ಬ್ರೇಕಿಂಗ್ ನ್ಯೂಸ್
20-02-26 11:31 am Mangalore Correspondent ಕ್ರೈಂ
ಪುತ್ತೂರು, ಫೆ.20: ಪುತ್ತೂರು ಕಡೆಯಿಂದ ಸುಳ್ಯಕ್ಕೆ ಅಕ್ರಮವಾಗಿ MDMA ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದ ಪುತ್ತೂರು ಪೊಲೀಸರು ಕೇರಳ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೇರಳದ ಕೋಝಿಕೋಡ್ ನಿವಾಸಿಗಳಾದ ಮಹಮ್ಮದ್ ಅಜ್ಮಲ್ (30), ಸಂಶೀರ್ (27), ವಯನಾಡ್ ಜಿಲ್ಲೆಯ ಮೂಲದ ಇಸ್ಮಾಯಿಲ್ (28) ಬಂಧಿತರು. ವಾಹನದಲ್ಲಿ ಮಾರಾಕಾಯುಧ ತಲವಾರನ್ನು ಇಟ್ಟುಕೊಂಡು, ಸುಮಾರು 5,38,800 ರೂ. ಮೌಲ್ಯದ 53.58 ಗ್ರಾಂ MDMA ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡಲು ಒಯ್ಯುತ್ತಿರುವುದು ಪತ್ತೆಯಾಗಿದೆ.
ಆರೋಪಿಗಳಿಂದ ಒಂದು ಕಾರು, ಮಾರಕಾಸ್ತ್ರ, ಮೊಬೈಲ್ಗಳು ಹಾಗೂ ನಗದು ರೂ. 10,000/- ವಶಪಡಿಸಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 25/2026 ಕಲಂ 8C, 22(C), 29 NDPS Act 1985 & ಕಲಂ: 25(1B)(B) Arms Act ನಂತೆ ಪ್ರಕರಣ ದಾಖಲಿಸಲಾಗಿದೆ. ಸದ್ರಿ ಆರೋಪಿಗಳು ಕೇರಳ ,ಗೋವಾ, ಹಾಗೂ ಕರ್ನಾಟಕ ರಾಜ್ಯಗಳಿಗೆ ಮಾದಕ ವಸ್ತುವನ್ನು ಸರಬರಾಜು ಮಾಡುತ್ತಿದ್ದು, ಕೇರಳ ರಾಜ್ಯದ ಕೋಝಿಕೋಡು, ಕಣ್ಣೂರು, ವಯನಾಡ್ ಜಿಲ್ಲೆಗಳಲ್ಲಿ ಪ್ರಕರಣ ದಾಖಲಾಗಿದ್ದು ತಲೆಮರೆಸಿಕೊಂಡಿದ್ದರು. ಅಲ್ಲದೆ ಮುಹಮ್ಮದ್ ಅಜ್ಮಲ್ ಸಿ @ ಅಜ್ಜು ಎಂಬಾತನು ಇತ್ತೀಚೆಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಅ.ಕ್ರ: 04/2026 ಕಲಂ 8C, 21(b),NDPS Act 1985 ರ ಪ್ರಕರಣದ ಆರೋಪಿ. ಅಜ್ಮಲ್ ಸಹಚರನಾದ ಇಸ್ಮಾಯಿಲ್ ಮೇಲೆ ಕೋಝಿಕೋಡು ಜಿಲ್ಲೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ದಾಖಲಾಗಿದೆ.
ಪತ್ತೆ ಕಾರ್ಯದಲ್ಲಿ ಪುತ್ತೂರು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಮೋದ್ ಕುಮಾರ್, ಪುತ್ತೂರು ಗ್ರಾಮಾಂತರ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕರಾದ ಸುನಿಲ್ ಕುಮಾರ್, ದ.ಕ ಜಿಲ್ಲಾ ಡಿ.ಎಸ್.ಬಿ ವಿಭಾಗದ ಪೊಲೀಸ್ ನಿರೀಕ್ಷಕರಾದ ನಂದ ಕುಮಾರ್, ಪುತ್ತೂರು ಗ್ರಾಮಾಂತರ ಠಾಣಾ ಉಪ ನಿರೀಕ್ಷಕರಾದ ಗುಣಪಾಲ ಹಾಗೂ ಸುಶ್ಮಾ ಜೆ ಭಂಡಾರಿ ಹಾಗೂ ವಿಶೇಷ ತಂಡದ ಸಿಬ್ಬಂದಿಗಳಾದ ಅದ್ರಾಮ, ಪ್ರಶಾಂತ್ ರೈ, ಪ್ರಶಾಂತ್ ಎಂ, ಪ್ರವೀಣ್ ರೈ, ಹರ್ಷಿತ್ ಹಾಗೂ ಪುತ್ತೂರು ಗ್ರಾಮಾಂತರ ಠಾಣಾ ಸಿಬ್ಬಂಧಿಗಳಾದ ಪರಮೇಶ್ವರ ಗೌಡ, ಹರೀಶ್, ಸುಬ್ರಹ್ಮಣ್ಯ, ಬೀಮಸೇನ್, ಭವಿತ್ ರೈ, ನಾಗಾರಾಜ್, ಕಾರ್ತಿಕ್ ಜಿಲ್ಲಾ ಗಣಕ ಯಂತ್ರ ಸಿಬ್ಬಂದಿಗಳಾದ ದಿವಾಕರ್, ಸಂಪತ್ ಮತ್ತು ಗೃಹ ರಕ್ಷಕ ಸಿಬ್ಬಂದಿಗಳು ಕಾರ್ಯ ನಿರ್ವಹಿಸಿರುತ್ತಾರೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 08:29 pm
HK News Staffer
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm