ಬ್ರೇಕಿಂಗ್ ನ್ಯೂಸ್
22-02-26 10:00 pm HK News Desk ಕ್ರೈಂ
ನವದೆಹಲಿ, ಫೆ.22: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ನಲ್ಲಿ ನಡೆದ ಸೇನಾ ಪಡೆಯ ಕಾರ್ಯಾಚರಣೆಯಲ್ಲಿ ಜೈಶ್ ಇ -ಮಹಮ್ಮದ್ ಕಮಾಂಡರ್ ಸೈಫುಲ್ಲಾ ಸೇರಿದಂತೆ ಮೂವರು ಉಗ್ರರು ಹತರಾಗಿದ್ದಾರೆ. ಪರ್ವತ ಪ್ರದೇಶ ಕಿಶ್ತ್ವಾರ್ ಜಿಲ್ಲೆಯ ಚತ್ರೂ ಅರಣ್ಯ ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ ಸೈನಿಕರು ಮತ್ತು ಜಮ್ಮು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಗುಪ್ತಚರ ಬ್ಯೂರೋ ಮತ್ತು ಇತರ ಗುಪ್ತಚರ ಮೂಲಗಳಿಂದ ಬಂದ ಮಾಹಿತಿಯ ಮೇರೆಗೆ, ಸೇನೆ, ಪೊಲೀಸರು ಮತ್ತು ಅರೆಸೈನಿಕ ಸಿಆರ್ಪಿಎಫ್ ಜಂಟಿ ಕಾರ್ಯಾಚರಣೆಯನ್ನು ನಡೆಸಿತ್ತು. ಕಿಶ್ತ್ವಾರ್ನ ಚತ್ರೂ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು.
ಈ ವೇಳೆ, ಇಬ್ಬರು ಉಗ್ರರು ಹತರಾಗಿದ್ದು ತಿಳಿದುಬಂದಿತ್ತು. ಎನ್ಕೌಂಟರ್ ಸ್ಥಳದಿಂದ ಎರಡು ಎಕೆ-47 ರೈಫಲ್ಗಳು ಮತ್ತು ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಸಂಜೆಯ ವೇಳೆಗೆ, ಇಂಡಿಯಾ ಟಿವಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಬಗ್ಗೆ ಮಾಹಿತಿ ನೀಡಿದೆ.
ಎನ್ಕೌಂಟರ್ ನಲ್ಲಿ ಹತನಾಗಿರುವ ಪಾಕಿಸ್ತಾನ ಮೂಲದ ಜೈಶ್ ಉಗ್ರ ಸೈಫುಲ್ಲಾ ಕಳೆದ ಕೆಲವು ವರ್ಷಗಳಿಂದ ಈ ಪ್ರದೇಶದಲ್ಲಿ ಸಕ್ರಿಯನಾಗಿದ್ದ ಮತ್ತು ಭದ್ರತಾ ಪಡೆಗಳ ಮೇಲಿನ ಹಲವಾರು ದಾಳಿಗಳಲ್ಲಿ ಭಾಗಿಯಾಗಿದ್ದ. ಜನವರಿ 18 ರಂದು ನಡೆದ ಎನ್ಕೌಂಟರ್ನಲ್ಲಿ ಪ್ಯಾರಾ ಕಮಾಂಡೋ ಸಾವನ್ನಪ್ಪಿ ಇತರರು ಗಾಯಗೊಂಡ ನಂತರ, ಭದ್ರತಾ ಪಡೆಗಳು ಚತ್ರೂ ಮತ್ತು ಕಿಶ್ತ್ವಾರ್ನ ಪಕ್ಕದ ಅರಣ್ಯ ಪ್ರದೇಶಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿವೆ.
ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ಪೊಲೀಸರ ಜೊತೆಗಿದ್ದ ಟೈಸನ್ ಎಂಬ ಗೂಢಚರ್ಯೆ ಮಾಡುತ್ತಿದ್ದ ಜರ್ಮನ್ ಶೆಫರ್ಡ್ ನಾಯಿ ಗುಂಡೇಟಿಗೆ ಒಳಗಾಗಿದೆ. ಕೂಡಲೇ ಅದನ್ನು ಹೆಲಿಕಾಪ್ಟರ್ ನಲ್ಲಿ ಏರ್ ಲಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗಿದೆ..
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm