ಬ್ರೇಕಿಂಗ್ ನ್ಯೂಸ್
11-01-26 09:59 pm Mangaluru Staff ಕ್ರೈಂ
ಮಂಗಳೂರು, ಜ.11: ಎಡಪದವು ಬಳಿಯ ಪೂಪಾಡಿಕಲ್ಲು ಎಂಬಲ್ಲಿ ಅಯ್ಯಪ್ಪ ಮಾಲಾಧಾರಿಗಳ ಪೂಜಾ ಕಾರ್ಯಕ್ರಮಕ್ಕೆ ಮುಸ್ಲಿಂ ವ್ಯಕ್ತಿಯೊಬ್ಬ ಚರುಮುರಿ ಹಾಕಿದ್ದು ಈ ವೇಳೆ ಅಲ್ಲಿಗೆ ಬಂದ ದನದ ಮುಖಕ್ಕೆ ಚೂರಿಯಿಂದ ಇರಿದ ಘಟನೆ ನಡೆದಿದೆ.
ಚರುಮುರಿ ಸ್ಟಾಲ್ ಇರಿಸಿದ್ದಾಗ ಅಲ್ಲಿಗೆ ದನವೊಂದು ಬಂದಿದ್ದು ಟೊಮೆಟೋ ತಿನ್ನಲು ಮುಂದಾಗಿತ್ತು. ಈ ವೇಳೆ, ವ್ಯಕ್ತಿ ಕೋಪಗೊಂಡು ಟೊಮೆಟೋ ಕೊಯ್ಯುವ ಹರಿತ ಚೂರಿಯಲ್ಲಿ ದನದ ಮುಖಕ್ಕೆ ಬೀಸಿದ್ದು ಮುಖದ ಭಾಗದಲ್ಲಿ ಎರಡು ಇಂಚು ಆಳದ ಗಾಯವಾಗಿ ರಕ್ತ ಹರಿದಿತ್ತು.
ಚೂರಿ ಇರಿದ ವ್ಯಕ್ತಿಯನ್ನು ಚರಮುರಿ ಸ್ಟಾಲ್ ನ ಉಮರಬ್ಬ ಎಂದು ತಿಳಿದುಬಂದಿದೆ. ಈತ ಜಾತ್ರೆಯ ವೇಳೆ ಹಲವೆಡೆ ಚರುಮುರಿ ಸ್ಟಾಲ್ ಹಾಕಿ ವ್ಯಾಪಾರ ನಡೆಸುತ್ತಿದ್ದು ದನಕ್ಕೆ ಕತ್ತಿಯಿಂದ ಇರಿದ ಕೃತ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ದನವನ್ನು ಹಿಡಿದು ಸ್ಥಳೀಯರು ಪ್ರಥಮ ಚಿಕಿತ್ಸೆ ನೀಡಿದ್ದಾರೆ.
ಘಟನೆ ಬಗ್ಗೆ ಯಾರೂ ಪೊಲೀಸರಿಗೆ ದೂರು ನೀಡಿಲ್ಲ ಎನ್ನಲಾಗಿದೆ. ಬಜರಂಗದಳ ಜಿಲ್ಲಾ ಮುಖಂಡರು ಆರೋಪಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪೊಲೀಸ್ ಕಮಿಷನರ್ ಘಟನೆ ಬಗ್ಗೆ ಪ್ರತಿಕ್ರಿಯಿಸಿ, ಆಕಸ್ಮಿಕವಾಗಿ ಘಟನೆ ಆಗಿದೆ. ದನವನ್ನು ಸಾರ್ವಜನಿಕ ಪ್ರದೇಶದಲ್ಲಿ ಬಿಟ್ಟಿರುವುದು ತಪ್ಪು. ಹಾಗಾಗಿ ಅದರ ಮಾಲೀಕರ ವಿರುದ್ಧ ಕೇಸು ದಾಖಲಿಸಲಾಗಿದೆ. ಮತ್ತು ದನದ ಮೇಲೆ ಕ್ರೌರ್ಯ ತೋರಿಸಿದ್ದಕ್ಕಾಗಿ ಚೂರಿ ಬೀಸಿದ ವ್ಯಕ್ತಿಯ ವಿರುದ್ಧ ಸುಮೊಟೋ ಕೇಸು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
In a disturbing incident reported from Poopadikallu near Edapadavu, a man allegedly stabbed a cow on the face with a knife during an Ayyappa Swami worship programme, triggering anger among locals.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm