ಬ್ರೇಕಿಂಗ್ ನ್ಯೂಸ್
07-02-26 08:14 pm Mangalore Correspondent ಕ್ರೈಂ
ಮಂಗಳೂರು, ಫೆ.7: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ರೂ. 53 ಲಕ್ಷ ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಮುಂದುವರಿಸಿದ್ದು, ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನದ ವ್ಯವಸ್ಥೆಯನ್ನು ಮಾಡಿದ ಇಬ್ಬರು ಸೇರಿ ಲ, ಗಾಂಜಾ ಪೂರೈಕೆ ಮಾಡಿದ ಒರಿಸ್ಸಾ ಮೂಲದ ಆರೋಪಿಯನ್ನು ಬಂಧಿಸಿದ್ದಾರೆ.
ಹಣ ಮತ್ತು ವಾಹನ ವ್ಯವಸ್ಥೆ ಮಾಡಿದ್ದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ.ಕೆ (27) ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42) ಎಂಬವರನ್ನು ದಸ್ತಗಿರಿ ಮಾಡಲಾಗಿರುತ್ತದೆ. ಆರೋಪಿಗಳಿಗೆ ಮಾದಕ ವಸ್ತು ಗಾಂಜಾವನ್ನು ಪೂರೈಕೆ ಮಾಡುತ್ತಿದ್ದ ಒರಿಸ್ಸಾ ಮೂಲದ ದೀಪಕ್ ಪಾತ್ರ (37) ಎಂಬಾತನನ್ನು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ತನಿಖಾ ತಂಡವು ಒರಿಸ್ಸಾ ರಾಜ್ಯಕ್ಕೆ ತೆರಳಿ ದಸ್ತಗಿರಿ ಮಾಡಿದೆ. ಈ ವೇಳೆ ಆತನಿಂದ ರೂ. 80,000/- ಮೌಲ್ಯದ 1 ಕೆ.ಜಿ 788 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.
ಸದ್ರಿ ಕಾರ್ಯಾಚರಣೆಯಲ್ಲಿ ಪುತ್ತೂರು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಗುಣಪಾಲ ಜೆ ಹಾಗೂ ಸಿಬ್ಬಂದಿಗಳಾದ ದೇವರಾಜ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಸುಬ್ರಮಣಿ, ಭೀಮಸೇನ್, ಸುರೇಶ ಹಾಗೂ ದಿವ್ಯಾಪ್ರಕಾಶ್ ಅವರನ್ನು ಒಳಗೊಂಡ ತಂಡ ಭಾಗಿಯಾಗಿರುತ್ತದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm