ಬ್ರೇಕಿಂಗ್ ನ್ಯೂಸ್
03-02-26 01:05 pm HK News Desk ಕ್ರೈಂ
ಮಂಜೇಶ್ವರ, ಫೆ.3 : ಆಸ್ತಿ ಕಲಹ ವಿಚಾರದಲ್ಲಿ ಜಗಳ ಸಂದರ್ಭ ಮಗಳ ಮೇಲೆ ಕತ್ತಿಯೇಟು ಬಿದ್ದು ಆಕೆ ಸಾವನ್ನಪ್ಪಿದ್ದಾಳೆಂದು ಹೇಳಲಾಗಿದ್ದ ಘಟನೆಗೆ ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ತಂದೆಯೇ ತನ್ನ ಪತ್ನಿ ಮೇಲಿನ ದ್ವೇಷದಿಂದ ವಿಚ್ಛೇದನ ಬಗ್ಗೆ ಮಾತುಕತೆಯಾಡಿದ್ದ ಮಗಳ ಕುತ್ತಿಗೆಯನ್ನು ಕಡಿದು ಹತ್ಯೆ ಮಾಡಿದ್ದಾನೆಂಬ ಮಾಹಿತಿ ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಇದೇ ವೇಳೆ, ದಾಳಿ ತಡೆಯಲು ಬಂದು ಕತ್ತಿಯೇಟಿಗೆ ಒಳಗಾಗಿದ್ದ ಪತ್ನಿಯ ಸೋದರಿ ಗಂಡ ಶೇಕುಂಞ ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಸೋಮವಾರ ಸಂಜೆ 5 ಗಂಟೆ ವೇಳೆಗೆ ಮಂಜೇಶ್ವರ ಠಾಣೆ ವ್ಯಾಪ್ತಿಯ ತುಮ್ಮಿನಾಡಿನಲ್ಲಿ ಘಟನೆ ನಡೆದಿತ್ತು. ಆರೋಪಿ ಉಮ್ಮರ್ ಫಾರೂಕ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಉಮ್ಮರ್ ಫಾರೂಕ್ ಗಲ್ಫ್ ನಲ್ಲಿ ಉದ್ಯೋಗದಲ್ಲಿದ್ದು, ಪತ್ನಿಯ ಜೊತೆಗಿನ ವಿರಸದಿಂದ ಮೂರು ತಿಂಗಳ ಹಿಂದೆ ಊರಿಗೆ ಬಂದಿದ್ದ. ಆನಂತರ, ಪತ್ನಿ ತಾಹಿರಾ (41) ಮಾತಿಗೆ ಮಾತು ಬೆಳೆದು ನಿನ್ನ ಸಂಬಂಧವೇ ಬೇಡ, ವಿಚ್ಛೇದನ ಕೊಟ್ಟುಬಿಡು ಎಂದು ಹೇಳಿದ್ದಳು. ಅದರಂತೆ, ತನ್ನ ತಂಗಿಯ ಮನೆಯಲ್ಲಿ ಮಾತುಕತೆಗೆಂದು ಗಂಡ ಉಮ್ಮರ್ ನನ್ನು ಕರೆದಿದ್ದಳು.

ಉಮರ್ ಫಾರೂಕ್ ಕತ್ತಿ ಹಿಡಿದು ಬಂದಿದ್ದರೆ, ತಾಹಿರಾ ತನ್ನ ಮಗಳು ಮರಿಯಮ್ಮ ಜುಮೈಲಾ ಜೊತೆಗೆ ತಂಗಿ ಮನೆಗೆ ಬಂದಿದ್ದಳು. ಈ ವೇಳೆ ಮಾತುಕತೆ ನಡೆದು ತನ್ನಲ್ಲಿದ್ದ ಚಿನ್ನಾಭರಣ ಮತ್ತು ಮನೆಯ ಆಸ್ತಿಪತ್ರಗಳನ್ನು ಉಮರ್ ಫಾರೂಕ್ ಕೈಗೆ ನೀಡಿದ್ದರು. ಅಲ್ಲಿಂದ ಹಿಂತಿರುಗುತ್ತಿದ್ದಾಗಲೇ ಪತ್ನಿ ಜೊತೆಗೆ ನಿಂತಿದ್ದ ಮಗಳು ಜುಮೈಲಾ ಮೇಲೆ ತನ್ನ ಕೈಯಲ್ಲಿದ್ದ ಕತ್ತಿಯಿಂದ ಏಕಾಏಕಿ ಕಡಿದಿದ್ದಾನೆ. ಈ ವೇಳೆ ತಡೆಯಲು ಬಂದ ಪತ್ನಿಯ ತಂಗಿಯ ಗಂಡ ಸೇಕುಂಞ್ಞ ಮೇಲೂ ಕತ್ತಿಯಿಂದ ದಾಳಿ ನಡೆಸಿದ್ದಾನೆ. ಇಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ಒಯ್ದಿದ್ದು, ದಾರಿ ಮಧ್ಯದಲ್ಲೇ ಮಗಳು ಜುಮೈಲಾ ಸಾವನ್ನಪ್ಪಿದ್ದಳು.
ಉಮ್ಮರ್ ಫಾರೂಕ್ ಹಲ್ಲೆ ಮಾಡುವ ಉದ್ದೇಶದಿಂದಲೇ ತನ್ನ ಕೈಯಲ್ಲಿ ಕತ್ತಿಯನ್ನು ಹಿಡಿದುಕೊಂಡು ಬಂದಿದ್ದ ಎಂದು ಮಂಜೇಶ್ವರ ಪಂಚಾಯತ್ ಸದಸ್ಯ ಇಲ್ಯಾಸ್ ತುಮ್ಮಿನಾಡು ‘ಮನೋರಮಾ’ಕ್ಕೆ ತಿಳಿಸಿದ್ದಾರೆ. ಜುಮೈಲಾ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದರಿಂದ ನೆಲಕ್ಕೆ ಕುಸಿದು ಬಿದ್ದಿದ್ದು, ನೆಲದಲ್ಲಿ ರಕ್ತ ಕೋಡಿಯಂತೆ ಹರಿದಿತ್ತು. ಕೂಡಲೇ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದರೂ ತೀವ್ರ ರಕ್ತಸ್ರಾವದಿಂದಾಗಿ ಸಾವನ್ನಪ್ಪಿದ್ದಾಳೆ. ಜುಮೈಲಾ(18) ಎಸ್ಸೆಸ್ಸೆಲ್ಸಿ ಮುಗಿಸಿ ಉಪ್ಪಳದ ಶಾಲೆಯಲ್ಲಿ ಪ್ಲಸ್ ವನ್ ಓದುತ್ತಿದ್ದಳು.
ಉಮ್ಮರ್ ಫಾರೂಕ್ ಗಾಂಜಾ, ಮತ್ತು ಮಾರಿಜುವಾನಾ ಡ್ರಗ್ಸ್ ಸೇವನೆಯ ಚಟಕ್ಕೆ ಹೊಂದಿದ್ದು, ಹಲವಾರು ಕೇಸುಗಳನ್ನು ಹೊಂದಿದ್ದಾನೆ. ಇದೇ ಕಾರಣಕ್ಕೆ ಗಂಡ – ಹೆಂಡತಿ ಮಧ್ಯೆ ಜಗಳವಾಗಿತ್ತು. ಜಗಳ ವಿರಸಕ್ಕೆ ಕಾರಣವಾಗಿ ವಿಚ್ಛೇದನ ವರೆಗೆ ಹೋಗಿತ್ತು. ಪತ್ನಿ ತಾಹಿರಾ ತನ್ನ ಮಗಳ ಜೊತೆಗೆ ಪ್ರತ್ಯೇಕ ಇರುತ್ತೇನೆ, ನೀನು ನನ್ನ ಬದುಕಿನಿಂದಲೇ ದೂರವಾಗು ಎಂದು ಹೇಳಿದ್ದಳು. ಆದರೆ ನಿನ್ನನ್ನು ಜೀವಂತ ಬಿಡುವುದಿಲ್ಲ ಎಂದು ಪತ್ನಿಯ ಮೇಲೆ ಕತ್ತಿಯಿಂದ ಕಡಿಯಲು ಮುಂದಾಗಿದ್ದ. ಪತ್ನಿಯ ಮೇಲೆ ಹಲ್ಲೆ ನಡೆಸುತ್ತಾನೆಂದು ಮಗಳೇ ಮುಂದೆ ನಿಂತು ಮಾತುಕತೆ ಮಾಡಿದ್ದಳು. ಆದರೆ ಡ್ರಗ್ಸ್ ಅಮಲಿನಲ್ಲಿ ಅಲ್ಲಿಂದ ಹಿಂತಿರುಗುತ್ತಿದ್ದಾಗ ಮಗಳನ್ನೇ ಕುತ್ತಿಗೆ ಕಡಿದು ಹತ್ಯೆ ಮಾಡಿದ್ದಾನೆ. ತಡೆಯಲು ಬಂದ ಪತ್ನಿಯ ಸೋದರಿ ಗಂಡನೂ ಚೂರಿ ಇರಿತಕ್ಕೊಳಗಾಗಿ ದುರಂತ ಸಾವನ್ನಪ್ಪಿದ್ದಾರೆ. ಉಮ್ಮರ್ ಫಾರೂಕ್ ಡ್ರಗ್ಸ್ ಅಮಲಿನಿಂದಲೇ ಇಂಥ ಕೃತ್ಯ ಎಸಗಿದ್ದಾನೆಂದು ಸ್ಥಳೀಯರು ಹೇಳುತ್ತಿದ್ದಾರೆ. ಮಂಜೇಶ್ವರ, ಕಾಸರಗೋಡು ಭಾಗದಲ್ಲಿ ಗಾಂಜಾ, ಡ್ರಗ್ಸ್ ವಹಿವಾಟು ಜೋರಾಗಿದ್ದು ಪೊಲೀಸರಿಗೆ ಗೊತ್ತಿದ್ದೇ ದಂಧೆ ನಡೆಯುತ್ತಿದೆ. ಹೆಚ್ಚಾಗಿ ಮುಸ್ಲಿಂ ಯುವಕರೇ ಈ ಕೃತ್ಯದಲ್ಲಿ ತೊಡಗಿದ್ದಾರೆ.
In a shocking incident at Thuminadu in Manjeshwar, a man allegedly murdered his 18-year-old daughter during a heated dispute with his wife over marital issues and property. The accused, Umar Farooq, reportedly attacked his daughter with a knife while she tried to intervene in a confrontation between her parents. The girl died due to severe neck injuries, while her maternal uncle, who attempted to stop the attack, later succumbed to his injuries in hospital.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm