ಬ್ರೇಕಿಂಗ್ ನ್ಯೂಸ್
21-12-25 09:36 pm Mangalore Correspondent ಕ್ರೈಂ
ಮಂಗಳೂರು, ಡಿ.21 : ವಾಹನ ಸಂಚಾರ ನಿಯಮ ಉಲ್ಲಂಘನೆಯ ದಂಡ ಕಟ್ಟುವಂತೆ ಮೊಬೈಲಿಗೆ ಬಂದಿದ್ದ ಸಂದೇಶವನ್ನು ನಂಬಿ ಎಪಿಕೆ ಲಿಂಕ್ ಕ್ಲಿಕ್ ಮಾಡಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 1.43 ಲಕ್ಷ ಮತ್ತು 5.85 ಲಕ್ಷ ರೂ. ವಂಚನೆ ನಡೆದಿರುವ ಬಗ್ಗೆ ಸುರತ್ಕಲ್ ಮತ್ತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿಯೊಬ್ಬರಿಗೆ ಡಿ.4ರಂದು ಮೊಬೈಲ್ ಸಂದೇಶ ಬಂದಿದ್ದು, ಅದನ್ನು ನಂಬಿ ಆರ್ಟಿಒ ಹೆಸರಿನಲ್ಲಿದ್ದ ಎಪಿಕೆ ಫೈಲ್ ಡೌನ್ ಲೋಡ್ ಮಾಡಿದ್ದಾರೆ. ಬಳಿಕ ಅದು ವಂಚನಾ ಜಾಲದ ಲಿಂಕ್ ಎಂದು ತಿಳಿದು ಅದೇ ದಿನ ಡಿಲೀಟ್ ಮಾಡಿದ್ದಾರೆ. ಆದರೆ ಡಿ.16ರಂದು ಅವರ ಖಾತೆಯಿಂದ 99 ಸಾವಿರ ಹಾಗೂ 44 ಸಾವಿರ ರೂ. ಕಡಿತವಾಗಿದೆ. ಈ ಬಗ್ಗೆ ಬ್ಯಾಂಕ್ಗೆ ತೆರಳಿ ವಿಚಾರಿಸಿದಾಗ ಅರವಿಂದ್ ಕೆ. ಮತ್ತು ಶ್ರೀರಾಮ್ ಎಂಬವರ ಯುಪಿಐ ಐಡಿಗೆ ಹಣ ವರ್ಗಾವಣೆಯಾಗಿದೆ ಎಂದು ಬ್ಯಾಂಕ್ ಸಿಬಂದಿ ತಿಳಿಸಿದ್ದಾರೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಗೋವಾಕ್ಕೆ ತೆರಳಿದ್ದ ಮಂಗಳೂರಿನ ವ್ಯಕ್ತಿಯೊಬ್ಬರಿಗೆ ಡಿ.3ರಂದು ಸಂಜೆ ಅವರ ವಾಟ್ಸ್ ಆ್ಯಪ್ ಗೆ ಅಪರಿಚಿತ ಸಂಖ್ಯೆಯಿಂದ ಆರ್ ಟಿಓ ದಂಡ ಇರುವ ಬಗ್ಗೆ ಮೆಸೇಜ್ ಬಂದಿದೆ. ಅದರಲ್ಲಿ ಎಪಿಕೆ ಟ್ರಾಫಿಕ್ ವೆಹಿಕಲ್ ನೋಟಿಸ್ ಎಂದಿತ್ತು. ವಾಹನದ ಸಂಚಾರ ನಿಯಮ ಉಲ್ಲಂಘನೆಯಾಗಿರುವ ಬಗ್ಗೆ ಚಲನ್ ಹಣ ಪಾವತಿ ಮಾಡಲು ಹಾಗೂ ರಸ್ತೆ ಸಂಚಾರ ನಿಯಮ ಉಲ್ಲಂಘನೆ ಫೋಟೊ, ವಿಡಿಯೋ ನೋಡಲು ಮೆಸೇಜ್ ಡೌನ್ ಲೋಡ್ ಮಾಡುವಂತೆ ತಿಳಿಸಲಾಗಿತ್ತು. ಅದನ್ನು ಡೌನ್ ಲೋಡ್ ಮಾಡುತ್ತಿದ್ದಂತೆ ಅವರ ಮೊಬೈಲಿಗೆ ಹಲವು ಓಟಿಪಿಗಳು ಬಂದಿವೆ. ಈ ಎಲ್ಲ ಓಟಿಪಿಗಳು ಅಪರಿಚಿತ ನಂಬರ್ಗಳ ಹ್ಯಾಕಿಂಗ್ ಮೂಲಕ ಫಾರ್ವರ್ಡ್ ಆಗಿದ್ದವು. ಇದೇ ವೇಳೆ ಅವರ ಕ್ರೆಡಿಟ್ ಕಾರ್ಡ್ಗಳಿಂದ ಒಟ್ಟು 5,85,084 ರೂ.ವನ್ನು ಸೈಬರ್ ವಂಚಕರು ಶಾಪಿಂಗ್ ಇನ್ನಿತರ ವ್ಯವಹಾರಗಳಿಗೆ ದುರ್ಬಳಕೆ ಮಾಡಿದ್ದಾರೆ. ಮಂಗಳೂರಿಗೆ ಬಂದ ಬಳಿಕ ಅವರಿಗೆ ಫೋನ್ ಹ್ಯಾಕ್ ಆಗಿರುವ ಬಗ್ಗೆ ತಿಳಿದುಬಂದಿದ್ದು ಆ್ಯಪ್ ಡಿಲೀಟ್ ಮಾಡಿ ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ.
Cyber fraudsters have cheated two city residents of ₹1.43 lakh and ₹5.85 lakh in separate incidents after tricking them into downloading malicious APK files sent under the guise of traffic fine notices. Cases have been registered at the Surathkal and Pandeshwar police stations.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
34 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm