ಬ್ರೇಕಿಂಗ್ ನ್ಯೂಸ್
23-02-26 11:36 am HK News Desk ಕ್ರೈಂ
ಕಾಸರಗೋಡು, ಫೆ.23: ಚಿನ್ನ ಕದ್ದಿದ್ದಾಳೆಂಬ ಆರೋಪದಿಂದ ಬೇಸತ್ತ ಎರಡು ಮಕ್ಕಳ ತಾಯಿ, ಗೃಹಿಣಿಯೊಬ್ಬಳು ಇಲಿಪಾಷಾಣ ಸೇವಿಸಿ ಸಾವಿಗೆ ಶರಣಾದ ಘಟನೆ ಅಡೂರು ಠಾಣೆ ವ್ಯಾಪ್ತಿಯ ನಾಲತ್ತಡ್ಕ ಎಂಬಲ್ಲಿ ನಡೆದಿದೆ. ಸಾವಿಗೂ ಮುನ್ನ ವಿಡಿಯೋ ಮಾಡಿದ್ದು, ತಾನೇನೂ ತಪ್ಪು ಮಾಡಿಲ್ಲ ಎಂದು ಪರಿ ಪರಿಯಾಗಿ ಬೇಡಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.
ನಾಲತ್ತಡ್ಕ ನಿವಾಸಿ ಜಸೀಲಾ (24) ಮೃತಪಟ್ಟ ಯುವತಿ. ಕಳೆದ ಭಾನುವಾರ ಫೆ.15ರಂದು ಜಸೀಲಾ ತನ್ನ ಮನೆಯಲ್ಲಿ ವಿಷ ಸೇವಿಸಿದ್ದು, ಆಬಳಿಕ ಕಾಸರಗೋಡಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದು ಫೆ.20ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಈಗ ವಿಡಿಯೋ ವೈರಲ್ ಆಗಿದ್ದು, ಪೊಲೀಸರ ನಡೆಯ ಬಗ್ಗೆಯೂ ಆರೋಪ ಕೇಳಿಬಂದಿದೆ. ಜಸೀಲಾ ಇಬ್ಬರು ಸಣ್ಣ ಮಕ್ಕಳನ್ನು ಹೊಂದಿದ್ದು ಕಳವು ಆರೋಪದಿಂದ ಬೇಸತ್ತು ಸಾವಿಗೆ ಶರಣಾಗಿದ್ದಾಳೆ.
ಜಸೀಲಾ ಅವರು ನೆರೆಮನೆಯ ಗೆಳತಿಯೊಂದಿಗೆ ಕೋಜಿಕ್ಕೋಡ್ ತೆರಳಿದ್ದರು. ಹಿಂದಿರುಗಿ ಬಂದಿದ್ದ ಸಂದರ್ಭದಲ್ಲಿ 9.5 ಪವನ್ ಚಿನ್ನದ ಸರ ಕಳವಾಗಿತ್ತು. ಜಸೀಲಾ ಜೊತೆಗೆ ತೆರಳಿದ್ದಾಗ ಕಳವಾಗಿದ್ದೆಂದು ಹೇಳಿ ಆ ಮನೆಯವರು ಆರೋಪ ಮಾಡಿದ್ದರು. ಇದರಂತೆ, ಅಡೂರು ಪೊಲೀಸರು ಜಸೀಲಾ ಮನೆಗೆ ಬಂದು ಶೋಧ ನಡೆಸಿದ್ದರು. ಅಲ್ಲದೆ, ಆಕೆಯನ್ನು ಠಾಣೆಗೆ ಕರೆಸಿ ತೀವ್ರ ವಿಚಾರಣೆ ನಡೆಸಿದ್ದರು. ಇದರಿಂದ ಜಸೀಲಾ ಮನೆಯವರು ತೀವ್ರ ನೊಂದಿದ್ದರು. ಜಸೀಲಾ ತಾನು ಕದ್ದಿಲ್ಲ ಎಂದು ಹೇಳಿದರೂ, ಆಕೆಯ ಗಂಡ ಮತ್ತು ಅತ್ತೆ ಈಕೆಯ ಬಗ್ಗೆಯೇ ಆರೋಪ ಮಾಡಿದ್ದರು.
