳಗೆ ಲಕ್ಷಾಂತರ ರೂ. ಹಣವನ್ನು ಜೋಡಿಸಿ ಇಟ್ಟಿದ್ದು ಪತ್ತೆಯಾಯಿತು. ಕದ್ದ ಹಣದಿಂದಲೇ ತನ್ನ ಪತ್ನಿಗೆ ಆಭರಣಗಳನ್ನು ತೆಗೆದು ಕೊಟ್ಟಿರುವುದು ಕೂಡಾ ತನಿಖೆಯಲ್ಲಿ ಬಹಿರಂಗವಾಗಿದೆ. ಕದ್ದ ಹಣದಲ್ಲಿ ಸುಮಾರು ಎರಡು ಲಕ್ಷ ರೂಪಾಯಿ ಮಾತ್ರ ವಾಪಸ್ ನೀಡಿದ್ದಾನೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಬೆಂಗಳೂರು ನಗರದ ಪೊಲೀಸರನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಇತ್ತೀಚೆಗೆ ಸಿದ್ದಾಪುರ ದರೋಡೆ ಪ್ರಕರಣದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಬಂಧಿತನಾಗಿದ್ದ. ಜೆಪಿ ನಗರದಲ್ಲಿ ಪೊಲೀಸರೇ ಸೀನಿಯರ್ ಸಿಟಿಜನ್ ಬಳಿ ಹಣ ಪಡೆದ ಆರೋಪವೂ ಕೇಳಿಬಂದಿತ್ತು. ಇದೀಗ ಸೈಬರ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಜೆಬಿ ಉಲ್ಲಾ ಮೇಲೆ ಕಳ್ಳತನದ ದೂರು ದಾಖಲಾಗಿದೆ.
In a shocking incident that has embarrassed the Bengaluru police department, a head constable from the Cyber Crime Police Station has been arrested for stealing ₹11 lakh from a car parked right outside the Bengaluru Police Commissioner’s Office.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm