ಬ್ರೇಕಿಂಗ್ ನ್ಯೂಸ್
14-02-26 07:37 pm HK Staffer ಕ್ರೈಂ
ಬೆಂಗಳೂರು, ಫೆ 14: ಬ್ಯಾಂಕ್ನಲ್ಲಿ ಚಿನ್ನ ಅಡವಿಟ್ಟು ಸಾಲ ಪಡೆಯುವ ಗ್ರಾಹಕರು ಬೆಚ್ಚಿಬೀಳಿಸುವ ಘಟನೆ ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. ಜನರ ನಂಬಿಕೆಗೆ ಪಾತ್ರರಾಗಬೇಕಿದ್ದ ಬ್ಯಾಂಕ್ ಅಧಿಕಾರಿಯೇ ಗ್ರಾಹಕರ ಕೋಟ್ಯಂತರ ಮೌಲ್ಯದ ಚಿನ್ನಕ್ಕೆ ಕನ್ನ ಹಾಕಿರುವ ಪ್ರಕರಣ ಗಿರಿನಗರದಲ್ಲಿ ದಾಖಲಾಗಿದೆ.
ಗಿರಿನಗರದ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ ಕಿರಣ್ ಕುಮಾರ್ ಎಂಬಾತನನ್ನ ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ಬೆಟ್ಟಿಂಗ್ ಗೇಮ್ ಆಡುವ ಚಟಕ್ಕೆ ಬಿದ್ದಿದ್ದ ಕಿರಣ್ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ನಲ್ಲಿ ಗಿರವಿ ಇಟ್ಟಿದ್ದ ಸುಮಾರು 4 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಜೇಬಿಗಿಳಿಸಿಕೊಂಡಿದ್ದಾನೆ.
2.7 ಕೆಜಿ ಚಿನ್ನ ನಾಪತ್ತೆ ;
ಬ್ಯಾಂಕ್ ಲಾಕರ್ನಲ್ಲಿದ್ದ ಗ್ರಾಹಕರಿಗೆ ಸೇರಿದ 2 ಕೆಜಿ 787 ಗ್ರಾಂ ಚಿನ್ನಾಭರಣಗಳನ್ನು ಆರೋಪಿ ಕದ್ದಿದ್ದಾನೆ. ಇದರ ಮಾರುಕಟ್ಟೆ ಮೌಲ್ಯ ಸುಮಾರು 4 ಕೋಟಿ 12 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಲಾಕರ್ ಕೀ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಇಬ್ಬರ ಬಳಿಯೂ ಇರುತ್ತಿತ್ತು. ಮ್ಯಾನೇಜರ್ ಗೈರಾಗಿರುವ ಸಮಯವನ್ನು ಬಳಸಿಕೊಂಡ ಕಿರಣ್ ಯಾರಿಗೂ ಅನುಮಾನ ಬಾರದಂತೆ ಪ್ಯಾಕೇಟ್ಗಳಿಂದ ಸ್ವಲ್ಪ ಸ್ವಲ್ಪವಾಗಿ ಚಿನ್ನ ಕದಿಯುತ್ತಿದ್ದ ಎಂದು ತನಿಖೆಯ ವೇಳೆ ತಿಳಿದುಬಂದಿದೆ.
ಸಿಕ್ಕಿಬಿದ್ದಿದ್ದು ಹೇಗೆ?
ಫೆಬ್ರವರಿ 2ರಂದು ಗ್ರಾಹಕರೊಬ್ಬರು ತಮ್ಮ ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಬಂದಾಗ ಲಾಕರ್ ಪರಿಶೀಲನೆ ವೇಳೆ ಆಭರಣ ನಾಪತ್ತೆಯಾಗಿರುವುದು ಪತ್ತೆಯಾಯಿತು. ಮುಂದಿನ ಪರಿಶೀಲನೆ ವೇಳೆ 21 ಪ್ಯಾಕೇಟ್ಗಳಲ್ಲಿ ಭಾಗಶಃ ಹಾಗೂ 3 ಪ್ಯಾಕೇಟ್ಗಳಲ್ಲಿ ಸಂಪೂರ್ಣ ಚಿನ್ನ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಖಾಸಗಿ ಫೈನಾನ್ಸ್ಗೆ ಗಿರವಿ;
ತನಿಖೆ ವೇಳೆ ಆರೋಪಿ, ಕದ್ದ ಚಿನ್ನವನ್ನು ಮಣಪ್ಪುರಂ ಫೈನಾನ್ಸ್ ಹಾಗೂ ಹಾಗೂ ಮುತ್ತೂಟ್ ಫೈನಾನ್ಸ್ ನಲ್ಲಿ ಗಿರವಿ ಇಟ್ಟು ಹಣ ಪಡೆದಿರುವುದಾಗಿ ಒಪ್ಪಿಕೊಂಡಿದ್ದಾನೆ. ಆ ಹಣವನ್ನು ಆನ್ಲೈನ್ ಬೆಟ್ಟಿಂಗ್ ಮತ್ತು ಜೂಜಾಟದಲ್ಲಿ ಕಳೆದುಕೊಂಡಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ.
ಈಗಾಗಲೇ ಸುಮಾರು 700 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದ್ದು, ಉಳಿದ ಚಿನ್ನ ಪತ್ತೆ ಹಾಗೂ ಹಣದ ಹಾದಿ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
In a shocking breach of trust, an assistant manager of the Indian Bank’s Girinagar branch in Bengaluru has been arrested for allegedly stealing gold ornaments worth over ₹4 crore pledged by customers for loans.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm