ಬ್ರೇಕಿಂಗ್ ನ್ಯೂಸ್
20-02-26 09:07 pm HK News Desk ಕ್ರೈಂ
ಗದಗ, ಫೆ 20: ಲಕ್ಕುಂಡಿ ನಿಧಿ ಪತ್ತೆಯ ಪ್ರಕರಣದ ಬೆನ್ನಲ್ಲೇ, ಇದೀಗ ಮತ್ತೊಂದು ನಿಧಿ ಶೋಧದ ಮೋಸದ ದೊಡ್ಡ ಜಾಲ ಬಯಲಾಗಿದೆ. ಹಳೆ ಪ್ರಕರಣ ಇದಾಗಿದ್ದು, ಹೊಸ ತಿರುವು ಸಿಕ್ಕಿದೆ. 01-01-2021 ರಿಂದ 30-05-2022ರ ಅವಧಿಯಲ್ಲಿ ನಡೆದ ನಿಧಿ ಶೋಧ ಪ್ರಕರಣದಲ್ಲಿ ಪೊಲೀಸರ ತನಿಖೆ ವೇಳೆ ನಕಲಿ ಬಂಗಾರದ ಬಿಸ್ಕತ್ ಪತ್ತೆಯಾಗಿದ್ದು, ನಿಧಿ ಹೆಸರಿನಲ್ಲಿ ನಡೆದ ಅಂತಾರಾಜ್ಯ ಮಟ್ಟದ ಮೋಸ ಇದೀಗ ಬಹಿರಂಗವಾಗಿದೆ.
ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದು, ಅಂತಾರಾಜ್ಯ ಮೋಸಗಾರರ ಜಾಲವನ್ನು ಗದಗ ಗ್ರಾಮೀಣ ಪೊಲೀಸರು ಭೇದಿಸಿದ್ದು, ಅಂದು ಲಕ್ಕುಂಡಿಯಲ್ಲಿ ನಿಧಿ ಹುಡುಕಿ ಕೊಡುವುದಾಗಿ ಮೋಸ ಮಾಡಿದ ಆರೋಪಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಉತ್ತರಾಖಂಡದ ಕಿಂಗ್ಪಿನ್ ಬಂಧನ:
ಉತ್ತರಾಖಂಡದ ಕಾಶಿಪುರ ಮೂಲದ ಹಜರತ್ ಮೌಲ್ವಿ ಎಂಬಾತನೇ ಈ ನಿಧಿ ಶೋಧದ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದು, ಈತನನ್ನು ಗದಗ ಪೊಲೀಸರು ಈಗ ಬಂಧಿಸಿದ್ದಾರೆ. ಆರೋಪಿಯು ಆರು ಅಡಿ ಆಳದ ಗುಂಡಿ ತೆಗೆಸಿ, ಅದರಲ್ಲಿ ಹಂಡಿ ಇಟ್ಟು ಹಂಡಿಯೊಳಗೆ ಬಂಗಾರದ ನಾಣ್ಯಗಳಿವೆ ಎಂದು ಹಲವರನ್ನು ನಂಬಿಸಿ ಜನರಿಗೆ ಮೋಸ ಮಾಡುತ್ತಿದ್ದ. ಹೀಗೆ ಹಲವರಿಗೆ ಮೋಸ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಹಜರತ್ ಮೌಲ್ವಿಯನ್ನು ಬಂಧಿಸಿರುವುದಾಗಿ ಎಸ್ಪಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದಾರೆ.
ಮೋಸದ ಜಾಲ ಶುರುವಾಗಿದ್ದು ಹೇಗೆ? :
ಧಾರವಾಡ ಮೂಲದ ಬಸೀರಾಬೇಗಂ ಎಂಬ ಮಹಿಳೆಗೆ, ಶಾದಿ ಡಾಟ್ ಕಾಂ ಮೂಲಕ ಉತ್ತರಾಖಂಡದ ಈ ಹಜರತ್ ಮೌಲ್ವಿಯ ಪರಿಚಯವಾಗಿತ್ತು. ಬಸೀರಾಬೇಗಂ ಧಾರವಾಡದಲ್ಲಿ ಗ್ಯಾಸ್ ಎಜೆನ್ಸಿ ಇಟ್ಟುಕೊಂಡಿದ್ದು, ಅನಿರೀಕ್ಷಿತವಾಗಿ ಆದ ಭೇಟಿಯ ವೇಳೆ ತನಗೆ ಮಾಟ - ಮಂತ್ರ ಹಾಗೂ ನಿಧಿ ತೆಗೆಯುವ ವಿದ್ಯೆ ಗೊತ್ತಿದೆ ಎಂದು ಮೌಲ್ವಿ ಈ ವೇಳೆ ಹೇಳಿಕೊಂಡಿದ್ದ. ಇದನ್ನೂ ಬಸೀರಾಬೇಗಂ ನಂಬಿದ್ದಳು. ನಂತರ ಬಸೀರಾಬೇಗಂ ಮೂಲಕ ಗದಗದ ಇಕ್ಬಾಲ್, ಗೂಳಪ್ಪ, ಸಣ್ಣಬಸಪ್ಪ ಹಾಗೂ ದೊಡ್ಡಬಸಪ್ಪ ಹೀಗೆ...ಒಬ್ಬರಿಗೊಬ್ಬರ ಪರಿಚಯ ಒಂದು ಕೊಂಡಿ ರೂಪದಲ್ಲಿ ಬೆಳೆದಿತ್ತು. ಸಣ್ಣಬಸಪ್ಪ ಹಾಗೂ ದೊಡ್ಡಬಸಪ್ಪ ಅವರ ಜಮೀನಿನಲ್ಲಿ ನಿಧಿ ಇದೆ ಅಂತ ಹೇಳಿ ನಂಬಿಸಿ ಅಗೆಯಿಸಲಾಗಿತ್ತು. ಅದಕ್ಕೂ ಮುನ್ನ ಗದಗದ ಅಂಗಡಿಯಲ್ಲಿ ಹಳೆ ಬಿಂದಿಗೆಯನ್ನು ಖರೀದಿ ಮಾಡಿ, ಅದನ್ನು ಜಮೀನಿನಲ್ಲಿ ಹುದುಗಿಸಿದ್ದ. ಬಳಿಕ ನಿಧಿ ಶೋಧ ಮಾಡಿದ ಹಾಗೇ ನಾಟಕ ಮಾಡಿದ್ದ ಹಜರತ್, ಎಲ್ಲರಿಗೂ ಮೋಸ ಮಾಡಿದ್ದ. ಅಲ್ಲದೇ, ಸಣ್ಣಬಸಪ್ಪ ಮತ್ತು ದೊಡ್ಡ ಬಸಪ್ಪರಿಂದ ಹಣದ ಬೇಡಿಕೆ ಇಟ್ಟಿದ್ದನು. ಹಣ ನೀಡಲು ನಿರಾಕರಿಸಿದಾಗ ಕೋಪಗೊಂಡ ಮೌಲ್ವಿ, ಚಿನ್ನವೆಲ್ಲಾ ಮಣ್ಣಾಗಿದೆ ಎಂದು ಹೇಳಿ ಎಸ್ಕೇಪ್ ಆಗಿದ್ದನು. ಈಗ ಈ ಹಜರತ್ ಮೌಲ್ವಿಯನ್ನು ಅರೆಸ್ಟ್ ಮಾಡಿದ್ದು, ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಎಸ್ಪಿ ಹೇಳಿದ್ದಾರೆ.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am