ಬ್ರೇಕಿಂಗ್ ನ್ಯೂಸ್
30-12-25 12:42 pm Mangalore Correspondent ಕ್ರೈಂ
ಮಂಗಳೂರು, ಡಿ.30 : ತುಂಬೆ ಬಳಿಯ ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿ ದಾಂಧಲೆಗೈದ ಘಟನೆ ನಡೆದಿದ್ದು ಪ್ರಕರಣದಲ್ಲಿ ಇಬ್ಬರನ್ನು ಬಂಟ್ವಾಳ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಿಕ್ಕಮಗಳೂರು ಮೂಲದ ನಿವಾಸಿಗಳಾದ ಲಾರಿ ಚಾಲಕ ಭರತ್ (23) ಹಾಗೂ ಕ್ಲೀನರ್ ತೇಜಸ್ (26) ಬಂಧಿತ ಆರೋಪಿಗಳು.
ಡಿಸೆಂಬರ್ 29 ರಂದು ಮುಂಜಾನೆ ಲಾರಿಯಲ್ಲಿ ಬಂದ ಆರೋಪಿಗಳು ಬ್ರಹ್ಮರಕೂಟ್ಲು ಟೋಲ್ ಬಳಿ ರಸ್ತೆಯ ವಿರುದ್ಧ ಧಿಕ್ಕಿನಿಂದ ಬಂದಿದ್ದು, ಟೋಲ್ ಸಿಬ್ಬಂದಿಗಳು ಟೋಲ್ ಹಣ ಕೇಳಿದಾಗ ಹಣ ನೀಡಲು ನಿರಾಕರಿಸಿ ಲಾರಿಯನ್ನು ಮುಂದಕ್ಕೆ ಚಲಾಯಿಸಿ ಟೋಲ್ ಗೇಟಿಗೆ ಹಾನಿ ಮಾಡಿದ್ದಾರೆ. ಬಳಿಕ ಲಾರಿ ಚಾಲಕ ಹಾಗೂ ಕ್ಲೀನರ್ ಇಬ್ಬರು ಸೇರಿ ಟೋಲ್ ಗೇಟ್ ಸಿಬ್ಬಂದಿಗಳಾದ ಅಂಕಿತ್ ಹಾಗೂ ರೋಹಿತ್ ಎಂಬವರಿಗೆ ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದ್ದಾರೆ. ಬಳಿಕ ಇನ್ನೊಂದು ಪಿಕಪ್ ವಾಹನದಲ್ಲಿದ್ದ ಇಬ್ಬರು ವ್ಯಕ್ತಿಗಳನ್ನು ಕರೆದುಕೊಂಡು ಬಂದು ಟೋಲ್ ಬೂತ್ ಒಳಗಡೆ ನುಗ್ಗಿ ಮತ್ತೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಟೋಲ್ ಇನ್ ಚಾರ್ಜ್ ಆಗಿ ಕಾರ್ಯನಿರ್ವಹಿಸುತ್ತಿರುವ ಕಾಸರಗೋಡು-ಮುಳ್ಳೇರಿಯಾ ನಿವಾಸಿ ಪ್ರಶಾಂತ್ ಬಿ (25) ಅವರು ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Two individuals have been arrested by Bantwal Police for assaulting toll gate staff at the Brahmarakootlu Toll Gate near Tumbe. The arrested are Bharath (23), a lorry driver, and Tejas (26), a cleaner, both residents of Chikkamagaluru.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm