ಬ್ರೇಕಿಂಗ್ ನ್ಯೂಸ್
20-02-26 02:31 pm Mangalore Correspondent ಕ್ರೈಂ
ಮಂಗಳೂರು, ಫೆ.20: ಬಿಎಸ್ಸೆನ್ನೆಲ್ ಸಂಸ್ಥೆಯ ವತಿಯಿಂದ ಸುಮಾರು 30-40 ವರ್ಷಗಳ ಹಿಂದೆ ಹಾಕಲಾಗಿದ್ದ ತಾಮ್ರದ ವೈರ್ ಗಳನ್ನು ಹೊಂದಿರುವ ಕೇಬಲನ್ನು ಮಣ್ಣಿನಡಿಯಿಂದ ತೆಗೆದು ಅಕ್ರಮವಾಗಿ ಮಾರಾಟ ಮಾಡಿದ ಕೃತ್ಯ ಬೆಳಕಿಗೆ ಬಂದಿದ್ದು, ಬಿಎಸ್ಸೆನ್ನೆಲ್ ಸಂಸ್ಥೆಗೆ ಸೇರಿದ ಮೂವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಪಾಂಡೇಶ್ವರ ಬಿಎಸ್ಸೆನ್ನೆಲ್ ಕಂಪನಿಯ ಕಚೇರಿಯಲ್ಲಿ ಟೆಲಿಕಾಂ ಟೆಕ್ನೀಶಿಯನ್ ಆಗಿರುವ ಕೆಕೆ ಚಾಮಿ(55), ಕಚೇರಿಯಲ್ಲಿ ಸಹಾಯಕ ಅಧೀಕ್ಷಕ ಹುದ್ದೆಯಲ್ಲಿದ್ದ ತನ್ವೀರ್ ಪಾಷಾ)48) ಮತ್ತು ಕೇಬಲ್ ಆಪರೇಟರ್ ಗುತ್ತಿಗೆ ನೌಕರನಾಗಿರುವ ಮಂಜುನಾಥ್ (35) ಎಂಬವರನ್ನು ಬಂಧಿಸಲಾಗಿದೆ. ಮಂಜುನಾಥ್ ಬಿಎಸ್ಸೆನ್ನೆಲ್ ಕಂಪನಿಯಲ್ಲಿ ಗುತ್ತಿಗೆ ನೌಕರನಾಗಿದ್ದು, ಎಲ್ ಅಂಡ್ ಟಿ ಕಂಪನಿಯಲ್ಲು ಕೇಬಲ್ ಜಾಯಿಂಟರ್ ಆಗಿ ಕೆಲಸ ಮಾಡುತ್ತಿದ್ದ.
ಹಿಂದೆ ಬಿಎಸ್ಸೆನ್ನೆಲ್ ಲ್ಯಾಂಡ್ ಫೋನ್ ಬಳಕೆಯಲ್ಲಿದ್ದಾಗ ಕೇಬಲನ್ನು ಭೂಗತವಾಗಿ ಹಾಕಲಾಗಿತ್ತು. ಪ್ರತಿ ಬಳಕೆದಾರನಿಗೂ ಪ್ರತ್ಯೇಕ ತಾಮ್ರದ ಕೇಬಲ್ ವೈರನ್ನು ಒಂದೇ ಪೈಪ್ ಒಳಗಡೆ ಹಾಕಿ ಸಂಪರ್ಕ ನೀಡಲಾಗುತ್ತಿತ್ತು. ಆದರೆ ಈಗ ಮೊಬೈಲ್ ಇನ್ನಿತರ ಖಾಸಗಿ ಕಂಪನಿಗಳ ದೂರವಾಣಿ ಚಾಲ್ತಿಗೆ ಬಂದಿರುವುದರಿಂದ ಹಳೆ ಮಾದರಿಯ ಲ್ಯಾಂಡ್ ಫೋನ್ ಅಗತ್ಯವಿಲ್ಲದೆ ಅದರ ಬಳಕೆ ಇಲ್ಲವಾಗಿದೆ.
ಇದರ ಬಗ್ಗೆ ಮಾಹಿತಿಯಿದ್ದ ಬಿಎಸ್ಸೆನ್ನೆಲ್ ಸಂಸ್ಥೆಯ ಟೆಕ್ನೀಶಿಯನ್ ಕೆಕೆ ಚಾಮಿ ಮತ್ತು ಕಚೇರಿ ಅಧೀಕ್ಷಕ ತನ್ವೀರ್ ಪಾಷಾ, ಮಂಜುನಾಥ್ ಜೊತೆಗೂಡಿ ಹಳೆ ಕಾಲದ ತಾಮ್ರದ ಕೇಬಲನ್ನು ತೆಗೆದು ಮಾರಾಟ ಮಾಡುತ್ತಿದ್ದರು. ನೆಹರು ಮೈದಾನ ಆಸುಪಾಸಿನಲ್ಲಿ ಸೇರಿದಂತೆ ಹಲವೆಡೆ ಹಾಕಿದ್ದ ಕೇಬಲನ್ನು ಒಂದೂವರೆ ವರ್ಷಗಳಿಂದ ತೆಗೆದು ಮಾರಾಟ ಮಾಡಿದ್ದು, ಇದರ ಈಗಿನ ಮಾರುಕಟ್ಟೆ ಮೌಲ್ಯ 70 ಲಕ್ಷ ಆಗಬಹುದೆಂದು ಅಂದಾಜಿಸಲಾಗಿದೆ. ಈ ಬಗ್ಗೆ ಪಾಂಡೇಶ್ವರ ಬಿಎಸ್ಸೆನ್ನೆಲ್ ಕಚೇರಿಯ ಜೂನಿಯರ್ ಟೆಲಿಕಾಂ ಆಫೀಸರ್ ವಿನೋದ್ ಶೇಖರ್ ನಾಯ್ಕ್ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಅವರ ಬಳಿಯಿದ್ದ 45 ಕೇಜಿ ತಾಮ್ರದ ಕೇಬಲ್ ಮತ್ತು ಕೇಬಲ್ ಮಾರಾಟ ಮಾಡಿ ಬಂದಿದ್ದ 10 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
20-02-26 03:03 pm
HK News Desk
ಬಿಎಸ್ಸೆನ್ನೆಲ್ ಕೇಬಲ್ ಕಳ್ಳತನ ; ಭೂಗತ ಹಾಕಿದ್ದ ತಾಮ...
20-02-26 02:31 pm
ಅಂತಾರಾಜ್ಯ ಮಾದಕ ವಸ್ತು ಮಾರಾಟ ಜಾಲದ ಆರೋಪಿಗಳು ವಶಕ್...
20-02-26 11:31 am
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm