ಬ್ರೇಕಿಂಗ್ ನ್ಯೂಸ್
01-01-21 05:39 pm Udupi Correspondent ಕ್ರೈಂ
ಉಡುಪಿ, ಜ.1: ಹೊಸ ವರ್ಷಾಚರಣೆಯ ಸಂಭ್ರಮದ ನೆಪದಲ್ಲಿ ಕಂಠಪೂರ್ತಿ ಕುಡಿದು ಸಾರ್ವಜನಿಕ ರಸ್ತೆಯಲ್ಲಿ ಪುಂಡಾಟ ಮಾಡುತ್ತಿದ್ದ ಯುವಕರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ ಘಟನೆ ಉಡುಪಿಯ ಮಣಿಪಾಲದಲ್ಲಿ ನಡೆದಿದೆ.
ಡಿ.31 ಮಧ್ಯರಾತ್ರಿ 12 ಗಂಟೆಯ ನಂತರ ಯಾರು ಕೂಡ ಸಾರ್ವಜನಿಕ ರಸ್ತೆಯಲ್ಲಿ ಓಡಾಡಬಾರದು ಎಂದು ಜಿಲ್ಲಾಧಿಕಾರಿಗಳು ಕಟ್ಟಪ್ಪಣೆ ಮಾಡಿದ್ದರು. ಆದರೆ, ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಹೊಟೇಲುಗಳಲ್ಲಿ ಪಾರ್ಟಿ ಮುಗಿಸಿ ಹೊರಬಂದ ನೂರಾರು ಜನರು ಉಡುಪಿ ನಗರದ ಕಾಯಿನ್ ಸರ್ಕಲ್ ಬಳಿ ರಸ್ತೆಯನ್ನು ಬ್ಲಾಕ್ ಮಾಡಿ ಪುಂಡಾಟ ಮೆರೆದಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಧಾವಿಸಿ ಬಂದ ಮಣಿಪಾಲ ಪೊಲೀಸರು ಲಘು ಲಾಠಿ ಪ್ರಹಾರ ಮಾಡುವ ಮೂಲಕ ಜನರನ್ನು ಚದುರಿಸಿದ್ದಾರೆ. ಸದ್ಯ ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಸಾರ್ವಜನಿಕವಾಗಿ ಪಾರ್ಟಿ ಮಾಡುವಂತಿಲ್ಲ ಎಂಬ ಆದೇಶ ಇದ್ದರೂ, ಬಾರ್, ಪಬ್ ನಲ್ಲಿ ಪಾರ್ಟಿ ಮಾಡುವುದಕ್ಕೇನು ಅಡ್ಡಿ ಇರಲಿಲ್ಲ. ಎಂದಿಗಿಂತ ಸ್ವಲ್ಪ ಹೆಚ್ಚೇ ಉಡುಪಿ ಮತ್ತು ಮಣಿಪಾಲದಲ್ಲಿ ಮಧ್ಯರಾತ್ರಿ ಜನರು ಮತ್ತು ವಾಹನಗಳು ಓಡಾಡಿದ್ದವು. ಇದೇ ವೇಳೆ ಒಂದಷ್ಟು ಯುವಕರು ಕುಡಿದ ಮತ್ತಿನಲ್ಲಿ ರಸ್ತೆ ಮಧ್ಯೆ ಡ್ಯಾನ್ಸ್ ಮಾಡಿದ್ದಾರೆ. ಈಗಷ್ಟೇ ಸ್ವಾತಂತ್ರ್ಯ ಸಿಗ್ತು ಅನ್ನುವ ರೀತಿ ಕುಣಿದಾಡಿದ್ದು ಕೂಡಲೇ ಪೊಲೀಸರು ಲಾಠಿಗೆ ಕೆಲಸ ಕೊಟ್ಟಿದ್ದಾರೆ.
Video:
Police lati charge on Public and Youths who had heavily drunk and dancing on streets for New Year Party 2021 in Udupi.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
01-08-26 02:48 pm
HK News Staffer
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 02:50 pm
HK News Staffer
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm