ಬ್ರೇಕಿಂಗ್ ನ್ಯೂಸ್
07-02-26 10:48 pm HK News Desk ಕ್ರೈಂ
ಬೆಂಗಳೂರು, ಫೆ.7: ನಗರದ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯ ಒಂದೇ ಕುಟುಂಬದ ನಾಲ್ಕು ಮಂದಿ ಬಿಹಾರದ ನಲಂದಾ ಜಿಲ್ಲೆಯ ಧರ್ಮಶಾಲೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೆಲವು ತಿಂಗಳ ಹಿಂದೆ ಫ್ರೀಫೈರ್ ವಿಡಿಯೋ ಗೇಮ್ ಅಡಿಕ್ಟ್ ಆಗಿದ್ದ ತನ್ನ ಅಕ್ಕನ ಮಗನನ್ನು ಕೊಲೆ ಮಾಡಿ ಜೈಲು ಸೇರಿದ್ದ ನಾಗಪ್ರಸಾದ್ ಸೇರಿ ನಾಲ್ವರು ಸಾವಿಗೆ ಶರಣಾಗಿದ್ದಾರೆ.
ಮೃತರನ್ನು ಸುಮಂಗಲ (78), ಅವರ ಪುತ್ರಿಯರಾದ ಶಿಲ್ಪಾ (48) ಮತ್ತು ಶ್ರುತಾ ಜಿ.ಬಿ. (43) ಮತ್ತು ಮಗ ನಾಗಪ್ರಸಾದ್ (50) ಎಂದು ಗುರುತಿಸಲಾಗಿದೆ. ಇವರು ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಜೈನ ಸಂಪ್ರದಾಯದ ನಿವಾಸಿಗಳಾಗಿದ್ದು, ಕೆಲವು ವರ್ಷಗಳಿಂದ ಬೆಂಗಳೂರಿನ ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ ವಾಸವಾಗಿದ್ದರು.
ಫ್ರೀಫೈರ್ ಗೇಮ್ ಚಟಕ್ಕೆ ಬಿದ್ದು ಹಣಕ್ಕಾಗಿ ಪೀಡಿಸುತ್ತಿದ್ದ ಅಕ್ಕನ ಮಗ ಅಮೋಘ ಕೀರ್ತಿಯನ್ನು ಮಾವ ನಾಗಪ್ರಸಾದ್ ಕಳೆದ ವರ್ಷ ಆಗಸ್ಟ್ 8ರಂದು ಕತ್ತು ಸೀಳಿ ಕೊಲೆ ಮಾಡಿದ್ದ ಘಟನೆ ನಡೆದಿತ್ತು. ಬಾಲಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆಯ ಬಳಿಕ ಮೆಜೆಸ್ಟಿಕ್ನಲ್ಲಿ ಮೂರು ದಿನ ತಂಗಿದ್ದ ನಾಗಪ್ರಸಾದ್, ನಂತರ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಸರೆಂಡರ್ ಆಗಿದ್ದ. ಪೊಲೀಸರು ಆತನ ಮೇಲೆ ಎಫ್ಐಆರ್ ದಾಖಲಿಸಿ ಜೈಲಿಗಟ್ಟಿದ್ದರು. ಬಳಿಕ ಆತನ ತಂಗಿ ಶಿಲ್ಪಾನೇ ಮಗ ಹೇಗೂ ಹೋದ, ಅಣ್ಣನಾದ್ರೂ ಜೊತೆಗಿರಲಿ ಎಂದು ಜಾಮೀನು ಕೊಡಿಸಿ ಜೈಲಿನಿಂದ ಹೊರ ತಂದಿದ್ದಳು.
ಅಕ್ಕನ ಮಗ ಅಮೋಘ ಕೀರ್ತಿಯನ್ನು ಕೊಂದ ಪಾಪ ಪರಿಹಾರಕ್ಕಾಗಿ ಇಡೀ ಕುಟುಂಬ ಕೆಲವು ತಿಂಗಳಿಂದ ದೇವಾಲಯಗಳಿಗೆ ಭೇಟಿ ನೀಡುತ್ತಿತ್ತು ಎಂದು ತಿಳಿದುಬಂದಿದೆ. ಆನಂತರ, ಉತ್ತರ ಭಾರತದ ವಿವಿಧ ಕಡೆಗೆ ತೆರಳಿ ಬಿಹಾರಕ್ಕೆ ತಲುಪಿದ್ದರು. ಅಲ್ಲಿ ಜೈನ ಮತಸ್ಥರ ಧರ್ಮಶಾಲೆಯಲ್ಲಿ ತಂಗಿದ್ದಾಗ ಸಾವಿಗೆ ಶರಣಾಗಿದ್ದಾರೆ. ಮೃತ ಶರೀರಗಳ ಬಳಿ ನಿದ್ದೆ ಮಾತ್ರೆಗಳು ಸಿಕ್ಕಿದ್ದು, ಮಾತ್ರೆಗಳ ಓವರ್ ಡೋಸ್ನಿಂದಲೇ ಕುಟುಂಬ ಮೃತಪಟ್ಟಿದೆ ಎನ್ನಲಾಗಿದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm