ಶಿವಮೊಗ್ಗದಿಂದ ಕೇರಳಕ್ಕೆ ಗೋಸಾಗಣೆ ; ಮಂಗಳೂರಿನಲ್ಲಿ ಲಾರಿ ಅಡ್ಡಗಟ್ಟಿ ಪೊಲೀಸರ ಕಾರ್ಯಾಚರಣೆ, 34 ಗೋವುಗಳ ಕೈಕಾಲು ಕಟ್ಟಿ ಬಂಧಿಸಿದ್ದು ಪತ್ತೆ- ರಕ್ಷಣೆ

22-02-26 10:43 pm       Mangalore Correspondent   ಕ್ರೈಂ

ಅಕ್ರಮವಾಗಿ ಜಾನುವಾರುಗಳನ್ನು ಕೈಕಾಲು ಕಟ್ಟಿ ಕೇರಳಕ್ಕೆ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕದ್ರಿ ಠಾಣೆ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕಿ ಲಾರಿಯನ್ನು ಅಡ್ಡಗಟ್ಟಿ 34 ಗೋವುಗಳನ್ನು ರಕ್ಷಿಸಿದ್ದಾರೆ.

ಮಂಗಳೂರು, ಫೆ.22: ಅಕ್ರಮವಾಗಿ ಜಾನುವಾರುಗಳನ್ನು ಕೈಕಾಲು ಕಟ್ಟಿ ಕೇರಳಕ್ಕೆ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕದ್ರಿ ಠಾಣೆ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕಿ ಲಾರಿಯನ್ನು ಅಡ್ಡಗಟ್ಟಿ 34 ಗೋವುಗಳನ್ನು ರಕ್ಷಿಸಿದ್ದಾರೆ. 

ಕದ್ರಿ ಪೊಲೀಸರು ಭಾನುವಾರ ಮುಂಜಾನೆ ಕಾರ್ಯಾಚರಣೆ ನಡೆಸಿದ್ದು ನಂತೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ‌ ಲಾರಿ ನಿಲ್ಲಿಸಿ ಶೋಧ ನಡೆಸಿದ್ದಾರೆ. ಹೆದ್ದಾರಿಯಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ಲಾರಿಯನ್ನು‌ ತಡೆದು ಕಾರ್ಯಾಚರಣೆ ನಡೆಸಿದ್ದಾರೆ. ರಾತ್ರಿ ಗಸ್ತಿನಲ್ಲಿದ್ದ ಪೊಲೀಸರಿಗೆ ಜಾನುವಾರು ಸಾಗಾಟದ ಬಗ್ಗೆ ಖಚಿತ ಮಾಹಿತಿ ದೊರಕಿತ್ತು. 

ಶೋಧ ಸಂದರ್ಭದಲ್ಲಿ, ಜಾನುವಾರುಗಳ ಕೈ ಕಾಲುಗಳನ್ನು ಹಗ್ಗದಿಂದ ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ಲಾರಿಯಲ್ಲಿ ತುಂಬಿಸಿಟ್ಟಿದ್ದು ಪತ್ತೆಯಾಗಿದೆ. ಲಾರಿಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ. ಈ ವೇಳೆ, ಲಾರಿಯಲ್ಲಿದ್ದ ಮೂವರು‌‌ ಆರೋಪಿಗಳನ್ನು ಬಂಧಿಸಲಾಗಿದೆ. ಮೈಸೂರು ಮೂಲದ ದಸ್ತಗೀರ್ ಸಾಬ್ (45), ಖತೀಬ್ ಪಾಷಾ, ಅಯೂಬ್ ಖಾನ್ ಬಂಧಿತರು.‌

ಗೋವುಗಳನ್ನು ಶಿವಮೊಗ್ಗದಿಂದ ಮೂಡುಬಿದ್ರೆ - ಮಂಗಳೂರು ಮೂಲಕ ಕೇರಳದ ಹೊಸಂಗಡಿಗೆ ಸಾಗಾಟ ಮಾಡುತ್ತಿದ್ದರು.‌ ಹೊಸಂಗಡಿಯಲ್ಲಿ ಮಾಂಸಗೈದು ಪೂರೈಕೆ ಮಾಡಲು ಯೋಜ‌ನೆ ಹಾಕಿದ್ದರು. ಆದರೆ ಮಂಗಳೂರು ಪೊಲೀಸರು ಲಾರಿಯನ್ನು ಅಡ್ಡಗಟ್ಟಿ ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ಕರ್ನಾಟಕ ಗೋ ಹತ್ಯೆ ತಡೆ ಮತ್ತು ಗೋ ಸಂರಕ್ಷಣಾ ಕಾಯ್ದೆ ಮತ್ತು ಕಲಂ 11 ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.