ಬ್ರೇಕಿಂಗ್ ನ್ಯೂಸ್
07-01-26 10:45 pm Bangalore Correspondent ಕ್ರೈಂ
ಬೆಂಗಳೂರು, ಜ 07 : ಪೋಷಕರ ಜತೆಗೆ ನೆಲಸಿದ್ದ ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ಮಾಡಿ, ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಎಸೆದಿರುವ ಘಟನೆ ನಾಗರದ ವೈಟ್ಫೀಲ್ಡ್ ಬಳಿ ನಡೆದಿದೆ.
ಪಶ್ಚಿಮ ಬಂಗಾಳದ ಇಂಜಮುಲ್ ಶೇಖ್ ಅವರ ಪುತ್ರಿ ಶಹನಾಜ್ ಖಾತುನ್ ಕೊಲೆಯಾದವಳು. ಆರೋಪಿಯ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಕೆಲವು ತಿಂಗಳ ಹಿಂದೆ ನಗರಕ್ಕೆ ಬಂದಿದ್ದ ಇಂಜಮುಲ್ ಶೇಖ್ ಕುಟುಂಬವು ನಲ್ಲೂರುಹಳ್ಳಿ ಸುತ್ತಮುತ್ತ ಕೂಲಿ ಕೆಲಸ ಮಾಡುತ್ತಿದ್ದರು. ಸೋಮವಾರ ಬೆಳಿಗ್ಗೆ ಮನೆಯ ಎದುರು ಬಾಲಕಿ ಆಟವಾಡುತ್ತಿದ್ದಳು. ಆಗ ಅಪಹರಣ ನಡೆದಿತ್ತು. ಮಂಗಳವಾರ ಬೆಳಿಗ್ಗೆ ಪೋಷಕರು ನಾಪತ್ತೆ ದೂರು ದಾಖಲಿಸಿದ್ದರು. ಠಾಣೆಯ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾಗ ದೇವಸ್ಥಾನದ ಪಕ್ಕದ ಕಾಲುವೆಯಲ್ಲಿ ಅದೇ ದಿನ ರಾತ್ರಿ ಮೃತದೇಹ ಪತ್ತೆಯಾಗಿದೆ.
ಬಾಲಕಿಯ ಪೋಷಕರು ವಾಸವಿದ್ದ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಯ ಪತ್ತೆಗೆ ಮೂರು ವಿಷೇಶ ತಂಡ ರಚಿಸಲಾಗಿದೆ. ಮೃತದೇಹದಲ್ಲಿ ಬೇರೆ ಯಾವುದೇ ಗಾಯಗಳು ಕಂಡುಬಂದಿಲ್ಲ. ಪ್ಲಾಸ್ಟಿಕ್ ಹಗ್ಗ ಬಳಸಿ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ’ ಎಂದು ವೈಟ್ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಅಡಾವತ್ ತಿಳಿಸಿದರು.
ಪಕ್ಕದ ಮನೆಯ ನಿವಾಸಿಯ ಜತೆಗೆ ಬಾಲಕಿಯ ತಾಯಿ ಇತ್ತೀಚೆಗೆ ಜಗಳವಾಡಿದ್ದರು. ಅದೇ ಸಿಟ್ಟಿನಿಂದ ಆ ವ್ಯಕ್ತಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ಹೇಳಿದರು
A heartbreaking incident has been reported near Whitefield, where a 6-year-old girl was kidnapped and murdered, allegedly as an act of revenge following a quarrel involving her mother. The accused stuffed the child’s body in a plastic bag and dumped it in a drain.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm