ಬ್ರೇಕಿಂಗ್ ನ್ಯೂಸ್
21-12-25 08:55 pm HK News Desk ಕ್ರೈಂ
ಮಂಗಳೂರು, ಡಿ.21: ನಗರದಲ್ಲಿ 51 ವರ್ಷದ ಬ್ಯಾಂಕ್ ಗ್ರಾಹಕರೊಬ್ಬರು ಸೈಬರ್ ವಂಚಕರ ಜಾಲಕ್ಕೆ ಸಿಲುಕಿದ್ದು, ವಂಚಕರಿಗೆ 6 ಲಕ್ಷ ರೂಪಾಯಿ ವರ್ಗಾವಣೆಗೆ ಪ್ರಯತ್ನ ಪಡುತ್ತಿದ್ದಾಗಲೇ ಬ್ಯಾಂಕ್ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಸೈಬರ್ ವಂಚನೆಯ ಸುಳಿವು ಪಡೆದು ಹಣ ವರ್ಗಾವಣೆಯಾಗದಂತೆ ತಡೆದಿದ್ದಾರೆ.
ಎರಡು ಮೂರು ದಿನಗಳಿಂದ ಕೆಲವು ಖಾತೆಗಳಿಗೆ ಹಣ ಠೇವಣಿ ಮಾಡಲು ಬರುತ್ತಿದ್ದ ಗ್ರಾಹಕನ ಬಗ್ಗೆ ನಗರದ ಕೆನರಾ ಬ್ಯಾಂಕ್ ಅಧಿಕಾರಿಗಳು ಗಮನಿಸಿ, ಸೆನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಗ್ರಾಹಕನ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆ ವ್ಯಕ್ತಿಯನ್ನು ವಿಚಾರಿಸಿದಾಗ ಸೈಬರ್ ವಂಚನೆಗೆ ಒಳಪಟ್ಟು ಅಂದಾಜು 22 ಲಕ್ಷ ರೂ.ಗಳಿಗೂ ಅಧಿಕ ಹಣ ಕಳೆದುಕೊಂಡಿರುವುದು ಕಂಡುಬಂದಿತ್ತು. ಶನಿವಾರ ಮತ್ತೆ ಸುಮಾರು 6 ಲಕ್ಷ ರೂ.ಗಳನ್ನು ಠೇವಣಿ ಮಾಡಲು ಬ್ಯಾಂಕ್ ಶಾಖೆಗೆ ಸಂತ್ರಸ್ತ ವ್ಯಕ್ತಿ ಭೇಟಿ ನೀಡಿದ್ದರು. ಈ ಸಂದರ್ಭ ಪೊಲೀಸ್ ಅಧಿಕಾರಿಗಳು ಹಣ ಠೇವಣಿ ಮಾಡದಂತೆ ಸಂತ್ರಸ್ತ ಗ್ರಾಹಕನಿಗೆ ಜಾಗೃತಿ ಮೂಡಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
ಕಮಿಷನರ್ ಸುಧೀರ್ ರೆಡ್ಡಿ ಪ್ರತಿಕ್ರಿಯಿಸಿ, ನಾವು ಇತ್ತೀಚೆಗೆ ಬ್ಯಾಂಕರ್ ಗಳ ಸಭೆಯನ್ನು ಕರೆದು, ಸಂಭಾವ್ಯ ಸೈಬರ್ ವಂಚನೆಗಳನ್ನು ಗುರುತಿಸಲು ಮತ್ತು ಗ್ರಾಹಕರನ್ನು ರಕ್ಷಿಸಲು ತಮ್ಮ ಬ್ಯಾಂಕ್ಗಳಲ್ಲಿ ಗ್ರಾಹಕರಿಂದ ಅನುಮಾನಾಸ್ಪದ ವಹಿವಾಟುಗಳ ಬಗ್ಗೆ ನಿಗಾ ಇರಿಸುವಂತೆ ಕೇಳಿಕೊಂಡಿದ್ದೆವು. ಅದರಂತೆ ಕೆನರಾ ಬ್ಯಾಂಕ್ನ ಅಧಿಕಾರಿಗಳು ಅನುಮಾನದಲ್ಲಿ ಮಾಹಿತಿ ನೀಡಿದ್ದು ಸೈಬರ್ ವಂಚನೆಗೆ ಒಳಗಾಗಿದ್ದ ಗ್ರಾಹಕರೊಬ್ಬರು ಮತ್ತಷ್ಟು ಹಣ ಕಳಕೊಳ್ಳುವುದರಿಂದ ರಕ್ಷಿಸಲಾಗಿದೆ. ಪ್ರಕರಣದ ಬಗ್ಗೆ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದಿದ್ದಾರೆ.
A 51-year-old bank customer in the city narrowly escaped losing another ₹6 lakh to cyber fraudsters, thanks to the alertness of Canara Bank staff who informed the police after noticing suspicious transactions.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am