ಬ್ರೇಕಿಂಗ್ ನ್ಯೂಸ್
09-12-25 11:58 am Mangalore Correspondent ಕ್ರೈಂ
ಮಂಗಳೂರು, ಡಿ.9 : ಹೋಮಿಯೋಪತಿ ಓದುತ್ತಿದ್ದ ಯುವಕನಿಗೆ ವಾಟ್ಸಾಪ್ನಲ್ಲಿ ಷೇರು ಹೂಡಿಕೆಯಿಂದ ಹೆಚ್ಚು ಲಾಭ ಗಳಿಸಬಹುದು ಎನ್ನುವ ಆಮಿಷವೊಡ್ಡಿ 31.99 ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರ ವಿದ್ಯಾರ್ಥಿ, ಬಿಡುವಿನ ವೇಳೆಯಲ್ಲಿ ಪುರೋಹಿತರ ಸಹಾಯಕನಾಗಿ ಪೂಜೆ, ಹೋಮ ಹವನ ಮತ್ತು ಇನ್ನಿತರ ಕೆಲಸಕ್ಕೆ ಹೋಗುತ್ತಿದ್ದ. ಅದರ ಆದಾಯದ ಉಳಿತಾಯದ ಹಣವನ್ನು ಬ್ಯಾಂಕ್ನಲ್ಲಿ ಇರಿಸಿದ್ದ. ನವೆಂಬರ್ ತಿಂಗಳಲ್ಲಿ ವಾಟ್ಸಾಪ್ನಲ್ಲಿ ಸಂದೇಶ ಬಂದಿದ್ದು ಅದರಲ್ಲಿ ಡಿಬಿಎಸ್ ಟ್ರೇಡಿಂಗ್ ಬಗ್ಗೆ ವಿವರಿಸಿ ಹಣ ಹೂಡಿಕೆ ಮಾಡಿದರೆ ಪ್ರತಿದಿನ ಶೇ.5 ರಿಂದ 10ರಷ್ಟು ಲಾಭಾಂಶ ಗಳಿಸಹುದು ಎಂದು ತಿಳಿಸಲಾಗಿತ್ತು. ಹೆಚ್ಚಿನ ಹಣ ಹೂಡಿಕೆ ಮಾಡಿದಲ್ಲಿ ಡಿಸೆಂಬರ್ ಅಂತ್ಯದೊಳಗೆ ಶೇ. 800 ರಷ್ಟು ಲಾಭಾಂಶ ನೀಡುವುದಾಗಿ ಭರವಸೆ ನೀಡಿದ್ದರು. ಇದರಿಂದ ಪ್ರೇರೇಪಿತರಾಗಿ ಅಪರಿಚಿತ ವ್ಯಕ್ತಿಗಳು ತಿಳಿಸಿದಂತೆ ಹಣ ಹೂಡಿಕೆ ಮಾಡಲು ಮುಂದಾಗಿದ್ದಾರೆ.
ಚಿನ್ನ ಅಡವಿಟ್ಟು 31 ಲಕ್ಷ ರೂ. ಹೂಡಿಕೆ
ಮೀನಾ ಭಟ್ ಎನ್ನುವ ಅಪರಿಚಿತ ಮಹಿಳೆ ಮಾರ್ಗದರ್ಶಕಿಯಾಗಿ ಪ್ರತಿದಿನ ನಿರಂತರವಾಗಿ ವಾಟ್ಸಾಪ್ನಲ್ಲಿ ಸಂದೇಶ ಕಳುಹಿಸುತ್ತಾ ಹಣ ಹೂಡಿಕೆ ಮಾಡುವಂತೆ ಪ್ರೇರಣೆ ನೀಡುತ್ತಿದ್ದಳು. ಅವರು ನೀಡಿದ ಬೇರೆ ಬೇರೆ ಖಾತೆಗಳಿಗೆ ನ.5ರಿಂದ 26ರ ವರೆಗೆ ತನ್ನಲ್ಲಿದ್ದ ಹಣ ಹಾಗೂ ಮನೆಯಲ್ಲಿದ್ದ ಬಂಗಾರವನ್ನು ಅಡವಿಟ್ಟು ಹಂತ ಹಂತ ವಾಗಿ ಒಟ್ಟು 31,99,800 ರೂ. ಹಣ ವರ್ಗಾಯಿಸಿದ್ದಾರೆ.
ಅನಂತರದ ದಿನಗಳಲ್ಲಿ ಹೂಡಿಕೆ ಮಾಡಿದ ಹಣವನ್ನು ವಾಪಸ್ ನೀಡುವಂತೆ ಕೇಳಿಕೊಂಡಾಗ ಇನ್ನೂ ಹೆಚ್ಚಿನ ಹಣ ತೊಡಗಿಸುವಂತೆ ಹಾಗೂ ತೆರಿಗೆ ಇತರೆ ಶುಲ್ಕಗಳನ್ನು ಪಾವತಿಸಬೇಕು. ಇಲ್ಲವಾದಲ್ಲಿ ಯಾವುದೇ ಹಣ ಹಿಂಪಡೆಯಲು ಸಾಧ್ಯವಿಲ್ಲ ಎಂದು ಮಹಿಳೆ ತಿಳಿಸಿದ್ದಾರೆ. ಇದರಿಂದ ಭಯಪಟ್ಟು ಮನೆಯವರಲ್ಲಿ ಹಾಗೂ ಸ್ನೇಹಿತರಲ್ಲಿ ವಿಚಾರಿಸಿದಾಗ ತಾನು ಮೋಸ ಹೋಗಿರುವ ವಿಚಾರ ಬೆಳಕಿಗೆ ಬಂದಿದೆ. ಹಣವನ್ನು ಮೋಸದಿಂದ ವರ್ಗಾಯಿಸಿ ವಂಚಿಸಿರುವ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.
A homoeopathy student from Mangaluru, who also worked part-time as a purohit assistant, was cheated of ₹31.99 lakh after being lured into investing in a fake online share-trading platform via WhatsApp. A case has been registered at Mangaluru South Police Station (Sen Police Station).
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am