ನಾನು ಚಿನ್ನ ಕದ್ದಿದ್ದಾಗಿ ಆರೋಪಿಸಿ ಪೊಲೀಸರು ಮನೆಯನ್ನು ಶೋಧ ಮಾಡಿದರು. ಇದರಿಂದ ನನ್ನ ಮನೆಯವರು ತೀವ್ರ ಬೇಸರಗೊಂಡಿದ್ದಾರೆ. ನಾನು ಕದ್ದಿದ್ದರೆ ಅಲ್ವಾ ಕೊಡೋದು. ನಾನು ಎಲ್ಲಿಂದ ಚಿನ್ನ ತಂದು ಕೊಡಲಿ. ನಾನು ಸತ್ತರೆ ಇದಕ್ಕೆ ಕಿರುಕುಳ ಕೊಟ್ಟವರನ್ನೇ ಶಿಕ್ಷಿಸಬೇಕು. ನಾನು ಕದ್ದಿಲ್ಲ ಅಂದರೂ ಕೇಳುತ್ತಿಲ್ಲ. ಪೊಲೀಸರು ನನ್ನನ್ನು ಯಾಕೆ ಪೀಡಿಸುತ್ತಿದ್ದಾರೆ ಎಂದು ಆಕೆ ವಿಡಿಯೋದಲ್ಲಿ ಅಲವತ್ತುಕೊಂಡಿದ್ದಾಳೆ.
ಜಸೀಲಾ ತಾಯಿ ಮಾಧ್ಯಮಕ್ಕೆ ಮಾತನಾಡಿದ್ದು ನನ್ನ ಮಗಳು ಖುರಾನ್ ಮೇಲೆ ಕೈಯಿಟ್ಟು ಹೇಳಿದರೂ ಆಕೆಯ ಗಂಡ ಮತ್ತು ಕುಟುಂಬದವರು ಕೂಡ ನಂಬಲಿಲ್ಲ. ಚಿನ್ನ ಕಳವಾಗಿದೆ ಎಂದು ಹೇಳಿದ ಮನೆಯವರು ನಮ್ಮ ಮನೆಗೆ ಬಂದು ಬೆದರಿಕೆ ಹಾಕಿದ್ದರು. ಇದರಿಂದಾಗಿ ಮಗಳು ತೀವ್ರ ನೊಂದುಕೊಂಡಿದ್ದಳು ಎಂದಿದ್ದಾರೆ. ಈ ಬಗ್ಗೆ ಜಸೀಲಾ ಮನೆಯವರು ವಿದ್ಯಾನಗರ ಠಾಣೆಗೆ ದೂರು ನೀಡಿದ್ದಾರೆ.
ಅಡೂರು ಪೊಲೀಸರು ಚಿನ್ನ ಕಳವು ಪ್ರಕರಣ ಸಂಬಂಧಿಸಿ ಜಸೀಲಾಳನ್ನು ಕರೆದು ವಿಚಾರಣೆ ನಡೆಸಿದ್ದರು. ಆನಂತರ ಸರಿಯಾದ ಸಾಕ್ಷ್ಯ ಸಿಕ್ಕಿಲ್ಲವೆಂದು ಹಿಂದಕ್ಕೆ ಕಳಿಸಿದ್ದರು. ಸದ್ಯಕ್ಕೆ ಪೊಲೀಸರು ಯುವತಿ ಸಾವಿನ ಬಗ್ಗೆ ಮತ್ತು ಚಿನ್ನ ಕಳವು ದೂರಿನ ಬಗ್ಗೆ ಪ್ರತ್ಯೇಕ ತನಿಖೆ ನಡೆಸುತ್ತಿದ್ದಾರೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 08:29 pm
HK News Staffer
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm