ಬ್ರೇಕಿಂಗ್ ನ್ಯೂಸ್
10-12-25 10:14 pm Udupi Correspondent ಕ್ರೈಂ
ಉಡುಪಿ, ಡಿ.10: ಕಳೆದ ವರ್ಷ ಮಲ್ಪೆ ವಡಭಾಂಡೇಶ್ವರ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಅಕ್ರಮ ಬಾಂಗ್ಲಾ ವಲಸಿಗರನ್ನು ಪೊಲೀಸರು ಬಂಧಿಸಿದ್ದು, ಅವರಿಗೆ ನ್ಯಾಯಾಲಯ ಎರಡು ವರ್ಷಗಳ ಸಜೆ ಮತ್ತು 10,000 ರೂ. ದಂಡ ವಿಧಿಸಿದೆ.
ಆರೋಪಿಗಳು ಭಾರತ ದೇಶದ ಯಾವುದೇ ಅನುಮತಿ ದಾಖಲೆಗಳನ್ನು ಪಡೆಯದೇ, ಅಕ್ರಮವಾಗಿ ನಕಲಿ ಆಧಾರ್ ಕಾರ್ಡ್ ದಾಖಲೆಗಳನ್ನು ಸೃಷ್ಟಿಸಿ, ಬಾಂಗ್ಲಾದೇಶದಿಂದ ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮದ ಹೂಡೆಗೆ ಬಂದಿದ್ದರು. ಅವರನ್ನು ವಶಕ್ಕೆ ಪಡೆದ ಮಲ್ಪೆ ಪೊಲೀಸರು ಅವರ ವಿರುದ್ದ ಕಲಂ 336(2), 336(3), 340(2), 319(2), 318(4) ಜೊತೆಗೆ 3(5) BNS ಮತ್ತು 14(A) ವಿದೇಶೀಗರ ಕಾಯ್ದೆ, ಕಲಂ:34, 42 ಆಧಾರ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.
ಅಕ್ರಮವಾಗಿ ಉಡುಪಿಗೆ ಬಂದ ಆರೋಪಿಗಳಾದ ಹಕೀಮ್ ಆಲಿ, ಸುಜೋನ್ ಎಸ್.ಕೆ., ಇಸ್ಮಾಯಿಲ್ ಎಸ್.ಕೆ., ಕರೀಮ್ ಎಸ್.ಕೆ, ಸಲಾಂ ಎಸ್.ಕೆ, ರಾಜಿಕುಲ್ ಎಸ್.ಕೆ, ಮೊಹಮ್ಮದ್ ಸೋಜಿಬ್, ರಿಮೂಲ್, ಮೊಹಮ್ಮದ್ ಇಮಾಮ್ ಶೇಖ್ ಹಾಗೂ ಮೊಹಮ್ಮದ್ ಜಹಾಂಗಿರ್ ಆಲಂ ವಿರುದ್ದ ಪೊಲೀಸರು ಉಡುಪಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಡಿಸೆಂಬರ್ 8ರಂದು 10 ಮಂದಿ ಆರೋಪಿಗಳಿಗೆ ಎರಡು ವರ್ಷಗಳ ಕಾಲ ಸಜೆ ಮತ್ತು ತಲಾ 10,000 ರೂ. ದಂಡ ವಿಧಿಸಿ ಆದೇಶಿಸಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
A local court has sentenced ten Bangladeshi nationals to two years imprisonment and imposed a fine of ₹10,000 each after they were arrested last year for illegally residing in Malpe.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm