ಬ್ರೇಕಿಂಗ್ ನ್ಯೂಸ್
09-12-25 04:33 pm Mangalore Correspondent ಕ್ರೈಂ
ಪುತ್ತೂರು, ಡಿ.9 : ರಾತ್ರಿ ವೇಳೆ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌಲ್ಯದ 80 ಚೀಲ ಕಾಫಿಯನ್ನು ಕಳವುಗೈದ ಘಟನೆ ಪುತ್ತೂರಿನಲ್ಲಿ ನಡೆದಿದ್ದು ಪ್ರಕರಣ ಬೆನ್ನತ್ತಿದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಪುತ್ತೂರು ಕಬಕ ನಿವಾಸಿ ತೃತೇಶ್ (29) ಎಂಬವರು ಲಾರಿಯ ಮಾಲಕ ಮತ್ತು ಚಾಲಕನಾಗಿದ್ದು, ಡಿ.3ರಂದು ಪಿರಿಯಾಪಟ್ಟಣದ ಕಾಫಿ ಕ್ಯೂರಿಂಗ್ ಕಂಪೆನಿಯೊಂದರಿಂದ ತಲಾ 60 ಕೆಜಿ ತೂಕದ 320 ಗೋಣಿ ಚೀಲ ಬ್ಯಾಗ್ ಗಳನ್ನು ಲೋಡ್ ಮಾಡಿಕೊಂಡು ಮಂಗಳೂರಿಗೆ ತೆರಳುತ್ತಿದ್ದರು. ಅದೇ ದಿನ ರಾತ್ರಿ ಪುತ್ತೂರಿಗೆ ತಲುಪಿ, ಕಬಕ ನೆಹರೂ ನಗರ ಎಂಬಲ್ಲಿ ರಸ್ತೆ ಬದಿ ಲಾರಿಯನ್ನು ನಿಲ್ಲಿಸಿ ಡೋರ್ ಲಾಕ್ ಮಾಡಿ ಮನೆಗೆ ತೆರಳಿದ್ದರು. ಮರುದಿನ ಡಿ.04ರಂದು ಬೆಳಗ್ಗೆ ಮರಳಿ ಬಂದು ಸದ್ರಿ ಲಾರಿಯನ್ನು ಚಲಾಯಿಸುತ್ತಾ ಮಧ್ಯಾಹ್ನ ವೇಳೆ ಮಂಗಳೂರಿನ ಬಂದರಿಗೆ ತಲುಪಿರುತ್ತಾರೆ.




ಈ ವೇಳೆ ಕಂಪೆನಿಯವರು ಕ್ವಾಲಿಟಿ ಚೆಕ್ ಮಾಡಲು ಬಂದಾಗ, ಲಾರಿಯ ಹಿಂಬದಿಯ ಸೀಲ್ ಲಾಕ್ ತುಂಡಾಗಿರುವುದು ಕಂಡು ಬಂದಿದ್ದು, ಲೋಡನ್ನು ಪರಿಶೀಲಿಸಿದಾಗ, ಲಾರಿಯಲ್ಲಿದ್ದ ಕಾಫಿ ಬೀಜ ತುಂಬಿದ ಗೋಣಿಚೀಲಗಳ ಪೈಕಿ ಸುಮಾರು ರೂ 21,44,000/-ಮೌಲ್ಯದ 80 ಗೋಣಿ ಚೀಲಗಳು ಕಳವಾಗಿರುವುದು ಕಂಡುಬಂದಿತ್ತು. ಈ ಬಗ್ಗೆ ತೃತೇಶ್ ನೀಡಿದ ದೂರಿನ ಮೇರೆಗೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು, ಆರೋಪಿ ಆಶ್ಲೇಷ ಭಟ್ ಎಂಬಾತ ತನ್ನ ಸಹಚರರಾದ ನಾರಾಯಣ ಶೆಟ್ಟಿಗಾರ್, ಮಿಥುನ್ ಕುಮಾರ, ವಿಜಯ ಶೆಟ್ಟಿ ಮತ್ತು ಮಹಮ್ಮದ್ ಅಶ್ರಫ್ ಎಂಬವರೊಂದಿಗೆ ಸೇರಿ ಕೃತ್ಯ ನಡೆಸಿರುವುದು ತಿಳಿದುಬಂದಿರುತ್ತದೆ. ಸದ್ರಿ ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆದು, ಕೃತ್ಯಕ್ಕೆ ಬಳಸಿದ ಎರಡು ಆಟೋ, ಒಂದು ಗೂಡ್ಸ್ ಟೆಂಪೋವನ್ನು ಹಾಗೂ ಕಳವಾದ 60 ಕೆಜಿ ತೂಕದ ಕಾಫಿ ತುಂಬಿದ 80 ಚೀಲಗಳನ್ನು ಸ್ವಾಧೀನಪಡಿಸಲಾಗಿದೆ.
A major theft took place in Puttur where 80 bags of coffee worth ₹21.44 lakh were stolen from a lorry parked overnight. The Puttur Police have arrested five accused and recovered the stolen bags along with the vehicles used in the crime.
14-12-25 11:37 pm
HK News Desk
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
Earthqake, Davangere, Vijayanagara: ದಾವಣಗೆರೆ,...
13-12-25 10:47 pm
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
14-12-25 11:10 pm
Mangalore Correspondent
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm
Illegal Cattle Transport Case: ಅಕ್ರಮ ಗೋಸಾಗಾಟ...
14-12-25 08:35 pm
ಶಿರಿಯಾರ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಂತರ ವಂಚನೆ ;...
14-12-25 05:33 pm
Shivamogga Double Murder: ಶಿವಮೊಗ್ಗದಲ್ಲಿ ಡಬಲ್...
13-12-25 12:51 pm