ಬ್ರೇಕಿಂಗ್ ನ್ಯೂಸ್
15-12-25 11:42 am Bangalore Correspondent ಕ್ರೈಂ
ಬೆಂಗಳೂರು, ಡಿ 15 : ಪೊಲೀಸ್ ಸಮವಸ್ತ್ರ ಧರಿಸಿ, ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ ನಕಲಿ ಪಿಎಸ್ಐ ಸೇರಿದಂತೆ ನಾಲ್ವರು ಆರೋಪಿಗಳನ್ನು ನಗರದ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಕಲಿ ಪಿಎಸ್ಐ ಮಲ್ಲಿಕಾರ್ಜುನ್, ಪ್ರಮೋದ್, ವಿನಯ್ ಮತ್ತು ಋತ್ವಿಕ್ ಬಂಧಿತರು. ಆರೋಪಿಗಳಿಂದ 45 ಸಾವಿರ ರೂಪಾಯಿ ನಗದು, ಕೃತ್ಯಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಲಾಗಿದೆ. ಐಷಾರಾಮಿ ಜೀವನ ನಡೆಸಬೇಕೆಂದು ಇಚ್ಚಿಸಿದ್ದ ಮಲ್ಲಿಕಾರ್ಜುನ್ಗೆ ಇತರೆ ಆರೋಪಿಗಳು ಸಾಥ್ ಕೊಟ್ಟಿದ್ದರು ಎಂದು ಪೊಲೀಸರು ತಿಳಿಸಿದರು.
ದೂರುದಾರ ನವೀನ್ ಎಂಬವರನ್ನು ಹತ್ತಿರದಿಂದ ಗಮನಿಸಿದ್ದ ಹೃತ್ವಿಕ್, ಆತನ ಮನೆಗೆ ನುಗ್ಗಿದರೆ ಹಣ, ಚಿನ್ನಾಭರಣ ಸಿಗಲಿದೆ ಎಂದು ಮಲ್ಲಿಕಾರ್ಜುನ್ನಿಗೆ ತಿಳಿಸಿದ್ದಾನೆ. ಅದರಂತೆ ಡಿಸೆಂಬರ್ 7ರಂದು ಪೊಲೀಸ್ ಸಮವಸ್ತ್ರ ಧರಿಸಿ ನವೀನ್ ಮನೆಗೆ ಕಾರಿನಲ್ಲಿ ಆರೋಪಿಗಳು ಧಾವಿಸಿದ್ದರು. 'ನೀನು ಗಾಂಜಾ ಮಾರಾಟ ಮಾಡುತ್ತಿದ್ದೀಯಾ, ಮನೆ ಶೋಧ ನಡೆಸಬೇಕು ಎಂದು ಬೆದರಿಸಿ ನವೀನ್ ಅವರ ಮೇಲೆ ಲಾಠಿ, ಕಬ್ಬಿಣದ ರಾಡ್ನಿಂದ ಹಲ್ಲೆ ಮಾಡಿದ್ದರು. ಬಂಧನ ಮಾಡಬಾರದೆಂದರೆ ಹಣ ಕೊಡಬೇಕು ಎಂದು ಖಾತೆಯಲ್ಲಿದ್ದ 87 ಸಾವಿರ ರೂ., ಬೀರುವನಲ್ಲಿದ್ದ 53 ಸಾವಿರ ರೂ. ಹಾಗೂ ಪರ್ಸ್ನಲ್ಲಿದ್ದ 2 ಸಾವಿರ ರೂ. ಪಡೆದುಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ನವೀನ್ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಕೈಗೊಂಡ ವಿದ್ಯಾರಣ್ಯಪುರ ಠಾಣೆ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿ 45 ಸಾವಿರ ರೂಪಾಯಿ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಜಪ್ತಿ ಮಾಡಿದ್ದಾರೆ.
ಪಿಎಸ್ಐ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ್ ಎರಡು ಬಾರಿ ಪರೀಕ್ಷೆ ಬರೆದರೂ ಉತ್ತೀರ್ಣನಾಗಿರಲಿಲ್ಲ. ಆದರೂ ಸಹ ತಾನು ಉತ್ತೀರ್ಣನಾಗಿ ಪಿಎಸ್ಐ ಆಗಿದ್ದೇನೆ ಎಂದು ಊರಿನವರ ಮುಂದೆ ಬಿಂಬಿಸಿಕೊಂಡಿದ್ದ. ಪೊಲೀಸ್ ಸಮವಸ್ತ್ರ, ಲಾಠಿ, ಟೋಪಿ ಹಾಗೂ ಶೂ ಧರಿಸಿ ಫೋಟೋ ಶೂಟ್ ಮಾಡಿಸಿದ್ದ. ಸ್ವಗ್ರಾಮ ಸಿರಗುಪ್ಪದಲ್ಲಿ ತಾನೂ ಬೆಂಗಳೂರಲ್ಲಿ ಪಿಎಸ್ಐ ಆಗಿದ್ದೇನೆ ಎಂದು ಹೇಳಿಕೊಂಡಿದ್ದ ಎಂದು ಪೊಲೀಸರು ತಿಳಿಸಿದರು.
In a shocking case of police impersonation, Vidyaranayapura police in Bengaluru have arrested four men, including a fake PSI, for wearing police uniforms, threatening civilians and extorting money.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm