ಬ್ರೇಕಿಂಗ್ ನ್ಯೂಸ್
09-12-25 04:33 pm Mangalore Correspondent ಕ್ರೈಂ
ಪುತ್ತೂರು, ಡಿ.9 : ರಾತ್ರಿ ವೇಳೆ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌಲ್ಯದ 80 ಚೀಲ ಕಾಫಿಯನ್ನು ಕಳವುಗೈದ ಘಟನೆ ಪುತ್ತೂರಿನಲ್ಲಿ ನಡೆದಿದ್ದು ಪ್ರಕರಣ ಬೆನ್ನತ್ತಿದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಪುತ್ತೂರು ಕಬಕ ನಿವಾಸಿ ತೃತೇಶ್ (29) ಎಂಬವರು ಲಾರಿಯ ಮಾಲಕ ಮತ್ತು ಚಾಲಕನಾಗಿದ್ದು, ಡಿ.3ರಂದು ಪಿರಿಯಾಪಟ್ಟಣದ ಕಾಫಿ ಕ್ಯೂರಿಂಗ್ ಕಂಪೆನಿಯೊಂದರಿಂದ ತಲಾ 60 ಕೆಜಿ ತೂಕದ 320 ಗೋಣಿ ಚೀಲ ಬ್ಯಾಗ್ ಗಳನ್ನು ಲೋಡ್ ಮಾಡಿಕೊಂಡು ಮಂಗಳೂರಿಗೆ ತೆರಳುತ್ತಿದ್ದರು. ಅದೇ ದಿನ ರಾತ್ರಿ ಪುತ್ತೂರಿಗೆ ತಲುಪಿ, ಕಬಕ ನೆಹರೂ ನಗರ ಎಂಬಲ್ಲಿ ರಸ್ತೆ ಬದಿ ಲಾರಿಯನ್ನು ನಿಲ್ಲಿಸಿ ಡೋರ್ ಲಾಕ್ ಮಾಡಿ ಮನೆಗೆ ತೆರಳಿದ್ದರು. ಮರುದಿನ ಡಿ.04ರಂದು ಬೆಳಗ್ಗೆ ಮರಳಿ ಬಂದು ಸದ್ರಿ ಲಾರಿಯನ್ನು ಚಲಾಯಿಸುತ್ತಾ ಮಧ್ಯಾಹ್ನ ವೇಳೆ ಮಂಗಳೂರಿನ ಬಂದರಿಗೆ ತಲುಪಿರುತ್ತಾರೆ.




ಈ ವೇಳೆ ಕಂಪೆನಿಯವರು ಕ್ವಾಲಿಟಿ ಚೆಕ್ ಮಾಡಲು ಬಂದಾಗ, ಲಾರಿಯ ಹಿಂಬದಿಯ ಸೀಲ್ ಲಾಕ್ ತುಂಡಾಗಿರುವುದು ಕಂಡು ಬಂದಿದ್ದು, ಲೋಡನ್ನು ಪರಿಶೀಲಿಸಿದಾಗ, ಲಾರಿಯಲ್ಲಿದ್ದ ಕಾಫಿ ಬೀಜ ತುಂಬಿದ ಗೋಣಿಚೀಲಗಳ ಪೈಕಿ ಸುಮಾರು ರೂ 21,44,000/-ಮೌಲ್ಯದ 80 ಗೋಣಿ ಚೀಲಗಳು ಕಳವಾಗಿರುವುದು ಕಂಡುಬಂದಿತ್ತು. ಈ ಬಗ್ಗೆ ತೃತೇಶ್ ನೀಡಿದ ದೂರಿನ ಮೇರೆಗೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು, ಆರೋಪಿ ಆಶ್ಲೇಷ ಭಟ್ ಎಂಬಾತ ತನ್ನ ಸಹಚರರಾದ ನಾರಾಯಣ ಶೆಟ್ಟಿಗಾರ್, ಮಿಥುನ್ ಕುಮಾರ, ವಿಜಯ ಶೆಟ್ಟಿ ಮತ್ತು ಮಹಮ್ಮದ್ ಅಶ್ರಫ್ ಎಂಬವರೊಂದಿಗೆ ಸೇರಿ ಕೃತ್ಯ ನಡೆಸಿರುವುದು ತಿಳಿದುಬಂದಿರುತ್ತದೆ. ಸದ್ರಿ ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆದು, ಕೃತ್ಯಕ್ಕೆ ಬಳಸಿದ ಎರಡು ಆಟೋ, ಒಂದು ಗೂಡ್ಸ್ ಟೆಂಪೋವನ್ನು ಹಾಗೂ ಕಳವಾದ 60 ಕೆಜಿ ತೂಕದ ಕಾಫಿ ತುಂಬಿದ 80 ಚೀಲಗಳನ್ನು ಸ್ವಾಧೀನಪಡಿಸಲಾಗಿದೆ.
A major theft took place in Puttur where 80 bags of coffee worth ₹21.44 lakh were stolen from a lorry parked overnight. The Puttur Police have arrested five accused and recovered the stolen bags along with the vehicles used in the crime.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm