ಬ್ರೇಕಿಂಗ್ ನ್ಯೂಸ್
13-12-25 12:51 pm HK News Desk ಕ್ರೈಂ
ಶಿವಮೊಗ್ಗ, ಡಿ.13: ಪ್ರೇಮಿಗಳಿಬ್ಬರು ಮನೆ ಬಿಟ್ಟು ಓಡಿ ಹೋಗಲು ಸಹಕಾರಿಸಿದ್ದಾರೆ ಎಂದು ತಪ್ಪು ಕಲ್ಪನೆಯಿಂದ ವ್ಯಕ್ತಿಯೊಬ್ಬ ಇಬ್ಬರನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ.
ಭದ್ರಾವತಿಯ ಜೈ ಭೀಮ್ ನಗರದ ಕಿರಣ್(25) ಹಾಗೂ ಪೌರ ಕಾರ್ಮಿಕ ಮಂಜುನಾಥ್(45) ಕೊಲೆಯಾದ ದುರ್ದೈವಿಗಳು. ಘಟನೆ ಕುರಿತು ಸಂಜಯ್, ಶಶಿ, ವೆಂಕಟೇಶ್, ಭರತ್ ಹಾಗೂ ಸುರೇಶ್ ಸೇರಿ ಐವರನ್ನು ಬಂಧಿಸಿರುವುದಾಗಿ ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ಭದ್ರಾವತಿಯ ಹಳೇ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೈ ಭೀಮ್ ನಗರದ ಪ್ರೇಮಿಗಳಿಬ್ಬರು ಮೊನ್ನೆ ಮನೆಯಿಂದ ನಾಪತ್ತೆಯಾಗಿದ್ದರು. ಈ ಕುರಿತು ಹುಡುಗ ಮತ್ತು ಹುಡುಗಿಯ ಎರಡೂ ಕಡೆಯ ಕುಟುಂಬದವರು ಹಳೇ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುತ್ತಾರೆ. ನಿನ್ನೆ ಸಂಜೆ ಪ್ರೇಮಿಗಳಿಬ್ಬರು ತಮಗೆ ಜೀವ ಬೆದರಿಕೆ ಇದೆ ಎಂದು ಹಳೇ ನಗರ ಪೊಲೀಸ್ ಠಾಣೆಗೆ ಆಗಮಿಸಿದ್ದರು. ಆಗ ಜೈ ಭೀಮ್ ನಗರದ ಕಿರಣ್, ಮಂಜುನಾಥ್ ಸೇರಿ ಹಲವರು ಪೊಲೀಸ್ ಠಾಣೆಗೆ ಬಂದು ಪ್ರೇಮಿಗಳಿಬ್ಬರ ಬಳಿ ಮಾತನಾಡುವಾಗ ಹುಡುಗಿಯ ಸಹೋದರ ಬಂದು ನನ್ನ ತಂಗಿಯ ಪ್ರೇಮಕ್ಕೆ ನೀವೆಲ್ಲಾ ಬೆಂಬಲ ನೀಡಿದ್ದೀರಿ ಎಂದು ಠಾಣೆಯಲ್ಲೇ ಗಲಾಟೆ ಮಾಡಿದ್ದಾನೆ. ಪೊಲೀಸರು ಗಲಾಟೆ ತಡೆದು ಮನೆಗೆ ಕಳುಹಿಸಿದ್ದರು. ಅಷ್ಟಕ್ಕೆ ಸುಮ್ಮನಾಗದ ಹುಡುಗಿಯ ಸಹೋದರ, ರಾತ್ರಿ ಕಿರಣ್, ಮಂಜುನಾಥ್ ಮನೆಯ ಬಳಿ ಬಂದು ಕಿರಿಕ್ ತೆಗೆದಿದ್ದಾನೆ.
ಈ ವೇಳೆ ಜಗಳ ವಿಕೋಪಕ್ಕೆ ಹೋಗಿದ್ದು, ನನ್ನ ತಂಗಿ ತನ್ನ ಪ್ರೇಮಿಯ ಜೊತೆ ಓಡಿ ಹೋಗಲು ನೀವೇ ಮುಖ್ಯ ಕಾರಣ ಎಂದು ತಾನು ತಂದಿದ್ದ ಚಾಕುವಿನಿಂದ ಕಿರಣ್ ಹಾಗೂ ಮಂಜುನಾಥನಿಗೆ ಇರಿದು ಕೊಂದು ಸ್ಥಳದಿಂದ ಪರಾರಿಯಾಗಿದ್ಧಾನೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಪೌರ ಕಾರ್ಮಿಕ ಮಂಜುನಾಥ್ ಸ್ಥಳದಲ್ಲಿಯೇ ಮೃತಪಟ್ಟರೆ, ಕಿರಣ್ ಶಿವಮೊಗ್ಗದ ಮೆಗ್ಗಾನ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾನೆ.
ಪ್ರಕರಣ ಸಂಬಂಧ ಹಳೇ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಐವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಹಲವರಿದ್ದು, ಅವರನ್ನು ಬಂಧಿಸುವಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
A shocking double murder was reported in Bhadravati town of Shivamogga district, where two men were stabbed to death following a dispute linked to a love affair. Police have arrested five accused in connection with the crime.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm