ಬ್ರೇಕಿಂಗ್ ನ್ಯೂಸ್
22-12-25 01:06 pm Udupi Correspondent ಕ್ರೈಂ
ಉಡುಪಿ, ಡಿ 22 : ಮಲ್ಪೆ ಕೊಚ್ಚಿನ್ ಶಿಪ್ಯಾರ್ಡ್ ನೌಕರರು ಭಾರತದ ನೌಕಾಪಡೆಗೆ ಸಂಬಂಧಪಟ್ಟ ವಿವಿಧ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಶೇರ್ ಮಾಡಿ, ಅಕ್ರಮ ಲಾಭ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಗುಜರಾತ್ನ ಆನಂದ ತಾಲೂಕಿನ ಕೈಲಾಸ್ನಗರಿಯ ಹೀರೇಂದ್ರ ಕುಮಾರ್ (34) ಬಂಧಿತ ಆರೋಪಿ. ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿದೆ. ಕಳೆದ ನವೆಂಬರ್ 21ರಂದು ಇದೇ ಪ್ರಕರಣದಲ್ಲಿ, ಆರೋಪಿಗಳಾದ ಉತ್ತರ ಪ್ರದೇಶದ ರೋಹಿತ್ ಮತ್ತು ಸಂತ್ರಿ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.
ರೋಹಿತ್ ಮತ್ತು ಸಂತ್ರಿ ಮಲ್ಪೆಯ ಶಿಪ್ಯಾರ್ಡ್ ಸಹಗುತ್ತಿಗೆ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಇವರು ಭಾರತದ ನೌಕಾಸೇನೆಗೆ ಸಂಬಂಧಪಟ್ಟ ಹಡಗುಗಳ ನಂಬರ್ಗಳ ಗೌಪ್ಯ ಪಟ್ಟಿ, ಇತರ ಗೌಪ್ಯ ಮಾಹಿತಿಯನ್ನು ವಾಟ್ಸ್ಆ್ಯಪ್ ಮೂಲಕ ಪಾಕಿಸ್ತಾನಕ್ಕೆ ಹಂಚಿಕೊಂಡು, ಅಕ್ರಮ ಲಾಭ ಪಡೆದಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದೀಗ ಈ ಪ್ರಕರಣದ ತನಿಖೆ ಮಂದುವರೆಸಿದ ತನಿಖಾಧಿಕಾರಿ ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಹರ್ಷ ಪ್ರಿಯಂವದಾ ನೇತೃತ್ವದ ತಂಡ ಆರೋಪಿಗಳಿಗೆ ಮೊಬೈಲ್ ಸಿಮ್ ಕಾರ್ಡ್ ಒದಗಿಸಿದ ಆರೋಪದ ಮೇಲೆ ಹೀರೇಂದ್ರ ಕುಮಾರ್ನನ್ನು ಬಂಧಿಸಿದೆ. ಈತ ಹಣಕ್ಕಾಗಿ ತನ್ನ ಹೆಸರಿನಲ್ಲಿ ಮೊಬೈಲ್ ಸಿಮ್ ಪಡೆದು ಆರೋಪಿಗಳಿಗೆ ನೀಡಿದ್ದ. ಈತನನ್ನು ಕೂಡ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಾಕಿಸ್ತಾನಕ್ಕೆ ಮಾಹಿತಿ ರವಾನಿಸಿರುವುದು ದೃಢ: ''ಈ ಪ್ರಕರಣದ ಆರಂಭದಲ್ಲಿ ಆರೋಪಿಗಳು ಶಿಪ್ ಮತ್ತು ಇತರೆ ಮಾಹಿತಿಗಳನ್ನು ಹಣಕ್ಕಾಗಿ ಶೇರ್ ಮಾಡಿರುವುದು ಪಾಕಿಸ್ತಾನಕ್ಕೆ ಇರಬಹುದೇ ಎಂಬ ಬಗ್ಗೆ ಸಂಶಯವಿತ್ತು. ಈ ಕುರಿತು ತೀವ್ರ ತನಿಖೆ ನಡೆಸಿದಾಗ ಆರೋಪಿಗಳು ಶೇರ್ ಮಾಡಿರುವ ಮಾಹಿತಿಗಳು ಪಾಕಿಸ್ತಾನಕ್ಕೆ ರವಾನೆ ಆಗಿರುವುದು ದೃಢಪಟ್ಟಿದೆ. ತನಿಖೆಯಲ್ಲಿ ದೊರೆತ ತಾಂತ್ರಿಕ ಸಾಕ್ಷ್ಯಗಳಿಂದ ಅದು ಸಾಬೀತಾಗಿದೆ'' ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.
''ಇದೀಗ ಬಂಧಿತ ಆರೋಪಿ ಹೀರೇಂದ್ರ ಕುಮಾರ್, ಆರೋಪಿಗಳು ಪಾಕಿಸ್ತಾನದೊಂದಿಗೆ ಮಾಹಿತಿಗಳನ್ನು ಶೇರ್ ಮಾಡಲು ಬಳಸಿರುವ ಸಿಮ್ ಕಾರ್ಡ್ ನೀಡಿರುವುದಲ್ಲದೆ, ಈ ಸಿಮ್ ಮೂಲಕ ವಾಟ್ಸ್ಆ್ಯಪ್ ಆ್ಯಕ್ಟೀವ್ ಮಾಡಲು ಪಾಕಿಸ್ತಾನದಲ್ಲಿರುವ ವ್ಯಕ್ತಿಗಳಿಗೆ ಒಟಿಪಿ ಶೇರ್ ಮಾಡಿರುವುದು ಕೂಡ ಈತನೇ ಎಂಬುದು ಗೊತ್ತಾಗಿದೆ. ಅಲ್ಲದೆ, ಈತ ಈಗಾಗಲೇ ಬಂಧಿತರಾಗಿರುವ ಇಬ್ಬರು ಆರೋಪಿಗಳಿಗೆ ತಾಂತ್ರಿಕ ಸಲಹೆಗಳನ್ನು ನೀಡಿದ್ದ ಎಂಬುದು ಸ್ಪಷ್ಟವಾಗಿದೆ'' ಎಸ್ಪಿ ಮಾಹಿತಿ ನೀಡಿದ್ದಾರೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm