ಬ್ರೇಕಿಂಗ್ ನ್ಯೂಸ್
20-01-26 07:51 pm Bangalore Correspondent ಕ್ರೈಂ
ಬೆಂಗಳೂರು, ಜ.20: ನಟ ಕಿಚ್ಚ ಸುದೀಪ್ ಹಾಗೂ ಮ್ಯಾನೇಜರ್ ಚಂದ್ರಚೂಡ್ 60 ಲಕ್ಷ ವಂಚನೆ ಮಾಡಿದ್ದಾರೆಂದು ಕಾಫಿ ತೋಟದ ಮಾಲೀಕರಿಬ್ಬರು ಬೆಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ.
ಕಾಫಿ ತೋಟದ ಮಾಲೀಕ ದೀಪಕ್ ಎಂಬವರು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿ, ನಟ ಕಿಚ್ಚ ಸುದೀಪ್ ಹಾಗೂ ಅವರ ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ವಂಚನೆ ದೂರು ನೀಡಿದ್ದಾರೆ. ದೀಪಕ್ ಅವರಿಗೆ ಸೇರಿದ್ದ ಮನೆ ಹಾಗೂ ಕಾಫಿ ತೋಟದಲ್ಲಿ ಧಾರಾವಾಹಿ ಚಿತ್ರೀಕರಣಕ್ಕಾಗಿ ಅಗ್ರಿಮೆಂಟ್ ಮಾಡಿಕೊಂಡಿದ್ದರು. ಅಗ್ರಿಮೆಂಟ್ ಪ್ರಕಾರ ಹಣ ನೀಡದೇ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.
'ವಾರಸ್ಥಾರ' ಎಂಬ ಧಾರಾವಾಹಿಗಾಗಿ ಮನೆ ಹಾಗೂ ಕಾಫಿ ತೋಟದಲ್ಲಿ ಚಿತ್ರೀಕರಣ ಮಾಡಲು ಎರಡು ವರ್ಷಗಳ ಅಗ್ರಿಮೆಂಟ್ ಮಾಡಿಕೊಂಡಿದ್ದರು. ಚಿತ್ರೀಕರಣ ಆರಂಭಿಸಿದ ಕೆಲವೇ ದಿನಗಳಲ್ಲಿ ಚಿತ್ರೀಕರಣ ಸ್ಥಗಿತಗೊಳಿಸಿದ್ದಾರೆ. ಚಿತ್ರೀಕರಣ ಉದ್ದೇಶಕ್ಕಾಗಿ ಕಾಫಿ ತೋಟ, ಮರಗಳನ್ನು ನಾಶ ಮಾಡಿದ್ದಾರೆ. ಆದರೆ ಅಗ್ರಿಮೆಂಟ್ ನಂತೆ ಹಣ ಪಾವತಿಸಿಲ್ಲ. ಈ ಹಿನ್ನೆಲೆಯಲ್ಲಿ 95 ಲಕ್ಷ ಪರಿಹಾರ ನೀಡುವಂತೆ ಕಿಚ್ಚ ಸುದೀಪ್ ಹಾಗೂ ಚಂದ್ರಚೂಡ್ ವಿರುದ್ಧ ಕೋರ್ಟ್ ಕೇಸ್ ಹಾಕಿದ್ದರು. ಬಳಿಕ ಕೇಸ್ ವಾಪಸ್ ಪಡೆಯಿರಿ 60 ಲಕ್ಷ ಹಣ ನೀಡುವುದಾಗಿ ನಟ ಕಿಚ್ಚ ಸುದೀಪ್ ಭರವಸೆ ನೀಡಿದ್ದರು. ಮಾತುಕತೆ ಬಳಿಕ ಪ್ರಕರಣ ವಾಪಸ್ ಪಡೆದಿದ್ದರೂ ಹಣ ನೀಡಿರಲಿಲ್ಲ.
ಪ್ರಕರಣ ಹಿಂಪಡೆಯುವ ಮುನ್ನ ನಟ ಸುದೀಪ್ ಅವರ ಮ್ಯಾನೇಜರ್ ಚಂದ್ರಚೂಡ್ 10 ಲಕ್ಷ ರೂ. ಚೆಕ್ ನೀಡಿದ್ದರು. ಆದರೆ ಆನಂತರ ಬಾಕಿ ಹಣ ನೀಡದೇ ವಂಚಿಸಿದ್ದಾರೆ ಎಂದು ದೀಪಕ್ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಸುದೀಪ್, ಮ್ಯಾನೇಜರ್ ಚಂದ್ರಚೂಡ್ ವಿರುದ್ಧ ದೂರು ನೀಡಿದ್ದಾರೆ.
Actor Kiccha Sudeep and his manager Chandrachood have been accused of cheating to the tune of ₹60 lakh by two coffee estate owners, who have filed a complaint with the Bengaluru Police Commissioner.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm