ಬ್ರೇಕಿಂಗ್ ನ್ಯೂಸ್
21-12-25 09:36 pm Mangalore Correspondent ಕ್ರೈಂ
ಮಂಗಳೂರು, ಡಿ.21 : ವಾಹನ ಸಂಚಾರ ನಿಯಮ ಉಲ್ಲಂಘನೆಯ ದಂಡ ಕಟ್ಟುವಂತೆ ಮೊಬೈಲಿಗೆ ಬಂದಿದ್ದ ಸಂದೇಶವನ್ನು ನಂಬಿ ಎಪಿಕೆ ಲಿಂಕ್ ಕ್ಲಿಕ್ ಮಾಡಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 1.43 ಲಕ್ಷ ಮತ್ತು 5.85 ಲಕ್ಷ ರೂ. ವಂಚನೆ ನಡೆದಿರುವ ಬಗ್ಗೆ ಸುರತ್ಕಲ್ ಮತ್ತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿಯೊಬ್ಬರಿಗೆ ಡಿ.4ರಂದು ಮೊಬೈಲ್ ಸಂದೇಶ ಬಂದಿದ್ದು, ಅದನ್ನು ನಂಬಿ ಆರ್ಟಿಒ ಹೆಸರಿನಲ್ಲಿದ್ದ ಎಪಿಕೆ ಫೈಲ್ ಡೌನ್ ಲೋಡ್ ಮಾಡಿದ್ದಾರೆ. ಬಳಿಕ ಅದು ವಂಚನಾ ಜಾಲದ ಲಿಂಕ್ ಎಂದು ತಿಳಿದು ಅದೇ ದಿನ ಡಿಲೀಟ್ ಮಾಡಿದ್ದಾರೆ. ಆದರೆ ಡಿ.16ರಂದು ಅವರ ಖಾತೆಯಿಂದ 99 ಸಾವಿರ ಹಾಗೂ 44 ಸಾವಿರ ರೂ. ಕಡಿತವಾಗಿದೆ. ಈ ಬಗ್ಗೆ ಬ್ಯಾಂಕ್ಗೆ ತೆರಳಿ ವಿಚಾರಿಸಿದಾಗ ಅರವಿಂದ್ ಕೆ. ಮತ್ತು ಶ್ರೀರಾಮ್ ಎಂಬವರ ಯುಪಿಐ ಐಡಿಗೆ ಹಣ ವರ್ಗಾವಣೆಯಾಗಿದೆ ಎಂದು ಬ್ಯಾಂಕ್ ಸಿಬಂದಿ ತಿಳಿಸಿದ್ದಾರೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಗೋವಾಕ್ಕೆ ತೆರಳಿದ್ದ ಮಂಗಳೂರಿನ ವ್ಯಕ್ತಿಯೊಬ್ಬರಿಗೆ ಡಿ.3ರಂದು ಸಂಜೆ ಅವರ ವಾಟ್ಸ್ ಆ್ಯಪ್ ಗೆ ಅಪರಿಚಿತ ಸಂಖ್ಯೆಯಿಂದ ಆರ್ ಟಿಓ ದಂಡ ಇರುವ ಬಗ್ಗೆ ಮೆಸೇಜ್ ಬಂದಿದೆ. ಅದರಲ್ಲಿ ಎಪಿಕೆ ಟ್ರಾಫಿಕ್ ವೆಹಿಕಲ್ ನೋಟಿಸ್ ಎಂದಿತ್ತು. ವಾಹನದ ಸಂಚಾರ ನಿಯಮ ಉಲ್ಲಂಘನೆಯಾಗಿರುವ ಬಗ್ಗೆ ಚಲನ್ ಹಣ ಪಾವತಿ ಮಾಡಲು ಹಾಗೂ ರಸ್ತೆ ಸಂಚಾರ ನಿಯಮ ಉಲ್ಲಂಘನೆ ಫೋಟೊ, ವಿಡಿಯೋ ನೋಡಲು ಮೆಸೇಜ್ ಡೌನ್ ಲೋಡ್ ಮಾಡುವಂತೆ ತಿಳಿಸಲಾಗಿತ್ತು. ಅದನ್ನು ಡೌನ್ ಲೋಡ್ ಮಾಡುತ್ತಿದ್ದಂತೆ ಅವರ ಮೊಬೈಲಿಗೆ ಹಲವು ಓಟಿಪಿಗಳು ಬಂದಿವೆ. ಈ ಎಲ್ಲ ಓಟಿಪಿಗಳು ಅಪರಿಚಿತ ನಂಬರ್ಗಳ ಹ್ಯಾಕಿಂಗ್ ಮೂಲಕ ಫಾರ್ವರ್ಡ್ ಆಗಿದ್ದವು. ಇದೇ ವೇಳೆ ಅವರ ಕ್ರೆಡಿಟ್ ಕಾರ್ಡ್ಗಳಿಂದ ಒಟ್ಟು 5,85,084 ರೂ.ವನ್ನು ಸೈಬರ್ ವಂಚಕರು ಶಾಪಿಂಗ್ ಇನ್ನಿತರ ವ್ಯವಹಾರಗಳಿಗೆ ದುರ್ಬಳಕೆ ಮಾಡಿದ್ದಾರೆ. ಮಂಗಳೂರಿಗೆ ಬಂದ ಬಳಿಕ ಅವರಿಗೆ ಫೋನ್ ಹ್ಯಾಕ್ ಆಗಿರುವ ಬಗ್ಗೆ ತಿಳಿದುಬಂದಿದ್ದು ಆ್ಯಪ್ ಡಿಲೀಟ್ ಮಾಡಿ ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ.
Cyber fraudsters have cheated two city residents of ₹1.43 lakh and ₹5.85 lakh in separate incidents after tricking them into downloading malicious APK files sent under the guise of traffic fine notices. Cases have been registered at the Surathkal and Pandeshwar police stations.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm