ಬ್ರೇಕಿಂಗ್ ನ್ಯೂಸ್
11-12-25 09:53 pm HK News Desk ಕ್ರೈಂ
ಹಾಸನ, ಡಿ.11 : ಕೊಲೆ ಮಾಡಿ ಶವದೆದುರು ಸೆಲ್ಪಿ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಆರೋಪಿಯನ್ನು ಹಾಸನ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಪ್ರಕರಣ ಬೆಳಕಿಗೆ ಬಂದು 24 ಗಂಟೆಯಲ್ಲಿ ಆರೋಪಿ ಉಲ್ಲಾಸ್ವ ಕ್ಯಾತೆ ಸೆರೆಯಾಗಿದ್ದಾನೆ.
ಆರೋಪಿಗಳ ಸೆರೆಗೆ ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಐದು ತಂಡಗಳನ್ನು ರಚಿಸಿದ್ದರು. ಕೀರ್ತಿ ಎಂಬಾತನ ಕೊಲೆ ನಂತರ ಉಲ್ಲಾಸ್ ಶವದೆದುರು ಸೆಲ್ಫಿ ವಿಡಿಯೋ ಮಾಡಿ ಹಂಚಿಕೊಂಡಿದ್ದ. ಮರ್ಡರ್ ಆಯ್ತು.. ಹೊಡೆದಿದ್ದೀವಿ, ಹೊಡೆದಿದ್ದೀವಿ.. ಮರ್ಡರ್ ಎಂದು ಕೂಗುತ್ತಾ ಸೆಲ್ಪಿ ವಿಡಿಯೋ ಮಾಡಿದ್ದ. ಡಿ.9 ರಂದು ಬಿಟ್ಟಗೌಡನಹಳ್ಳಿಯಲ್ಲಿ ಹಾಸನ ತಾಲ್ಲೂಕಿನ ಹೂವಿನಹಳ್ಳಿ ಯುವಕ ಆಟೋ ಚಾಲಕ ಕೀರ್ತಿ ಎಂಬ ಯುವಕನ ಕೊಲೆಯಾಗಿತ್ತು.
ಉಲ್ಲಾಸ್ ಮತ್ತು ಸ್ನೇಹಿತರು ಕೊಲೆ ಮಾಡಿ ಎಸ್ಕೇಪ್ ಆಗಿದ್ದರು. ನಂತರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದು ಸ್ಥಳ ಮಹಜರು ವೇಳೆ ಕೃತ್ಯಕ್ಕೆ ಬಳಸಿದ್ದ ಕಲ್ಲು, ಕೊಲೆ ಮಾಡಿದ ಜಾಗ ತೋರಿಸಿದ್ದಾನೆ.
ಕುಡಿದು ಗಲಾಟೆ ಮಾಡಿ ಉಲ್ಲಾಸ್ ಮೇಲೆ ಕೀರ್ತಿ ಹಲ್ಲೆ ಮಾಡಿದ್ದ. ಇದರ ಸೇಡು ತೀರಿಸಿಕೊಳ್ಳಲು ಎಣ್ಣೆ ಪಾರ್ಟಿ ನೆಪದಲ್ಲಿ ಉಲ್ಲಾಸ್ ಮತ್ತು ಸ್ನೇಹಿತರು ಕೀರ್ತಿಯನ್ನು ಕರೆದೊಯ್ದಿದ್ದು ಕೊಲೆ ಮಾಡಿದ್ದರು. ಡಿ.7ರಂದು ಹೊಡೆದಿದ್ದು ಮರುದಿನ ಸ್ನೇಹಿತರ ಜೊತೆ ಬಂದು ಕೀರ್ತಿಯನ್ನು ಎಣ್ಣೆ ಪಾರ್ಟಿಗೆ ಕರೆದೊಯ್ದಿದ್ದ. ಕುಡಿದ ಮತ್ತಿನಲ್ಲಿ ಕೀರ್ತಿಗೆ ಹಲ್ಲೆಗೈದು ನಂತರ ಎದೆ ಭಾಗಕ್ಕೆ ಕಲ್ಲು ಎತ್ತಿ ಹಾಕಿ ಕೀರ್ತಿಯನ್ನು ಕೊಂದಿದ್ದರು. ಪ್ರಮುಖ ಆರೋಪಿ ಸೈಕೋ ಕಿಲ್ಲರ್ ಉಲ್ಲಾಸ್ ಬಂಧನವಾಗುತ್ತಲೇ ಕೊಲೆಯ ಕಾರಣವೂ ಬಯಲಾಗಿದೆ.
In a shocking case where the killer filmed a selfie video beside the victim’s body, Hassan police have arrested the prime accused, Ullas, from Bengaluru within 24 hours of the incident coming to light.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm