ಬ್ರೇಕಿಂಗ್ ನ್ಯೂಸ್
21-02-26 04:29 pm HK News Desk ಕ್ರೈಂ
ಬೆಂಗಳೂರು, ಫೆ.21: ಭಯೋತ್ಪಾದಕ ಸಂಘಟನೆ ಲಷ್ಕರ್ ಎ ತೊಯ್ಬಾ (ಎಲ್ಇಟಿ)ಗೆ ಉಗ್ರ ಜುನೈದ್ ಅಹ್ಮದ್ ಕುರಿತು ಮಾಹಿತಿ ನೀಡುವವರಿಗೆ 5 ಲಕ್ಷ ರೂಪಾಯಿ ನಗದು ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದೆ. 33 ವರ್ಷದ ಜುನೈದ್ ಘೋಷಿತ ಅಪರಾಧಿಯಾಗಿದ್ದು, ಶಸ್ತ್ರಾಸ್ತ್ರ ಹಾಗೂ ಸ್ಫೋಟಕ ವಸ್ತುಗಳ ವಶಪಡಿಸಿದ ಪ್ರಕರಣದಲ್ಲಿ ತನಿಖಾ ಸಂಸ್ಥೆಯ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದಾನೆ.
ಜುನೈದ್ ಅಹ್ಮದ್ ವಿವಿಧ ಹೆಸರುಗಳನ್ನು ಬಳಸಿಕೊಂಡು ಬೆಂಗಳೂರಿನ ನಾಗಶೆಟ್ಟಿಹಳ್ಳಿಯ ಮಲ್ಲಿಗೆ ಲೇಔಟ್ ಪ್ರದೇಶದಲ್ಲಿ ವಾಸವಾಗಿದ್ದ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಜುನೈದ್, ಜೆಡಿ ಜಮ್ಶೀದಾ, ಜಾನ್, ಸುಹಾನಾ, ಡಿಜೆ ರಿಟ್ಜ್, ಜಮೀಲಾ ಹಾಗೂ ಜನ್ನು ಎಂಬ ಹೆಸರುಗಳನ್ನು ಬಳಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.
ಜುನೈದ್ ಅಹ್ಮದ್ ಬಂಧನಕ್ಕೆ ನೆರವಾಗುವ ಯಾವುದೇ ಮಾಹಿತಿಯನ್ನು 080-29510900 ಅಥವಾ 8904241100 ಸಂಖ್ಯೆಗೆ ಹಂಚಿಕೊಳ್ಳಬಹುದು ಎಂದು ಎನ್ಐಎ ತಿಳಿಸಿದೆ. ಮಾಹಿತಿದಾರರ ಗುರುತನ್ನು ಸಂಪೂರ್ಣ ಗೌಪ್ಯವಾಗಿಡಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಭಯೋತ್ಪಾದಕ ಜಾಲ ನಿರ್ಮಾಣ
2023ರ ಜುಲೈನಲ್ಲಿ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಯೋತ್ಪಾದಕ ಚಟುವಟಿಕೆ ಸಂಬಂಧ ಪ್ರಕರಣ ದಾಖಲಾಗಿತ್ತು. ಅದೇ ವರ್ಷ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಅಧಿಕಾರಿಗಳು ಪರಪ್ಪನ ಅಗಹಾರದಲ್ಲಿರುವ ಕೇಂದ್ರ ಕಾರಾಗೃಹದಿಂದ ಐವರು ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದರು. ಆರೋಪಿಗಳಿಂದ ಏಳು ದೇಶೀಯ ಪಿಸ್ತೂಲ್ಗಳು, 45 ಜೀವಂತ ಗುಂಡುಗಳು, ವಾಕಿ ಟಾಕಿ ಸೆಟ್ಗಳು, ಚಾಕು ಹಾಗೂ 12 ಮೊಬೈಲ್ ಫೋನ್ಗಳನ್ನು ವಶಪಡಿಸಲಾಗಿತ್ತು. ಜುನೈದ್ ಹಾಗೂ ಮತ್ತೊಬ್ಬ ಉಗ್ರ ಟಿ. ನಸೀರ್ ಅಲಿಯಾಸ್ ಉಮ್ಮರ್ ಹಾಜಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಅಪಹರಣ ಮತ್ತು ಕೊಲೆ ಪ್ರಕರಣಗಳ ಆರೋಪ
ಜುನೈದ್ ಅಹ್ಮದ್ ಜೊತೆಗೆ ಬಂಧಿತ ಐವರು 2017ರಲ್ಲಿ ಆರ್ಟಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನೂರ್ ಅಹ್ಮದ್ ಎಂಬ ವ್ಯಕ್ತಿಯನ್ನು ಅಪಹರಿಸಿ ಕೊಲೆ ಮಾಡಿದ್ದರೆಂದು ಆರೋಪಿಸಲಾಗಿದೆ. ಸುಮಾರು 18 ತಿಂಗಳು ವಿಚಾರಣಾಧೀನ ಕೈದಿಗಳಾಗಿ ಜೈಲು ಶಿಕ್ಷೆ ಅನುಭವಿಸಿದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಮತ್ತೆ ಅಪರಾಧ ಚಟುವಟಿಕೆಗಳಲ್ಲಿ ಭಾಗಿ
2020ರಲ್ಲಿ ರಕ್ತಚಂದನ ಕಳ್ಳಸಾಗಣೆ ಪ್ರಕರಣದಲ್ಲಿ ಜುನೈದ್ ಬಂಧನಕ್ಕೊಳಗಾಗಿದ್ದ. 2021ರಲ್ಲಿ ಡಕಾಯಿತಿ ಪ್ರಕರಣದಲ್ಲೂ ಬಂಧನವಾಗಿ ಜಾಮೀನಿನ ಮೇಲೆ ಹೊರಬಂದ ಬಳಿಕ ದೇಶ ತೊರೆದು ಮಧ್ಯಪ್ರಾಚ್ಯ ರಾಷ್ಟ್ರದಲ್ಲಿ ಆಶ್ರಯ ಪಡೆದಿದ್ದಾನೆ ಎಂದು ಶಂಕಿಸಲಾಗಿದೆ. ಎರಡು ವರ್ಷಗಳ ಹಿಂದೆ ಉಗ್ರ ಚಟುವಟಿಕೆಗಳಿಗೆ ಸಹಾಯ ಮಾಡಿದ ಆರೋಪದಡಿ ಜುನೈದ್ ಅಹ್ಮದ್ ತಾಯಿ ಅನೀಸ್ ಫಾತಿಮಾ ಅವರನ್ನು ಎನ್ಐಎ ಬಂಧಿಸಿತ್ತು. ಅಲ್ಲದೆ ನಗರ ಸಶಸ್ತ್ರ ಮೀಸಲು-ದಕ್ಷಿಣದ ಸಹಾಯಕ ಸಬ್ ಇನ್ಸ್ಪೆಕ್ಟರ್ ಚಾಂದ್ ಪಾಷಾ ಹಾಗೂ ಬೆಂಗಳೂರಿನ ಕೇಂದ್ರ ಕಾರಾಗೃಹದ ಮನೋವೈದ್ಯ ಡಾ. ನಾಗರಾಜ್ ಅವರನ್ನು ಸಹ ಬಂಧಿಸಲಾಗಿತ್ತು.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 08:29 pm
HK News Staffer
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm