ಬ್ರೇಕಿಂಗ್ ನ್ಯೂಸ್
02-02-26 10:37 pm Bangalore Correspondent ಕ್ರೈಂ
ಬೆಂಗಳೂರು, ಫೆ.2 : 65 ವರ್ಷದ ವೃದ್ಧ ಮಹಿಳೆಯನ್ನು ಅತ್ಯಾಚಾರವೆಸಗಿ ಕೊಲೆಗೈದ ವ್ಯಕ್ತಿಯೊಬ್ಬ ಬಳಿಕ ಸಾವಿಗೆ ಶರಣಾದ ಘಟನೆ ನಗರದ ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹಲವು ವರ್ಷಗಳಿಂದ ವೃದ್ಧೆಯ ಮನೆಯಲ್ಲಿ ಮನೆಗೆಲಸ ಮಾಡಿಕೊಂಡಿದ್ದ ವ್ಯಕ್ತಿಯೇ ಈ ನೀಚ ಕೃತ್ಯವೆಸಗಿದ್ದಾನೆ. ಆರೋಪಿ ದೇವರಾಜು (50) ತಮಿಳುನಾಡಿನ ಹೊಸೂರು ಮೂಲದವನಾಗಿದ್ದು, ಎಂಟು ವರ್ಷಗಳಿಂದ ವೃದ್ಧೆ ಮನೆಯಲ್ಲಿ ಸೇರಿದಂತೆ ಕಾಲೋನಿಯ ಇತರ ಮನೆಗಳಲ್ಲಿಯೂ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಘಟನೆ ಸಮಯದಲ್ಲಿ ಮೃತ ಮಹಿಳೆಯ 27 ವರ್ಷದ ಪುತ್ರಿ ಮನೆಯ ಮೊದಲ ಮಹಡಿಯಲ್ಲಿ ವಾಸವಿದ್ದು, ಆಕೆಗೆ ಮಾಹಿತಿಯೇ ಇರಲಿಲ್ಲ. ಭಾನುವಾರ ಬೆಳಗಿನ ಜಾವ ಘಟನೆ ನಡೆದಿದ್ದು, ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಅತ್ಯಾಚಾರವೆಸಗಿದ ಬಳಿಕ ಆರೋಪಿ ಮಹಿಳೆಯ ಕುತ್ತಿಗೆಯನ್ನು ಹಿಸುಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಮಹಿಳೆಯ ಕುತ್ತಿಗೆಯಲ್ಲಿ ಗಾಯದ ಗುರುತುಗಳಿದ್ದು ಫಾರೆನ್ಸಿಕ್ ವರದಿ ಬಂದ ಬಳಿಕವೇ ಸ್ಪಷ್ಟತೆ ಸಿಗಲಿದೆ.
ಕೃತ್ಯದ ಬಗ್ಗೆ ಭಯಗೊಂಡ ಆರೋಪಿ ಮನೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಮಹಿಳೆಯ ಪತಿ ಖ್ಯಾತ ಕಂಪನಿಯೊಂದರಲ್ಲಿ ಉನ್ನತ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಕೆಲಸದ ನಿಮಿತ್ತ ವಿದೇಶದಲ್ಲಿದ್ದರು. ಭಾನುವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಮನೆಗೆ ಮರಳಿದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಮನೆಯ ಬಾಗಿಲು ತೆರೆಯುತ್ತಿದ್ದಂತೆ, ಮಲಗುವ ಕೋಣೆಯಲ್ಲಿ ಆರೋಪಿ ನೇಣು ಬಿಗಿದುಕೊಂಡಿರುವುದು ಹಾಗೂ ಪತ್ನಿ ನೆಲದಲ್ಲಿ ಬಿದ್ದಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಅವರ ಕೂಗು ಕೇಳಿ ಪುತ್ರಿ ಸ್ಥಳಕ್ಕೆ ಧಾವಿಸಿ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
A 65-year-old woman was allegedly raped and murdered by a domestic worker at her residence in Bengaluru’s Mico Layout area. The accused, who had been working at the house for years, later died by suicide at the same location. Police have registered a case and are awaiting forensic reports for further investigation.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am