ಬ್ರೇಕಿಂಗ್ ನ್ಯೂಸ್
31-12-25 07:05 pm Mangalore Correspondent ಕ್ರೈಂ
ಪುತ್ತೂರು, ಡಿ.31 : ಸುಳ್ಯದ ವ್ಯಕ್ತಿಯೊಬ್ಬರನ್ನು ಕಳೆದ ಅಕ್ಟೋಬರ್ ತಿಂಗಳಲ್ಲಿ ಕಾರು ಬಾಡಿಗೆ ನೆಪದಲ್ಲಿ ದುಗ್ಗಲಡ್ಕ ಎಂಬಲ್ಲಿಗೆ ಕರೆದೊಯ್ದು ಹಲ್ಲೆಗೈದಿದ್ದು ಮರುದಿನ ವ್ಯಕ್ತಿ ಹಲ್ಲೆ ಆಘಾತದಿಂದ ಸಾವನ್ನಪ್ಪಿದ ಘಟನೆ ಸಂಬಂಧಿಸಿ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಸುಳ್ಯ ಕಸ್ಬಾ ಗ್ರಾಮದ ನಿವಾಸಿ ಸುಮಯ್ಯಾ (35) ಎಂಬವರ ದೂರಿನಂತೆ ಈ ಬಗ್ಗೆ ಕೊಲೆ ಪ್ರಕರಣ ದಾಖಲಾಗಿತ್ತು. ಮಹಿಳೆಯ ಗಂಡ ಅಬ್ದುಲ್ ಜಬ್ಬಾರ್ ಎಂಬವರನ್ನು ಅಕ್ಟೋಬರ್ 16ರಂದು ಮಧ್ಯಾಹ್ನ ವೇಳೆ, ಆರೋಪಿಗಳಾದ ಮೊಹಮ್ಮದ್ ರಫೀಕ್ ಮತ್ತು ಇತರರು, ಕಾರು ಬಾಡಿಗೆ ನೆಪದಲ್ಲಿ ದುಗ್ಗಲಡ್ಕ ಎಂಬಲ್ಲಿಗೆ ಕರೆದುಕೊಂಡು ಹೋಗಿ ಕಿರುಕುಳ ನೀಡಿ, ಅಲ್ಲಿಂದ ಸುಳ್ಯ ಕಲ್ಲುಗುಂಡಿಗೆ ಕರೆತಂದು ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿ ಮನೆಗೆ ಕಳುಹಿಸಿದ್ದರು. ಮರುದಿನ 17ರಂದು ಅಬ್ದುಲ್ ಜಬ್ಬಾರ್ ಮನೆಯಲ್ಲಿದ್ದಾಗ ಅನಾರೋಗ್ಯಕ್ಕೀಡಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಅಬ್ದುಲ್ ಜಬ್ಬಾರ್ ಸಾವಿಗೆ ರಫೀಕ್ ಪಡು ಮತ್ತು ಇತರರು ಹಲ್ಲೆ ನಡೆಸಿದ್ದೇ ಕಾರಣ ಎಂಬುದಾಗಿ ಸುಮಯ್ಯಾ ಅವರು ಅ.18ರಂದು ನೀಡಿದ ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ: 125/2025, ಕಲಂ: 105 ಜೊತೆಗೆ 3(5) BNS ರಂತೆ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳು ನಡೆಸಿದ ಹಲ್ಲೆಯ ಪರಿಣಾಮ ಅಬ್ದುಲ್ ಜಬ್ಬಾರ್ ಮೃತಪಟ್ಟಿರುವುದಾಗಿ ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದ್ದರಿಂದ ಸದ್ರಿ ಪ್ರಕರಣವನ್ನು ಕಲಂ: 103 ಜೊತೆಗೆ 3(5) BNS ರಂತೆ ಕೊಲೆ ಪ್ರಕರಣವಾಗಿ ಮಾರ್ಪಡಿಸಲಾಗಿದೆ.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯಾದ ಸುಳ್ಯ ಕಸಬ ನಿವಾಸಿ ಮೊಹಮ್ಮದ್ ರಫೀಕ್ (41) ಎಂಬಾತನನ್ನು ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿ, ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ ಕಾರನ್ನು ಸ್ವಾಧೀನಪಡಿಸಿದ್ದು, ಇನ್ನೋರ್ವ ಆರೋಪಿ ಸುಳ್ಯ ಸಂಪಾಜೆ ನಿವಾಸಿ ಮನೋಹರ್ ಕೆ ಎಸ್ @ ಮನು (42) ಎಂಬಾತನನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ, ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Two persons have been arrested by the Sullia Police in connection with the death of a man who was allegedly taken out on the pretext of renting a car, assaulted brutally, and later died due to the injuries sustained.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm