ಬ್ರೇಕಿಂಗ್ ನ್ಯೂಸ್
02-02-26 12:16 pm HK News Desk ಕ್ರೈಂ
ಉಡುಪಿ, ಫೆ.2 : ನಗರದ ಪಿಪಿಸಿ ಕ್ರಾಸ್ ಬಳಿ ಕಾಂಗ್ರೆಸ್ ಯುವ ಮುಖಂಡ ಹಾಗೂ ಉಡುಪಿ ಜಿಲ್ಲಾ ಎನ್ಎಸ್ಯುಐ ಉಪಾಧ್ಯಕ್ಷ ಶರತ್ ಕುಂದರ್ (25) ಎಂಬವರ ಮೇಲೆ 6–7 ಮಂದಿಯಿದ್ದ ದುಷ್ಕರ್ಮಿಗಳ ತಂಡ ತಲವಾರು ದಾಳಿ ನಡೆಸಿದ್ದು, ಕೊಲೆಗೆ ಯತ್ನಿಸಿದ್ದಾರೆಂಬ ಆರೋಪ ಕೇಳಿಬಂದಿದೆ.
ಜನವರಿ 30ರಂದು ರಾತ್ರಿ ಮಣಿಪಾಲದ ಹೋಟೆಲ್ ಒಂದರಲ್ಲಿ ಊಟದ ವೇಳೆ ನಡೆದ ಕ್ಷುಲ್ಲಕ ಮಾತಿನ ಚಕಮಕಿಯೇ ದಾಳಿಗೆ ಕಾರಣವಾಗಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಶರತ್ ಕುಂದರ್ ತನ್ನ ಸ್ನೇಹಿತರೊಂದಿಗೆ ಹೋಟೆಲ್ಗೆ ತೆರಳಿದ್ದಾಗ, ರಮಾನಂದ ಪೈ ಎಂಬವರ ಜೊತೆಗೆ ಮಾತಿನ ಗಲಾಟೆ ನಡೆದಿದೆ. ಘಟನೆಯ ಬಳಿಕ ಶರತ್ ಕುಂದರ್ ಮನೆಗೆ ಹೊರಟಿದ್ದರು. ಈ ನಡುವೆ ಅಕ್ಷತ್ ಪೈ ಎಂಬವರು ಹೋಟೆಲ್ನಲ್ಲಿ ನಡೆದ ಗಲಾಟೆ ಕುರಿತು ಮಾತನಾಡಲು ಇದೆ ಎಂದು ಹೇಳಿ, ಪಿಪಿಸಿ ಕ್ರಾಸ್ ಬಳಿಗೆ ಕರೆಸಿದ್ದಾರೆ. ಅದರಂತೆ ಶರತ್ ಕುಂದರ್ ತನ್ನ ಸ್ನೇಹಿತರಾದ ಧ್ರುವ, ಸಿಲಾನ್ ಗಗನ್ ಮತ್ತು ರೋಹಿತ್ ಜೊತೆ ಪಿಪಿಸಿ ಕ್ರಾಸ್ ಸಮೀಪ ರಸ್ತೆ ಬದಿಯಲ್ಲಿ ಕಾಯುತ್ತಿದ್ದರು.
ರಾತ್ರಿ ಸುಮಾರು 11.30ರ ವೇಳೆಗೆ ಟಾಟಾ ಸಫಾರಿ ಹಾಗೂ ಮಹೀಂದ್ರ ಥಾರ್ ವಾಹನಗಳಲ್ಲಿ ಆಗಮಿಸಿದ ಆರೋಪಿಗಳು, ತಲ್ವಾರ್ ಹಾಗೂ ಕಬ್ಬಿಣದ ಚೇರ್ ಹಿಡಿದು, ಶರತ್ ಕುಂದರ್ ಅವರನ್ನು ಕೊಲ್ಲುವ ಉದ್ದೇಶದಿಂದ ದಾಳಿ ನಡೆಸಿದ್ದಾರೆ. ದಾಳಿ ವೇಳೆ ರಮಾನಂದ ಪೈ ತಲ್ವಾರ್ ಬೀಸಿದ್ದು ಶರತ್ ಕುಂದರ್ ಅವರ ಅಂಗೈ ಮತ್ತು ಬೆರಳುಗಳಿಗೆ ಗಂಭೀರ ಗಾಯಗಳಾಗಿವೆ. ದಾಳಿ ನಡೆಯುವಾಗ ಜೊತೆಯಲ್ಲಿದ್ದ ಸ್ನೇಹಿತರು ಬೊಬ್ಬೆ ಹಾಕಿದ್ದರಿಂದ ಆರೋಪಿಗಳು ಜೀವ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ. ಶರತ್ ಕುಂದರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡ ರಚಿಸಲಾಗಿದೆ.
Congress youth leader and NSUI district vice-president Sharath Kunder (25) was allegedly attacked with a sword by a group of 6–7 men near PPC Cross in Udupi late at night. Police said the attack stemmed from a minor argument at a hotel in Manipal on January 30. The accused allegedly lured Kunder to the spot and assaulted him with a sword and iron rod around 11.30 pm. He sustained serious injuries to his hand and fingers and was admitted to hospital.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm