ಬ್ರೇಕಿಂಗ್ ನ್ಯೂಸ್
13-02-26 11:52 am HK News Desk ಕ್ರೈಂ
ನವದೆಹಲಿ, ಫೆ.12: ಡಿಜಿಟಲ್ ವಂಚನೆ ಪ್ರಕರಣಗಳು ಜಗತ್ತಿನಾದ್ಯಂತ ಹೆಚ್ಚುತ್ತಿರುವಾಗಲೇ ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆಯನ್ನು ತೆರೆದು ಅದರ ಮೂಲಕವೇ ಸೈಬರ್ ವಂಚನಾ ಜಾಲ ನಡೆಸುತ್ತಿದ್ದುದನ್ನು ತನಿಖಾ ತಂಡ ಪತ್ತೆಹಚ್ಚಿದೆ.
ವಿಯೆಟ್ನಾಂ ಗಡಿಗೆ ಹೊಂದಿಕೊಂಡಿರುವ ಕಾಂಪೊಟ್ ಪ್ರಾಂತ್ಯದಲ್ಲಿ 'ಡಿಜಿಟಲ್ ಅರೆಸ್ಟ್' ಸೇರಿ ವಿವಿಧ ಬಗೆಯ ವಂಚನೆ ಚಟುವಟಿಕೆ ನಡೆಸುತ್ತಿದ್ದ ಖತರ್ನಾಕ್ ಜಾಲವನ್ನು ವಿಯೆಟ್ನಾಂ ಪೊಲೀಸ್ ಪಡೆ ಪತ್ತೆ ಮಾಡಿದೆ. ಅಂತಾರಾಷ್ಟ್ರೀಯ ವಂಚನೆಗಳಿಗೆ ತಡೆ ಹಾಕಲು ಕಾಂಬೋಡಿಯಾ ಪೊಲೀಸರು ಇತ್ತೀಚೆಗೆ ಭಾರಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ 190 ಸ್ಕ್ಯಾಮ್ ಸೆಂಟರ್ಗಳನ್ನು ಪತ್ತೆ ಮಾಡಿ ಜಪ್ತಿ ಮಾಡಲಾಗಿದೆ. 173 ಅಧಿಕಾರಿ ಸೋಗಿನಲ್ಲಿದ್ದ ಸೈಬರ್ ವಂಚಕರನ್ನೂ ಬಂಧಿಸಲಾಗಿದೆ. ಈ ಸೆಂಟರ್ಗಳನ್ನು ಭಾರತೀಯ ಪೊಲೀಸ್ ಠಾಣೆಯೆಂದು ಬಿಂಬಿಸಿ ಜನರನ್ನು ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ.
ಭಾರತೀಯರೇ ಟಾರ್ಗೆಟ್ !
ಸೈಬರ್ ಜಾಲದ ಸೂತ್ರಧಾರಿ ಚೀನಾ ಮೂಲದ ಕಿಂಗ್ ಪಿನ್ ಲೀ ಕುಯಾಂಗ್ ಎಂದು ಶಂಕಿಸಲಾಗಿದೆ. ನಕಲಿ ಪೊಲೀಸ್ ಠಾಣೆಯು ಸಿನಿಮಾ ಸೆಟ್ ರೀತಿಯಿದ್ದು ಪಾಳುಬಿದ್ದ ಕಟ್ಟಡ, ಕಾಂಪೌಂಡ್ನಲ್ಲಿ ತಾತ್ಕಾಲಿಕ ಎನ್ನುವಂತೆ ನಿರ್ಮಿಸಲಾಗಿದೆ. ಇದರಲ್ಲಿ ಮುಂಬಯಿ ಪೊಲೀಸ್ ಹಾಗೂ ಸಿಬಿಐ ಲೋಗೊಗಳಿರುವ ನಕಲಿ ಸೈನ್ ಬೋರ್ಡ್ ಗಳಿವೆ. ಎರಡೂ ಬದಿಯಲ್ಲಿ ಮಹಾತ್ಮ ಗಾಂಧಿ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿತ್ರ ಹಾಗೂ ಭಾರತದ ರಾಷ್ಟ್ರಧ್ವಜವನ್ನು ಅಳವಡಿಸಲಾಗಿದೆ. ವಿದೇಶಗಳಲ್ಲಿರುವ ಭಾರತೀಯರನ್ನು 'ಡಿಜಿಟಲ್ ಅರೆಸ್ಟ್' ಹೆಸರಲ್ಲಿ ವಂಚಿಸುವ ಜಾಲ ಇದಾಗಿದೆ ಎಂದು ವಿಯೆಟ್ನಾಂ ಪೊಲೀಸರು ತಿಳಿಸಿದ್ದಾರೆ.
ಇತ್ತೀಚೆಗೆ ಮಂಗಳೂರು ಪೊಲೀಸರು ನೇಪಾಳದಲ್ಲಿದ್ದುಕೊಂಡು ಸೈಬರ್ ವಂಚನೆ ನಡೆಸುತ್ತಿದ್ದ ಜಾಲವನ್ನು ಭೇದಿಸಿದ್ದರು. ಈ ವೇಳೆ, ಇವರಿಗೆ ಕಾಂಬೋಡಿಯಾದಲ್ಲಿ ನೆಟ್ವರ್ಕ್ ಇರೋದು, ಹಣವನ್ನು ಯುಎಸ್ ಡಾಲರಿಗೆ ಪರಿವರ್ತಿಸುವ ಜಾಲ ಇರುವುದು ತಿಳಿದುಬಂದಿತ್ತು. ಮಲೇಶಿಯಾ, ಥಾಯ್ಲೆಂಡಿಗೆ ಉದ್ಯೋಗಕ್ಕೆ ತೆರಳುವ ಭಾರತೀಯರನ್ನೇ ಬಳಸಿಕೊಂಡು ಸೈಬರ್ ವಂಚನಾ ಜಾಲ ನಡೆಸುತ್ತಿರುವುದೂ ಪತ್ತೆಯಾಗಿತ್ತು.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am