ಬ್ರೇಕಿಂಗ್ ನ್ಯೂಸ್
21-02-26 05:50 pm HK News Desk ಕ್ರೈಂ
ಗದಗ, ಫೆ.21: ಸಣ್ಣ ನೀರಾವರಿ ಇಲಾಖೆಯ ಕಾಮಗಾರಿ ಗುತ್ತಿಗೆ ನೀಡಲು 5 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಸೇರಿ ಮೂವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆಯಲ್ಲಿ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ನಡೆಸಿ ಶಾಸಕರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದೆ.
ಬಂಧಿತರಲ್ಲಿ ಶಾಸಕ ಚಂದ್ರು ಲಮಾಣಿ, ಅವರ ಸರ್ಕಾರಿ ಪಿಎ ಮಂಜುನಾಥ ವಾಲ್ಮೀಕಿ ಹಾಗೂ ಖಾಸಗಿ ಪಿಎ ಗುರುನಾಯ್ಕ್ ಸೇರಿದ್ದಾರೆ. ದಾಳಿಯ ವೇಳೆ ಕಂತೆ ಕಂತೆ ನಗದು ಹಣ ವಶಪಡಿಸಿರುವುದಾಗಿ ತಿಳಿದುಬಂದಿದೆ.

ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಕಮಿಷನ್ ಆರೋಪ
ಸಂಕದಾಳ ಗ್ರಾಮದ ರಸ್ತೆ ಬದಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ 1 ಕೋಟಿ ರೂಪಾಯಿ ಮೌಲ್ಯ ನಿಗದಿಯಾಗಿತ್ತು. ಕಾಮಗಾರಿಯನ್ನು ಒಪ್ಪಿಸಲು ಕ್ಲಾಸ್-1 ಗುತ್ತಿಗೆದಾರ ವಿಜಯ ಪೂಜಾರ ಅವರ ಬಳಿ 11 ಲಕ್ಷ ರೂಪಾಯಿ ಕಮಿಷನ್ ಬೇಡಿಕೆಯಿಟ್ಟಿದ್ದರೆಂದು ಆರೋಪಿಸಲಾಗಿದೆ. ಮೊದಲ ಹಂತದ ಹಣವಾಗಿ 5 ಲಕ್ಷ ರೂಪಾಯಿ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ನಡೆಸಿ ಬಂಧಿಸಿದ್ದಾರೆ.
ಕಮಿಷನ್ ನೀಡಲು ನಿರಾಕರಿಸಿದ ಗುತ್ತಿಗೆದಾರ ಲೋಕಾಯುಕ್ತಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಬಲೆ ಬೀಸಲಾಗಿತ್ತು. ಮುಂಗಡ ಹಣ ಹಸ್ತಾಂತರದ ಕ್ಷಣದಲ್ಲೇ ಕಾರ್ಯಾಚರಣೆ ನಡೆಸಿ ಶಾಸಕರನ್ನ ಖೆಡ್ಡಾಕ್ಕೆ ಕೆಡವಲಾಗಿದೆ.
ಆಡಿಯೋ ಸಾಕ್ಷ್ಯ ಆಧಾರವಾಗಿ ಎಫ್ಐಆರ್
ಲೋಕಾಯುಕ್ತ ಮೂಲಗಳ ಪ್ರಕಾರ, ಎರಡು ದಿನಗಳ ಹಿಂದೆಯೇ ಹಣಕ್ಕೆ ಬೇಡಿಕೆಯಿಟ್ಟಿದ್ದ ಆಡಿಯೋ ದಾಖಲೆ ಲಭ್ಯವಾಗಿತ್ತು. ಆ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು. ಇಂದು ಹಣ ಸ್ವೀಕಾರದ ವೇಳೆ ಟ್ರ್ಯಾಪ್ ಮಾಡಿ ಬಂಧನ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಬಾಲಾಜಿ ಆಸ್ಪತ್ರೆಯಲ್ಲಿ ಬಂಧನವಾದ ನಂತರ ಶಾಸಕರ ಮನೆಯ ಮೇಲೂ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಸಂಬಂಧಿತ ದಾಖಲೆಗಳು ಹಾಗೂ ಹಣಕಾಸು ವ್ಯವಹಾರಗಳ ಕುರಿತು ಪರಿಶೀಲನೆ ಮುಂದುವರೆದಿದೆ.
ರಾಜಕೀಯ ವಲಯದಲ್ಲಿ ಸಂಚಲನ
ರಾಜ್ಯ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡುತ್ತಿದ್ದ ಬಿಜೆಪಿಗೆ ಈ ಬೆಳವಣಿಗೆ ಭಾರೀ ಮುಜುಗರ ತಂದಿದೆ. ತಮ್ಮದೇ ಪಕ್ಷದ ಶಾಸಕ ಲಂಚ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವುದು ರಾಜಕೀಯವಾಗಿ ಚರ್ಚೆಗೆ ಗ್ರಾಸವಾಗಿದೆ. ವಿಧಾನಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ, ಪ್ರಕರಣದ ಸತ್ಯಾಸತ್ಯತೆ ಪರಿಶೀಲನೆ ಆಗಬೇಕು. ನಮ್ಮ ಪಕ್ಷ ಲಂಚ ಸ್ವೀಕಾರವನ್ನು ಯಾವತ್ತೂ ಬೆಂಬಲಿಸುವುದಿಲ್ಲ ಎಂದು ತಿಳಿಸಿದ್ದಾರೆ.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am