ಬ್ರೇಕಿಂಗ್ ನ್ಯೂಸ್
18-02-26 07:10 pm HK News Desk ಕ್ರೈಂ
ಹಾಸನ, ಫೆ 18: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕೆಎಸ್ಆರ್ಟಿಸಿ ಚಾಲಕನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಆಲೂರು ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಸಾರಿಗೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೀರಪ್ಪ (58) ಕೊಲೆಯಾದ ವ್ಯಕ್ತಿ. ಕುಟುಂಬ ಸದಸ್ಯರ ಪ್ರಕಾರ, ದಾಯಾದಿಗಳ ನಡುವೆ ಆಸ್ತಿ ವಿವಾದ ನಡೆಯುತ್ತಿದ್ದು, ಇದೇ ಕಾರಣಕ್ಕೆ ಹತ್ಯೆ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಆಲೂರಿನಲ್ಲಿ ಕೋರ್ಟ್ ವಿಚಾರಣೆಗೆ ಹಾಜರಾಗಿ ಬಳಿಕ ತಮ್ಮ ಜಮೀನಿನ ಕಡೆಗೆ ಬಂದಿದ್ದ ವೀರಪ್ಪ ಅವರನ್ನ ದುಷ್ಕರ್ಮಿಗಳು ಹಿಂಬಾಲಿಸಿ ಹಲ್ಲೆ ನಡೆಸಿದ್ದಾರೆ. ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಕೋರ್ಟ್ ಕೇಸ್ ಮುಗಿಸಿ ಬಂದ ಸಂಜೆಯೇ ಹತ್ಯೆ:
ಮೃತ ವೀರಪ್ಪ ಕೆಎಸ್ಆರ್ಟಿಸಿ ಹಾಸನ ಡಿಪೋದಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದು, ನಿವೃತ್ತಿ ಹೊಂದುವ ಹಂತದಲ್ಲಿದ್ದರು. ಕೆಲ ವರ್ಷಗಳ ಹಿಂದೆ ವೀರಪ್ಪನ ಚಿಕ್ಕಪ್ಪ ಬಾಗಲಯ್ಯ ತನ್ನ 2 ಎಕರೆ ಆಸ್ತಿಯನ್ನು ಅವರಿಗೆ ಕೊಡುವುದಾಗಿ ದಾನಪತ್ರ ನೀಡಿದ್ದರು. ಚಿಕ್ಕಪ್ಪನ ನಿಧನದ ಬಳಿಕ ಆ ಆಸ್ತಿ ವೀರಪ್ಪನ ಹೆಸರಿಗೆ ರಿಜಿಸ್ಟರ್ ಆಗಿತ್ತು. ಆದರೆ ಆತನ ಮಕ್ಕಳಾದ ಮಲ್ಲಮ್ಮ ಹಾಗೂ ಮಹದೇವಮ್ಮ ಮತ್ತು ಅವರ ಕುಟುಂಬಸ್ಥರು ಆಸ್ತಿ ಹಂಚಿಕೆ ವಿಚಾರವಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಹಿನ್ನೆಲೆ ಮಂಗಳವಾರ ಆಲೂರು ಜೆಎಂಎಫ್ಸಿ ನ್ಯಾಯಾಲಯದಲ್ಲಿ ನಡೆದ ವಿಚಾರಣೆಗೆ ವೀರಪ್ಪ ಹಾಜರಾಗಿದ್ದರು. ವಿಚಾರಣೆಗೆ ಹಾಜರಾದ ನಂತರ ಜಮೀನಿನ ಕಡೆ ಹೋದ ವೀರಪ್ಪ ಅವರನ್ನು ದಾಯಾದಿಗಳೇ ಸಂಜೆ ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.
ಪೊಲೀಸ್ ತನಿಖೆ ಆರಂಭ:
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕಿ ಶುಭಾನ್ವಿತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಪ್ಪ ಅವರ ಪುತ್ರ ವಿವೇಕ್, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿವೇಕ್ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾರೆ. ವೀರಪ್ಪ ಅವರ ಮೃತದೇಹ ಸಂಪೂರ್ಣ ಸುಟ್ಟು ಹೋಗಿದೆ. ಪೊಲೀಸರು ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಆರೋಪಿಗಳ ಬಂಧನಕ್ಕಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ವೀರಪ್ಪ ಹತ್ಯೆ ಪ್ರಕರಣದಲ್ಲಿ, ಮಲ್ಲಮ್ಮ, ಮಹದೇವಮ್ಮ, ಹರೀಶ, ಲೋಕೇಶ, ಮಹದೇವ, ಬಾಗಲಯ್ಯ, ಸತೀಶ, ಜಯರಾಮ, ಧರ್ಮ, ಸ್ವಾಮಿ ಎಂಬ 10 ಮಂದಿ ವಿರುದ್ಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 08:29 pm
HK News Staffer
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm