ಬ್ರೇಕಿಂಗ್ ನ್ಯೂಸ್
22-02-26 10:00 pm HK News Desk ಕ್ರೈಂ
ನವದೆಹಲಿ, ಫೆ.22: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ನಲ್ಲಿ ನಡೆದ ಸೇನಾ ಪಡೆಯ ಕಾರ್ಯಾಚರಣೆಯಲ್ಲಿ ಜೈಶ್ ಇ -ಮಹಮ್ಮದ್ ಕಮಾಂಡರ್ ಸೈಫುಲ್ಲಾ ಸೇರಿದಂತೆ ಮೂವರು ಉಗ್ರರು ಹತರಾಗಿದ್ದಾರೆ. ಪರ್ವತ ಪ್ರದೇಶ ಕಿಶ್ತ್ವಾರ್ ಜಿಲ್ಲೆಯ ಚತ್ರೂ ಅರಣ್ಯ ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ ಸೈನಿಕರು ಮತ್ತು ಜಮ್ಮು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಗುಪ್ತಚರ ಬ್ಯೂರೋ ಮತ್ತು ಇತರ ಗುಪ್ತಚರ ಮೂಲಗಳಿಂದ ಬಂದ ಮಾಹಿತಿಯ ಮೇರೆಗೆ, ಸೇನೆ, ಪೊಲೀಸರು ಮತ್ತು ಅರೆಸೈನಿಕ ಸಿಆರ್ಪಿಎಫ್ ಜಂಟಿ ಕಾರ್ಯಾಚರಣೆಯನ್ನು ನಡೆಸಿತ್ತು. ಕಿಶ್ತ್ವಾರ್ನ ಚತ್ರೂ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು.
ಈ ವೇಳೆ, ಇಬ್ಬರು ಉಗ್ರರು ಹತರಾಗಿದ್ದು ತಿಳಿದುಬಂದಿತ್ತು. ಎನ್ಕೌಂಟರ್ ಸ್ಥಳದಿಂದ ಎರಡು ಎಕೆ-47 ರೈಫಲ್ಗಳು ಮತ್ತು ಇತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ ಸಂಜೆಯ ವೇಳೆಗೆ, ಇಂಡಿಯಾ ಟಿವಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಬಗ್ಗೆ ಮಾಹಿತಿ ನೀಡಿದೆ.
ಎನ್ಕೌಂಟರ್ ನಲ್ಲಿ ಹತನಾಗಿರುವ ಪಾಕಿಸ್ತಾನ ಮೂಲದ ಜೈಶ್ ಉಗ್ರ ಸೈಫುಲ್ಲಾ ಕಳೆದ ಕೆಲವು ವರ್ಷಗಳಿಂದ ಈ ಪ್ರದೇಶದಲ್ಲಿ ಸಕ್ರಿಯನಾಗಿದ್ದ ಮತ್ತು ಭದ್ರತಾ ಪಡೆಗಳ ಮೇಲಿನ ಹಲವಾರು ದಾಳಿಗಳಲ್ಲಿ ಭಾಗಿಯಾಗಿದ್ದ. ಜನವರಿ 18 ರಂದು ನಡೆದ ಎನ್ಕೌಂಟರ್ನಲ್ಲಿ ಪ್ಯಾರಾ ಕಮಾಂಡೋ ಸಾವನ್ನಪ್ಪಿ ಇತರರು ಗಾಯಗೊಂಡ ನಂತರ, ಭದ್ರತಾ ಪಡೆಗಳು ಚತ್ರೂ ಮತ್ತು ಕಿಶ್ತ್ವಾರ್ನ ಪಕ್ಕದ ಅರಣ್ಯ ಪ್ರದೇಶಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿವೆ.
ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ಪೊಲೀಸರ ಜೊತೆಗಿದ್ದ ಟೈಸನ್ ಎಂಬ ಗೂಢಚರ್ಯೆ ಮಾಡುತ್ತಿದ್ದ ಜರ್ಮನ್ ಶೆಫರ್ಡ್ ನಾಯಿ ಗುಂಡೇಟಿಗೆ ಒಳಗಾಗಿದೆ. ಕೂಡಲೇ ಅದನ್ನು ಹೆಲಿಕಾಪ್ಟರ್ ನಲ್ಲಿ ಏರ್ ಲಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗಿದೆ..
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am