ಬ್ರೇಕಿಂಗ್ ನ್ಯೂಸ್
29-12-25 02:07 pm Bangalore Correspondent ಕ್ರೈಂ
ಬೆಂಗಳೂರು, ಡಿ 29 : ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರಿನ ನಂತರ ರಾಜಧಾನಿ ಬೆಂಗಳೂರು ಹಾಗೂ ಸುತ್ತಮತ್ತ ಸಕ್ರಿಯವಾಗಿದ್ದ ಮಾದಕ ವಸ್ತು ತಯಾರಿಕಾ ಜಾಲವನ್ನು ಮಹಾರಾಷ್ಟ್ರ ಪೊಲೀಸರು ಪತ್ತೆ ಮಾಡಿ, 55.88 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳ ನಡುವೆ ರಾಜಕೀಯ ಕೆಸರೆರಚಾಟ ಶುರುವಾಗಿದೆ.
ಮಾದಕ ವಸ್ತು ತಯಾರಿಕಾ ಜಾಲದ ವಿಚಾರವು ರಾಜಕೀಯ ಸ್ವರೂಪ ಪಡೆದಿದ್ದು, ಬಿಜೆಪಿ ನಾಯಕರು ರಾಜ್ಯ ಸರಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ''ಮಹಾರಾಷ್ಟ್ರದ ಮಾದಕ ದ್ರವ್ಯ ನಿಗ್ರಹ ಕಾರ್ಯಪಡೆ (ಎಂಎಎನ್ಟಿಎಫ್) ಬೆಂಗಳೂರಿನಲ್ಲಿ55 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿರುವುದಾಗಿ ಹೇಳಿದೆ. ಆದರೆ, ಇದು ಸತ್ಯಕ್ಕೆ ದೂರವಾದ ಮಾಹಿತಿ,'' ಎಂದು ಸ್ಪಷ್ಟಪಡಿಸಿದ್ದಾರೆ.



ಮಹಾರಾಷ್ಟ್ರ ಎಎನ್ಟಿಎಫ್ ಪೊಲೀಸರು ಮುಂಬಯಿನಲ್ಲಿಇತ್ತೀಚೆಗೆ 1.50 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿ, ಅಬ್ದುಲ್ಲಾ ಖಾದರ್ ಶೇಕ್ ಎಂಬಾತನನ್ನು ಬಂಧಿಸಿದ್ದರು. ಆರೋಪಿ ಅಬ್ದುಲ್ಲಾ ಖಾದರ್ ಶೇಕ್, ಪೊಲೀಸರ ವಿಚಾರಣೆ ವೇಳೆ ಮಹತ್ವದ ವಿಚಾರ ಬಾಯ್ಬಿಟ್ಟಿದ್ದ. ಈ ಮಾಹಿತಿ ಆಧರಿಸಿ ಮಹಾರಾಷ್ಟ್ರ ಪೊಲೀಸರು, ಬೆಳಗಾವಿಯ ಪ್ರಶಾಂತ್ ಯಲ್ಲಪ್ಪ ಪಾಟೀಲ್ ಎಂಬಾತನನ್ನು ಬಂಧಿಸಿದ್ದರು. ಪ್ರಶಾಂತ್ ಯಲ್ಲಪ್ಪ ಪಾಟೀಲ್ ನೀಡಿದ ಮಾಹಿತಿ ಆಧರಿಸಿ ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನ ಮೂರು ಕಡೆ ಮಾದಕ ವಸ್ತು ತಯಾರಿಕಾ ಘಟಕಗಳ ಮೇಲೆ ದಾಳಿ ಮಾಡಿದ್ದಾರೆ.
ಪ್ರಕರಣ ಸಂಬಂಧ ರಾಜಸ್ತಾನದ ಸೂರಜ್ ರಮೇಶ್ ಯಾದವ್, ಮಲ್ಖಾನ್ ರಾಮಲಾಲ್ ಬಿಷ್ಣೋಯ್ ಸೇರಿದಂತೆ ನಾಲ್ವರನ್ನು ಬಂಧಿಸಿ, 4.1 ಕೆ.ಜಿ ಘನ ರೂಪದ ಎಂಡಿಎಂಎ ಹಾಗೂ 17 ಕೆ.ಜಿ. ದ್ರವ ರೂಪದ ಎಂಡಿಎಂಎ ಸೇರಿದಂತೆ 55.88 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡಿರುವುದಾಗಿ ಮಹಾರಾಷ್ಟ್ರ ಎಎನ್ಟಿಎಫ್ ಅಧಿಕಾರಿಗಳು ಹೇಳಿದ್ದಾರೆ.
ರಾಜಸ್ತಾನ ಮೂಲದ ಕಿಂಗ್ಪಿನ್ಗಳು ಬೆಂಗಳೂರಿನಲ್ಲಿಮಾದಕ ವಸ್ತು ತಯಾರಿಕಾ ಕಾರ್ಖಾನೆಗಳನ್ನು ನಡೆಸುತ್ತಿದ್ದರು. ಯೋಗಿರಾಜ್ಕುಮಾರ್ ಮತ್ತು ನಯನ್ ಪವರ್ ಎಂಬುವರು ಈ ಜಾಲದ ರೂವಾರಿಗಳು. ಇವರು ಕರ್ನಾಟಕ ಮಾತ್ರವಲ್ಲದೆ ದೇಶದ ಹಲವೆಡೆ ಡ್ರಗ್ಸ್ ಕಾರ್ಖಾನೆ ನಡೆಸುತ್ತಿದ್ದಾರೆ. ಆರೋಪಿಗಳು ಬೆಂಗಳೂರಿನ ಮಾದಕ ವಸ್ತು ತಯಾರಿಕಾ ಘಟಕಗಳಿಂದ ದೇಶದ ಹಲವು ರಾಜ್ಯಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
In a major interstate operation, the Maharashtra Anti-Narcotics Task Force (ANTF) raided three drug manufacturing units in Bengaluru and surrounding areas, seizing MDMA worth ₹55.88 crore. The crackdown followed the arrest of Abdullah Khadar Sheikh in Mumbai, who revealed crucial information during interrogation.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm